<p>ಬೆಂಗಳೂರು: ‘ಕೆಳಜಾತಿ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳ ಪ್ರಸಿದ್ಧ ವ್ಯಕ್ತಿಗಳನ್ನು ಮೇಲ್ಜಾತಿಗೆ ಸೇರಿದವರು ಎಂದು ಬಿಂಬಿಸುವ ಕೆಲಸವಾಗುತ್ತಿದೆ’ ಎಂದು ಭಾರತೀಯ ವಾಲ್ಮೀಕಿ ಧರ್ಮ ಸಮಾಜದ ರಾಜ್ಯಾಧ್ಯಕ್ಷ ಸಂದೇಶ್ ಆರೋಪಿಸಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಳಜಾತಿಗಳಲ್ಲಿ, ಬೇಡ ಸಮುದಾಯದಲ್ಲಿ ಮಹನೀಯರು ಜನಿಸಬಾರದೆ? ವಾಲ್ಮೀಕಿ ಬ್ರಾಹ್ಮಣ ಎನ್ನುವುದಕ್ಕೆ ಆಧಾರವೇನು?<br /> <br /> ಇದು ಶೋಷಿತರಿಗೆ ಜ್ಞಾನವನ್ನು ನಿರಾಕರಿಸುತ್ತಿರುವ ಮತ್ತೊಂದು ವಿಧಾನ’ ಎಂದರು.<br /> ‘ಅಂಕಣಕಾರ ಡಾ.ಕೆ.ಎಸ್. ನಾರಾಯಣಚಾರ್ಯ ಅವರು ಬರೆದಿರುವ ‘ವಾಲ್ಮೀಕಿ ಯಾರು?’ ಪುಸ್ತಕದಲ್ಲಿ ವಾಲ್ಮೀಕಿಯನ್ನು ಬ್ರಾಹ್ಮಣ ಜಾತಿಯ ಮಗು, ನದಿಯ ಬಳಿಯಿಂದ ಮಗುವನ್ನು ಹದ್ದು ಹೊತ್ತುಕೊಂಡು ಹೋಗಿ ಬೇಡರ ಬಳಿ ಬಿಟ್ಟಿತು ಎಂದು ಬರೆದಿದ್ದಾರೆ. ಇದನ್ನು ನಂಬಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.<br /> <br /> ಸಂಘಟನೆಯ ಸದಸ್ಯ ದೇವರಾಜ್ ಮಾತನಾಡಿ ‘ಸಮರ್ಥ ಆಧಾರಗಳೊಂದಿಗೆ ಚರ್ಚೆಗೆ ಬರುವುದಾದರೆ ನಾವು ಚರ್ಚೆಗೆ ಸಿದ್ಧರಿದ್ದೇವೆ.<br /> ಅದರ ಹೊರತಾಗಿ ಪುರಾಣಗಳನ್ನು ತಿರುಚುವ ಕೆಲಸ ಮಾಡಬಾರದು. ಸರ್ಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ದೇವರಾಜ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೆಳಜಾತಿ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳ ಪ್ರಸಿದ್ಧ ವ್ಯಕ್ತಿಗಳನ್ನು ಮೇಲ್ಜಾತಿಗೆ ಸೇರಿದವರು ಎಂದು ಬಿಂಬಿಸುವ ಕೆಲಸವಾಗುತ್ತಿದೆ’ ಎಂದು ಭಾರತೀಯ ವಾಲ್ಮೀಕಿ ಧರ್ಮ ಸಮಾಜದ ರಾಜ್ಯಾಧ್ಯಕ್ಷ ಸಂದೇಶ್ ಆರೋಪಿಸಿದರು.<br /> <br /> ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಳಜಾತಿಗಳಲ್ಲಿ, ಬೇಡ ಸಮುದಾಯದಲ್ಲಿ ಮಹನೀಯರು ಜನಿಸಬಾರದೆ? ವಾಲ್ಮೀಕಿ ಬ್ರಾಹ್ಮಣ ಎನ್ನುವುದಕ್ಕೆ ಆಧಾರವೇನು?<br /> <br /> ಇದು ಶೋಷಿತರಿಗೆ ಜ್ಞಾನವನ್ನು ನಿರಾಕರಿಸುತ್ತಿರುವ ಮತ್ತೊಂದು ವಿಧಾನ’ ಎಂದರು.<br /> ‘ಅಂಕಣಕಾರ ಡಾ.ಕೆ.ಎಸ್. ನಾರಾಯಣಚಾರ್ಯ ಅವರು ಬರೆದಿರುವ ‘ವಾಲ್ಮೀಕಿ ಯಾರು?’ ಪುಸ್ತಕದಲ್ಲಿ ವಾಲ್ಮೀಕಿಯನ್ನು ಬ್ರಾಹ್ಮಣ ಜಾತಿಯ ಮಗು, ನದಿಯ ಬಳಿಯಿಂದ ಮಗುವನ್ನು ಹದ್ದು ಹೊತ್ತುಕೊಂಡು ಹೋಗಿ ಬೇಡರ ಬಳಿ ಬಿಟ್ಟಿತು ಎಂದು ಬರೆದಿದ್ದಾರೆ. ಇದನ್ನು ನಂಬಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.<br /> <br /> ಸಂಘಟನೆಯ ಸದಸ್ಯ ದೇವರಾಜ್ ಮಾತನಾಡಿ ‘ಸಮರ್ಥ ಆಧಾರಗಳೊಂದಿಗೆ ಚರ್ಚೆಗೆ ಬರುವುದಾದರೆ ನಾವು ಚರ್ಚೆಗೆ ಸಿದ್ಧರಿದ್ದೇವೆ.<br /> ಅದರ ಹೊರತಾಗಿ ಪುರಾಣಗಳನ್ನು ತಿರುಚುವ ಕೆಲಸ ಮಾಡಬಾರದು. ಸರ್ಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ದೇವರಾಜ್ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>