<p><strong>ಬೆಂಗಳೂರು:</strong> ‘ಜೆ.ಪಿ.ನಗರದ ಪುಟ್ಟೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೇ 25ರಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು’ ಎಂದು ಬಿಬಿಎಂಪಿ ಆಯುಕ್ತ ಸಿದ್ದಯ್ಯ ಹೇಳಿದರು.</p>.<p>ಪುಟ್ಟೇನಹಳ್ಳಿ ಜಂಕ್ಷನ್ ಸೇರಿದಂತೆ ಹಲವೆಡೆ ಶುಕ್ರವಾರ ಭೇಟಿ ನೀಡಿದ ಆಯುಕ್ತರು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.</p>.<p>‘ಅಂಡರ್ಪಾಸ್ ನಿರ್ಮಾಣ ಕೆಲಸ ಅಂತಿಮ ಹಂತದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕೃತವಾಗಿ ಉದ್ಘಾಟಿಸುವುದಿಲ್ಲ. ಆದರೆ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<p>‘ಕದಿರೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಅಗತ್ಯವಾದ 44 ಖಾಸಗಿ ಆಸ್ತಿಯನ್ನು ವಾರದೊಳಗೆ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಆಸ್ತಿದಾರರಿಗೆ ಪ್ರತಿ ಚದರ ಅಡಿಗೆ 3000 ರೂಪಾಯಿ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಇಲ್ಲಿನ ಆಸ್ತಿದಾರರಿಗೆ 3000 ರೂಪಾಯಿ ಪರಿಹಾರ ವಿತರಿಸುವ ಕುರಿತು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಸೋಮವಾರದಿಂದ ಪರಿಹಾರ ವಿತರಿಸುವ ಕಾರ್ಯ ಆರಂಭಿಸಿ ಭೂಮಿಯನ್ನು ವಶಪಡಿಸಿಕೊಳ್ಳಲಾಗುವುದು. ಮಾರ್ಚಿ 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಅಗತ್ಯವೆನಿಸಿದ ಸ್ಥಳಗಳಲ್ಲಿ ಸ್ವಯಂಚಾಲಿತ ಪಾದಚಾರಿ ಮೇಲುಸೇತುವೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪಾದಚಾರಿ ಸುರಂಗ ಮಾರ್ಗಗಳನ್ನು ಬಳಸಲು ಜನರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಸ್ವಯಂಚಾಲಿತ ಮೇಲು ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದ ಪಾದಚಾರಿಗಳಿಗೂ ಅನುಕೂಲವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜೆ.ಪಿ.ನಗರದ ಪುಟ್ಟೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೇ 25ರಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು’ ಎಂದು ಬಿಬಿಎಂಪಿ ಆಯುಕ್ತ ಸಿದ್ದಯ್ಯ ಹೇಳಿದರು.</p>.<p>ಪುಟ್ಟೇನಹಳ್ಳಿ ಜಂಕ್ಷನ್ ಸೇರಿದಂತೆ ಹಲವೆಡೆ ಶುಕ್ರವಾರ ಭೇಟಿ ನೀಡಿದ ಆಯುಕ್ತರು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.</p>.<p>‘ಅಂಡರ್ಪಾಸ್ ನಿರ್ಮಾಣ ಕೆಲಸ ಅಂತಿಮ ಹಂತದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಧಿಕೃತವಾಗಿ ಉದ್ಘಾಟಿಸುವುದಿಲ್ಲ. ಆದರೆ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<p>‘ಕದಿರೇನಹಳ್ಳಿ ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಅಗತ್ಯವಾದ 44 ಖಾಸಗಿ ಆಸ್ತಿಯನ್ನು ವಾರದೊಳಗೆ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಆಸ್ತಿದಾರರಿಗೆ ಪ್ರತಿ ಚದರ ಅಡಿಗೆ 3000 ರೂಪಾಯಿ ಪರಿಹಾರ ನೀಡಲಾಗುವುದು’ ಎಂದರು.</p>.<p>‘ಇಲ್ಲಿನ ಆಸ್ತಿದಾರರಿಗೆ 3000 ರೂಪಾಯಿ ಪರಿಹಾರ ವಿತರಿಸುವ ಕುರಿತು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಸೋಮವಾರದಿಂದ ಪರಿಹಾರ ವಿತರಿಸುವ ಕಾರ್ಯ ಆರಂಭಿಸಿ ಭೂಮಿಯನ್ನು ವಶಪಡಿಸಿಕೊಳ್ಳಲಾಗುವುದು. ಮಾರ್ಚಿ 31ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು.</p>.<p>‘ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಅಗತ್ಯವೆನಿಸಿದ ಸ್ಥಳಗಳಲ್ಲಿ ಸ್ವಯಂಚಾಲಿತ ಪಾದಚಾರಿ ಮೇಲುಸೇತುವೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪಾದಚಾರಿ ಸುರಂಗ ಮಾರ್ಗಗಳನ್ನು ಬಳಸಲು ಜನರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಸ್ವಯಂಚಾಲಿತ ಮೇಲು ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದ ಪಾದಚಾರಿಗಳಿಗೂ ಅನುಕೂಲವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>