<p><strong>ರುದ್ರಪ್ರಯಾಗ (ಪಿಟಿಐ):</strong> ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಆದರೆ, ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಅನೇಕ ಮುಖಂಡರು ಹೊಸದಾಗಿ ಅಸ್ತಿತ್ವಕ್ಕೆ ಬಂದ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವುದರಿಂದ, ಅಭ್ಯರ್ಥಿಗಳು ಹೊರಗಿನವರು ಎಂಬ ಭಾವನೆ ಜನರಲ್ಲಿ ಮೂಡಿದೆ.<br /> <br /> ಇಂತಹ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಕೂಡ ಸೇರಿದ್ದಾರೆ. ಬಿಜೆಪಿ ಪ್ರಚಾರದ ನೇತೃತ್ವ ವಹಿಸಿರುವ ಖಂಡೂರಿ ಕಳೆದ ಬಾರಿ ಧುಮಾಕೋಟ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಧುಮಾಕೋಟ್ನ ಹಲವು ಭಾಗಗಳನ್ನು ಅನ್ಯ ಕ್ಷೇತ್ರದಲ್ಲಿ ವಿಲೀನಗೊಳಿಸಿರುವುದರಿಂದ ಖಂಡೂರಿ ಪೊದಾರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.<br /> <br /> `ಮುಖ್ಯಮಂತ್ರಿಯಾಗಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಗೊತ್ತಿದೆ. ಹೀಗಾಗಿ ಗೆಲ್ಲುವ ವಿಶ್ವಾಸ ಇದೆ~ ಎಂದು ಅವರು ಹೇಳಿದ್ದಾರೆ.<br /> <br /> ಪ್ರಮುಖ ಕಾಂಗ್ರೆಸ್ ಮುಖಂಡ ಹರಕ್ ಸಿಂಗ್ ರಾವತ್ ಕೂಡ ಈ ಹಿಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಬದಲಾಗಿ ರುದ್ರಪ್ರಯಾಗ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಥಾಲಿಸೆನ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಜಿ ಮುಖ್ಯಮಂತ್ರಿ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೂ ಗೆಲುವಿಗೆ ಪ್ರಯಾಸಪಡಬೇಕಾಗಿದೆ. ಏಕೆಂದರೆ ಕ್ಷೇತ್ರ ಪುನರ್ವಿಂಗಡಣೆಗೂ ಮುನ್ನ ಈ ಕ್ಷೇತ್ರ ಶ್ರೀನಗರ ಮತಕ್ಷೇತ್ರದ ಭಾಗವಾಗಿತ್ತು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಯಶಪಾಲ್ ಆರ್ಯ ಮುಕ್ತೇಶ್ವರ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಸಾಧಿಸಿದ್ದರು. ಆದರೆ, ಈಗ ಅವರು ಅನಿವಾರ್ಯವಾಗಿ ಬಜಪುರ್ ಕ್ಷೇತ್ರದಿಂದ ಸ್ಪರ್ಧಿಸಬೇಕಾಗಿ ಬಂದಿದೆ.<br /> <strong><br /> ಪಕ್ಷೇತರರದ್ದೇ ಅಡ್ಡಿ</strong><br /> ಉತ್ತರಾಖಂಡ ಚುನಾವಣೆಯಲ್ಲಿ ಸಾಮಾನ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇರುತ್ತದೆ. ಆದರೆ ಈ ಬಾರಿ ಬಂಡಾಯ ಮತ್ತು ಪಕ್ಷೇತರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಲೆಕ್ಕಾಚಾರ ಬದಲಾಗುವ ಸಾಧ್ಯತೆ ಇರುವುದರಿಂದ ಎರಡೂ ಪಕ್ಷಗಳಲ್ಲಿ ತಳಮಳ ಉಂಟಾಗಿದೆ.<br /> <br /> ರಾಜ್ಯದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 800 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕೆಲ ಕ್ಷೇತ್ರಗಳಲ್ಲಂತೂ ಬಂಡಾಯ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರುದ್ರಪ್ರಯಾಗ (ಪಿಟಿಐ):</strong> ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಆದರೆ, ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಅನೇಕ ಮುಖಂಡರು ಹೊಸದಾಗಿ ಅಸ್ತಿತ್ವಕ್ಕೆ ಬಂದ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವುದರಿಂದ, ಅಭ್ಯರ್ಥಿಗಳು ಹೊರಗಿನವರು ಎಂಬ ಭಾವನೆ ಜನರಲ್ಲಿ ಮೂಡಿದೆ.<br /> <br /> ಇಂತಹ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಕೂಡ ಸೇರಿದ್ದಾರೆ. ಬಿಜೆಪಿ ಪ್ರಚಾರದ ನೇತೃತ್ವ ವಹಿಸಿರುವ ಖಂಡೂರಿ ಕಳೆದ ಬಾರಿ ಧುಮಾಕೋಟ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಧುಮಾಕೋಟ್ನ ಹಲವು ಭಾಗಗಳನ್ನು ಅನ್ಯ ಕ್ಷೇತ್ರದಲ್ಲಿ ವಿಲೀನಗೊಳಿಸಿರುವುದರಿಂದ ಖಂಡೂರಿ ಪೊದಾರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.<br /> <br /> `ಮುಖ್ಯಮಂತ್ರಿಯಾಗಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಗೊತ್ತಿದೆ. ಹೀಗಾಗಿ ಗೆಲ್ಲುವ ವಿಶ್ವಾಸ ಇದೆ~ ಎಂದು ಅವರು ಹೇಳಿದ್ದಾರೆ.<br /> <br /> ಪ್ರಮುಖ ಕಾಂಗ್ರೆಸ್ ಮುಖಂಡ ಹರಕ್ ಸಿಂಗ್ ರಾವತ್ ಕೂಡ ಈ ಹಿಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಬದಲಾಗಿ ರುದ್ರಪ್ರಯಾಗ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಥಾಲಿಸೆನ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಜಿ ಮುಖ್ಯಮಂತ್ರಿ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೂ ಗೆಲುವಿಗೆ ಪ್ರಯಾಸಪಡಬೇಕಾಗಿದೆ. ಏಕೆಂದರೆ ಕ್ಷೇತ್ರ ಪುನರ್ವಿಂಗಡಣೆಗೂ ಮುನ್ನ ಈ ಕ್ಷೇತ್ರ ಶ್ರೀನಗರ ಮತಕ್ಷೇತ್ರದ ಭಾಗವಾಗಿತ್ತು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಯಶಪಾಲ್ ಆರ್ಯ ಮುಕ್ತೇಶ್ವರ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಸಾಧಿಸಿದ್ದರು. ಆದರೆ, ಈಗ ಅವರು ಅನಿವಾರ್ಯವಾಗಿ ಬಜಪುರ್ ಕ್ಷೇತ್ರದಿಂದ ಸ್ಪರ್ಧಿಸಬೇಕಾಗಿ ಬಂದಿದೆ.<br /> <strong><br /> ಪಕ್ಷೇತರರದ್ದೇ ಅಡ್ಡಿ</strong><br /> ಉತ್ತರಾಖಂಡ ಚುನಾವಣೆಯಲ್ಲಿ ಸಾಮಾನ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇರುತ್ತದೆ. ಆದರೆ ಈ ಬಾರಿ ಬಂಡಾಯ ಮತ್ತು ಪಕ್ಷೇತರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಲೆಕ್ಕಾಚಾರ ಬದಲಾಗುವ ಸಾಧ್ಯತೆ ಇರುವುದರಿಂದ ಎರಡೂ ಪಕ್ಷಗಳಲ್ಲಿ ತಳಮಳ ಉಂಟಾಗಿದೆ.<br /> <br /> ರಾಜ್ಯದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 800 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕೆಲ ಕ್ಷೇತ್ರಗಳಲ್ಲಂತೂ ಬಂಡಾಯ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>