<p>ಹಾಸನ: ನಗರದ ಹುಣಸಿನಕೆರೆ ಬಡಾವಣೆಯಲ್ಲಿ ನಗರಸಭೆಯ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವೊಂದನ್ನು ಗುರುವಾರ ಬೆಳಿಗ್ಗೆ ನಗರಸಭೆ ಅಧಿಕಾರಿಗಳು ತೆರವು ಮಾಡಿದ್ದಾರೆ.<br /> <br /> ಈ ಕಟ್ಟಡ ಹಲವು ವರ್ಷಗಳ ಹಿಂದೆಯೇ ನಿರ್ಮಾಣವಾಗ್ದ್ದಿದು, ಒಂದು ಭಾಗವನ್ನು ಸ್ತ್ರೀಶಕ್ತಿ ಸಂಘವೊಂದಕ್ಕೆ ಬಾಡಿಗೆಗೆ ನೀಡಲಾಗಿತ್ತು. ಇನ್ನೊಂದು ಭಾಗವನ್ನು ಗೋದಾಮಿನಂತೆ ಬಳಸಿಕೊಳ್ಳಲಾಗುತ್ತಿತ್ತು.<br /> <br /> ಗುರುವಾರ ಬೆಳಿಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ಬಂದಿದ್ದ ನಗರಸಭೆಯ ಸಿಬ್ಬಂದಿ ಕಟ್ಟಡವನ್ನು ನೆಲಸಮ ಮಾಡಿದ್ದಾರೆ. `ವಾರ್ಡ್ನ ಸದಸ್ಯ ಬಂಗಾರಿ ಮಂಜು (ಬಿಜೆಪಿ) ಅವರೇ ಅಕ್ರಮವಾಗಿ ಈ ಕಟ್ಟಡ ನಿರ್ಮಿಸಿ ಬಾಡಿಗೆಗೆ ಕೊಟ್ಟಿದ್ದರು~ ಎಂದು ಸ್ಥಳೀಯರು ನುಡಿದಿದ್ದಾರೆ.<br /> <br /> ಬುಧವಾರ ಕಾಂಗ್ರೆಸ್ ಸದಸ್ಯ ಯಶವಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ನಗರಸಭೆಯ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಯಶವಂತ್ ಜತೆಯಲ್ಲಿ ಬಂಗಾರಿ ಮಂಜು ಅವರೂ ಪಾಲ್ಗೊಂಡು, ಅವರೂ ನಗರಸಭೆಯ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ನಗರಸಭೆ ವಿರುದ್ಧ ಆರೋಪ ಮಾಡಿದ ಮರುದಿನ ಮುಂಜಾನೆಯೇ ಈ ಕಟ್ಟಡ ನೆಲಸಮ ಮಾಡಿದ ಘಟನೆಗಳಿಗೆ ಈಗ ಸಂಬಂಧ ಕಲ್ಪಿಸಲಾಗುತ್ತಿದೆ.<br /> <br /> ಗುರುವಾರ ಕಟ್ಟಡ ನೆಲಸಮವಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅಧ್ಯಕ್ಷ ಶಂಕರ್, `ಪ್ರಭಾವಿ ವ್ಯಕ್ತಿಯೊಬ್ಬರು ಆ ಕಟ್ಟಡ ನಿರ್ಮಿಸಿದ್ದರು. ಅಕ್ರಮ ಕಟ್ಟಡವಾಗಿರುವುದರಿಂದ ನೆಲಸಮ ಮಾಡಿದ್ದೇವೆ~ ಎಂದಿದ್ದಾರೆ. ಬಂಗಾರಿ ಮಂಜು ಅವರ ಹೆಸರನ್ನು ಉಲ್ಲೇಖಿಸದೆ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನಗರದ ಹುಣಸಿನಕೆರೆ ಬಡಾವಣೆಯಲ್ಲಿ ನಗರಸಭೆಯ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡವೊಂದನ್ನು ಗುರುವಾರ ಬೆಳಿಗ್ಗೆ ನಗರಸಭೆ ಅಧಿಕಾರಿಗಳು ತೆರವು ಮಾಡಿದ್ದಾರೆ.<br /> <br /> ಈ ಕಟ್ಟಡ ಹಲವು ವರ್ಷಗಳ ಹಿಂದೆಯೇ ನಿರ್ಮಾಣವಾಗ್ದ್ದಿದು, ಒಂದು ಭಾಗವನ್ನು ಸ್ತ್ರೀಶಕ್ತಿ ಸಂಘವೊಂದಕ್ಕೆ ಬಾಡಿಗೆಗೆ ನೀಡಲಾಗಿತ್ತು. ಇನ್ನೊಂದು ಭಾಗವನ್ನು ಗೋದಾಮಿನಂತೆ ಬಳಸಿಕೊಳ್ಳಲಾಗುತ್ತಿತ್ತು.<br /> <br /> ಗುರುವಾರ ಬೆಳಿಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ಬಂದಿದ್ದ ನಗರಸಭೆಯ ಸಿಬ್ಬಂದಿ ಕಟ್ಟಡವನ್ನು ನೆಲಸಮ ಮಾಡಿದ್ದಾರೆ. `ವಾರ್ಡ್ನ ಸದಸ್ಯ ಬಂಗಾರಿ ಮಂಜು (ಬಿಜೆಪಿ) ಅವರೇ ಅಕ್ರಮವಾಗಿ ಈ ಕಟ್ಟಡ ನಿರ್ಮಿಸಿ ಬಾಡಿಗೆಗೆ ಕೊಟ್ಟಿದ್ದರು~ ಎಂದು ಸ್ಥಳೀಯರು ನುಡಿದಿದ್ದಾರೆ.<br /> <br /> ಬುಧವಾರ ಕಾಂಗ್ರೆಸ್ ಸದಸ್ಯ ಯಶವಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ನಗರಸಭೆಯ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಯಶವಂತ್ ಜತೆಯಲ್ಲಿ ಬಂಗಾರಿ ಮಂಜು ಅವರೂ ಪಾಲ್ಗೊಂಡು, ಅವರೂ ನಗರಸಭೆಯ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ನಗರಸಭೆ ವಿರುದ್ಧ ಆರೋಪ ಮಾಡಿದ ಮರುದಿನ ಮುಂಜಾನೆಯೇ ಈ ಕಟ್ಟಡ ನೆಲಸಮ ಮಾಡಿದ ಘಟನೆಗಳಿಗೆ ಈಗ ಸಂಬಂಧ ಕಲ್ಪಿಸಲಾಗುತ್ತಿದೆ.<br /> <br /> ಗುರುವಾರ ಕಟ್ಟಡ ನೆಲಸಮವಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅಧ್ಯಕ್ಷ ಶಂಕರ್, `ಪ್ರಭಾವಿ ವ್ಯಕ್ತಿಯೊಬ್ಬರು ಆ ಕಟ್ಟಡ ನಿರ್ಮಿಸಿದ್ದರು. ಅಕ್ರಮ ಕಟ್ಟಡವಾಗಿರುವುದರಿಂದ ನೆಲಸಮ ಮಾಡಿದ್ದೇವೆ~ ಎಂದಿದ್ದಾರೆ. ಬಂಗಾರಿ ಮಂಜು ಅವರ ಹೆಸರನ್ನು ಉಲ್ಲೇಖಿಸದೆ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>