<p><strong>ಅರಸೀಕೆರೆ: </strong>ಎಸ್ಎಫ್ಸಿ ಮುಕ್ತನಿಧಿ ಅನುದಾನ ಶೇ 7.25ರಡಿ ಬಡವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುವ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸದೇ ಸಂಪನ್ಮೂಲ ಸಂಯೋಜನಾಧಿಕಾರಿ ಪರಮೇಶ್ವರಪ್ಪ ಹಣ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಸಮಿತಿ ರಚಿಸಲು ಶುಕ್ರವಾರ ನಡೆದ ಪುರಸಭೆ ವಿಶೇಷ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. <br /> <br /> ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷ ಎಂ. ಶಮೀವುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಪಿ. ದೇವಕುಮಾರ್ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳಿಗೆ ಬೆಲೆ ಇಲ್ಲದಂತಾಗಿದೆ. <br /> <br /> ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮರ್ಪಕವಾಗಿಲ್ಲ, ಅಲ್ಲದೆ ಫಲಾನುಭವಿಗಳನ್ನು ಗುರುತಿಸುವಾಗ ಸದಸ್ಯರನ್ನು ಗಣನೆಗೆ ತೆಗೆದುಕೊಂಡಿಲ್ಲ. ಏಕಪಕ್ಷೀಯ ನಿರ್ಣಯ ಕೈಗೊಂಡು ಜನಪ್ರತಿನಿಧಿಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಜೆಡಿಎಸ್ ಸದಸ್ಯ ಲೋಕೇಶ್ ದನಿಗೂಡಿಸಿದರು. <br /> <br /> ಶಾಸಕ ಕೆ.ಎಂ. ಶಿವಲಿಂಗೇಗೌಡ ಪ್ರತಿಕ್ರಿಯೆ ನೀಡಿ, ಚುನಾಯಿತ ಪ್ರತಿನಿಧಿಗಳ ಕಡೆಗಣನೆ ಸಲ್ಲದು. ಫಲಾನುಭವಿಗಳ ಆಯ್ಕೆ ವೇಳೆ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳಬೇಕು. ಸದಸ್ಯರ ಹಕ್ಕು ಮೊಟುಕುಗೊಳಿಸಿರುವ ಈ ವಿಷಯ ಗಂಭೀರವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂಬ ಸದಸ್ಯರು ಸಲಹೆಗೆ ಒಪ್ಪಿಗೆ ನೀಡಿದರು. <br /> <br /> <strong>ಉದ್ಯಾನವನ ನಿರ್ಮಾಣ:</strong> ಹಳೆ ಪುರಸಭೆ ಬದಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಇರುವ ಖಾಲಿ ಜಾಗದಲ್ಲಿ ಉದ್ಯಾನವನ ನಿರ್ಮಿಸಬೇಕು ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತು. ಇದಕ್ಕೆ ಮೊದಲು ಬಿಜೆಪಿ ಸದಸ್ಯರು ವಿರೋಧಿಸಿದರೂ ಕೊನೆಯಲ್ಲಿ ಶಾಸಕರ ಸಲಹೆಗೆ ಎಲ್ಲ ಸದಸ್ಯರು ಧ್ವನಿ ಮತದಿಂದ ಒಪ್ಪಿಗೆ ನೀಡಿದರು. <br /> <br /> ಈ ವೃತ್ತದಲ್ಲಿ ದಲಿತ ಒಕ್ಕೂಟ ಮತ್ತು ಕೆಲವು ಪ್ರಗತಿಪರ ಸಂಘಟನೆಗಳು ಉದ್ಯಾನವನ ನಿರ್ಮಿಸಬೇಕು ಎಂದು ಒತ್ತಾಯಿಸುತ್ತಿವೆ. ಆದರೂ ಯಾರದೋ ಒತ್ತಡಕ್ಕೆ ಪುರಸಭಾ ಆಡಳಿತ ಮಾತ್ರ ಮೌನದಿಂದಿದೆ ಎಂದು ದೇವಕುಮಾರ್, ಲೋಕೇಶ್ ಆರೋಪಿಸಿದರು. ಸದಸ್ಯರ ಮಾತಿಗೆ ಪ್ರತಿಕ್ರಿಯಿಸಿದ ಶಿವಲಿಂಗೇಗೌಡ ಪಟ್ಟಣದಲ್ಲಿ ಉದ್ಯಾನವನದ ಕೊರತೆಯಿದೆ.<br /> <br /> ಉದ್ಯಾನವನ ನಿರ್ವಹಣೆಯನ್ನು ಯಾವುದೇ ಸಂಘ-ಸಂಸ್ಥೆಗಳಿಗೆ ನೀಡದೇ ಪುರಸಭಾ ಆಡಳಿತವೇ ನಿರ್ವಹಿಸಿದರೆ ಇನ್ನು ಉತ್ತಮವಾಗಿತ್ತದೆ ಎಂದು ಹೇಳಿದಾಗ ಎಲ್ಲರೂ ಒಪ್ಪಿಗೆ ನೀಡಿದರು. ಬಿಜೆಪಿ ನಾಮ ನಿರ್ದೇಶಿತ ಸದಸ್ಯರಾದ ಎ.ಎಲ್. ನಾರಾಯಣ, ಶಂಕರಯ್ಯ, ಆಡಳಿತ ಪಕ್ಷದ ಆನಂದ್ಪೈ,ಗಣೇಶ್, ಕಂಠಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ: </strong>ಎಸ್ಎಫ್ಸಿ ಮುಕ್ತನಿಧಿ ಅನುದಾನ ಶೇ 7.25ರಡಿ ಬಡವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡುವ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸದೇ ಸಂಪನ್ಮೂಲ ಸಂಯೋಜನಾಧಿಕಾರಿ ಪರಮೇಶ್ವರಪ್ಪ ಹಣ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಸಮಿತಿ ರಚಿಸಲು ಶುಕ್ರವಾರ ನಡೆದ ಪುರಸಭೆ ವಿಶೇಷ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. <br /> <br /> ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷ ಎಂ. ಶಮೀವುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಪಿ. ದೇವಕುಮಾರ್ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳಿಗೆ ಬೆಲೆ ಇಲ್ಲದಂತಾಗಿದೆ. <br /> <br /> ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮರ್ಪಕವಾಗಿಲ್ಲ, ಅಲ್ಲದೆ ಫಲಾನುಭವಿಗಳನ್ನು ಗುರುತಿಸುವಾಗ ಸದಸ್ಯರನ್ನು ಗಣನೆಗೆ ತೆಗೆದುಕೊಂಡಿಲ್ಲ. ಏಕಪಕ್ಷೀಯ ನಿರ್ಣಯ ಕೈಗೊಂಡು ಜನಪ್ರತಿನಿಧಿಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಜೆಡಿಎಸ್ ಸದಸ್ಯ ಲೋಕೇಶ್ ದನಿಗೂಡಿಸಿದರು. <br /> <br /> ಶಾಸಕ ಕೆ.ಎಂ. ಶಿವಲಿಂಗೇಗೌಡ ಪ್ರತಿಕ್ರಿಯೆ ನೀಡಿ, ಚುನಾಯಿತ ಪ್ರತಿನಿಧಿಗಳ ಕಡೆಗಣನೆ ಸಲ್ಲದು. ಫಲಾನುಭವಿಗಳ ಆಯ್ಕೆ ವೇಳೆ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳಬೇಕು. ಸದಸ್ಯರ ಹಕ್ಕು ಮೊಟುಕುಗೊಳಿಸಿರುವ ಈ ವಿಷಯ ಗಂಭೀರವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂಬ ಸದಸ್ಯರು ಸಲಹೆಗೆ ಒಪ್ಪಿಗೆ ನೀಡಿದರು. <br /> <br /> <strong>ಉದ್ಯಾನವನ ನಿರ್ಮಾಣ:</strong> ಹಳೆ ಪುರಸಭೆ ಬದಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಇರುವ ಖಾಲಿ ಜಾಗದಲ್ಲಿ ಉದ್ಯಾನವನ ನಿರ್ಮಿಸಬೇಕು ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತು. ಇದಕ್ಕೆ ಮೊದಲು ಬಿಜೆಪಿ ಸದಸ್ಯರು ವಿರೋಧಿಸಿದರೂ ಕೊನೆಯಲ್ಲಿ ಶಾಸಕರ ಸಲಹೆಗೆ ಎಲ್ಲ ಸದಸ್ಯರು ಧ್ವನಿ ಮತದಿಂದ ಒಪ್ಪಿಗೆ ನೀಡಿದರು. <br /> <br /> ಈ ವೃತ್ತದಲ್ಲಿ ದಲಿತ ಒಕ್ಕೂಟ ಮತ್ತು ಕೆಲವು ಪ್ರಗತಿಪರ ಸಂಘಟನೆಗಳು ಉದ್ಯಾನವನ ನಿರ್ಮಿಸಬೇಕು ಎಂದು ಒತ್ತಾಯಿಸುತ್ತಿವೆ. ಆದರೂ ಯಾರದೋ ಒತ್ತಡಕ್ಕೆ ಪುರಸಭಾ ಆಡಳಿತ ಮಾತ್ರ ಮೌನದಿಂದಿದೆ ಎಂದು ದೇವಕುಮಾರ್, ಲೋಕೇಶ್ ಆರೋಪಿಸಿದರು. ಸದಸ್ಯರ ಮಾತಿಗೆ ಪ್ರತಿಕ್ರಿಯಿಸಿದ ಶಿವಲಿಂಗೇಗೌಡ ಪಟ್ಟಣದಲ್ಲಿ ಉದ್ಯಾನವನದ ಕೊರತೆಯಿದೆ.<br /> <br /> ಉದ್ಯಾನವನ ನಿರ್ವಹಣೆಯನ್ನು ಯಾವುದೇ ಸಂಘ-ಸಂಸ್ಥೆಗಳಿಗೆ ನೀಡದೇ ಪುರಸಭಾ ಆಡಳಿತವೇ ನಿರ್ವಹಿಸಿದರೆ ಇನ್ನು ಉತ್ತಮವಾಗಿತ್ತದೆ ಎಂದು ಹೇಳಿದಾಗ ಎಲ್ಲರೂ ಒಪ್ಪಿಗೆ ನೀಡಿದರು. ಬಿಜೆಪಿ ನಾಮ ನಿರ್ದೇಶಿತ ಸದಸ್ಯರಾದ ಎ.ಎಲ್. ನಾರಾಯಣ, ಶಂಕರಯ್ಯ, ಆಡಳಿತ ಪಕ್ಷದ ಆನಂದ್ಪೈ,ಗಣೇಶ್, ಕಂಠಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>