<p><strong>ಕೊಪ್ಪಳ:</strong>ಬಾಬುಜಗಜೀವನ್ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ರ ಪ್ರತಿಮೆಗಳನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಜಿಲ್ಲಾಡಳಿತ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆಕ್ಷೇಪಿಸಿದ ದಲಿತ ಮುಖಂಡರು ಈ ಇಬ್ಬರು ನಾಯಕರ ಜಯಂತಿ ಆಚರಣೆ ಕುರಿತು ಚರ್ಚಿಸಲು ಕರೆದ ಸಭೆಯನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಮುಖ್ಯ ದ್ವಾರದ ಬಳಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು.<br /> <br /> ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದ ದಲಿತ ಮುಖಂಡರು, ಜಿಲ್ಲಾಡಳಿತವು ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿದರು.<br /> <br /> ಈ ಇಬ್ಬರು ಮಹಾನ್ನಾಯಕರ ಪುತ್ಥಳಿಗಳು ಸಿದ್ಧಗೊಂಡು 5 ವರ್ಷಗಳೇ ಕಳೆದಿವೆ. ಆದರೂ ಸದರಿ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮುಂದಾಗುತ್ತಿಲ್ಲ. ಇಲ್ಲಸಲ್ಲದ ನೆಪ ಹೇಳಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಬಾಬು ಜಗಜೀವನ್ರಾಮ್ ಹಾಗೂ ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಕೂಡಲೇ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು. ಈ ಇಬ್ಬರು ನಾಯಕ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಮತ್ತೊಮ್ಮೆ ಸಭೆ ಕರೆಯಬೇಕು ಎಂದು ಆಗ್ರಹಿಸಿದರು. ತಪ್ಪಿದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.<br /> <br /> ದಲಿತರ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಶೇ 22.75ರ ಅನುದಾನವು ಬಳಕೆಯಾಗಿಲ್ಲ. ಇದರಿಂದ ದಲಿತ ಸಮುದಾಯಕ್ಕೆ ಸಿಗಬೇಕಾದ ಅನುದಾನ ಸಿಗುತ್ತಿಲ್ಲ ಎಂದೂ ದೂರಿದರು.<br /> <br /> ಮುಖಂಡರಾದ ಡಾ.ಜ್ಞಾನ ಸುಂದರ, ಸಿದ್ದಪ್ಪ ಹೊಸಮನಿ, ಸಿದ್ದೇಶ ಪೂಜಾರ, ಆನಂದ ಭಂಡಾರಿ, ಹಾಲೇಶ ಕಂದಾರಿ, ಕಾಶೆಪ್ಪ ಅಳ್ಳಳ್ಳಿ, ಯಲ್ಲಪ್ಪ ಬೆಲ್ಲದ, ಸಿದ್ದಪ್ಪ ಕಿಡದಾಳ, ಶಿವು ಹಟ್ಟಿ, ಪ್ರಭು ಬೋಚನಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong>ಬಾಬುಜಗಜೀವನ್ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ರ ಪ್ರತಿಮೆಗಳನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಜಿಲ್ಲಾಡಳಿತ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆಕ್ಷೇಪಿಸಿದ ದಲಿತ ಮುಖಂಡರು ಈ ಇಬ್ಬರು ನಾಯಕರ ಜಯಂತಿ ಆಚರಣೆ ಕುರಿತು ಚರ್ಚಿಸಲು ಕರೆದ ಸಭೆಯನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಮುಖ್ಯ ದ್ವಾರದ ಬಳಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು.<br /> <br /> ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದ ದಲಿತ ಮುಖಂಡರು, ಜಿಲ್ಲಾಡಳಿತವು ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿದರು.<br /> <br /> ಈ ಇಬ್ಬರು ಮಹಾನ್ನಾಯಕರ ಪುತ್ಥಳಿಗಳು ಸಿದ್ಧಗೊಂಡು 5 ವರ್ಷಗಳೇ ಕಳೆದಿವೆ. ಆದರೂ ಸದರಿ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮುಂದಾಗುತ್ತಿಲ್ಲ. ಇಲ್ಲಸಲ್ಲದ ನೆಪ ಹೇಳಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಬಾಬು ಜಗಜೀವನ್ರಾಮ್ ಹಾಗೂ ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಕೂಡಲೇ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು. ಈ ಇಬ್ಬರು ನಾಯಕ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಮತ್ತೊಮ್ಮೆ ಸಭೆ ಕರೆಯಬೇಕು ಎಂದು ಆಗ್ರಹಿಸಿದರು. ತಪ್ಪಿದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.<br /> <br /> ದಲಿತರ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಶೇ 22.75ರ ಅನುದಾನವು ಬಳಕೆಯಾಗಿಲ್ಲ. ಇದರಿಂದ ದಲಿತ ಸಮುದಾಯಕ್ಕೆ ಸಿಗಬೇಕಾದ ಅನುದಾನ ಸಿಗುತ್ತಿಲ್ಲ ಎಂದೂ ದೂರಿದರು.<br /> <br /> ಮುಖಂಡರಾದ ಡಾ.ಜ್ಞಾನ ಸುಂದರ, ಸಿದ್ದಪ್ಪ ಹೊಸಮನಿ, ಸಿದ್ದೇಶ ಪೂಜಾರ, ಆನಂದ ಭಂಡಾರಿ, ಹಾಲೇಶ ಕಂದಾರಿ, ಕಾಶೆಪ್ಪ ಅಳ್ಳಳ್ಳಿ, ಯಲ್ಲಪ್ಪ ಬೆಲ್ಲದ, ಸಿದ್ದಪ್ಪ ಕಿಡದಾಳ, ಶಿವು ಹಟ್ಟಿ, ಪ್ರಭು ಬೋಚನಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>