<p><strong>ಬೆಂಗಳೂರು:</strong> ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ರೂಪದರ್ಶಿ ಪೂನಂ ಪಾಂಡೆ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅ.31ರಂದು ವಿಚಾರಣೆಗೆ ಹಾಜರಾಗುವಂತೆ ನಗರದ ಆರನೇ ಎಸಿಎಂಎಂ ನ್ಯಾಯಾಲಯವು ಪೂನಂಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.<br /> <br /> `2011ರ ವಿಶ್ವಕಪ್ ಕ್ರಿಕೆಟ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಪಾಕಿಸ್ತಾನ ತಂಡದ ವಿರುದ್ಧ ಜಯಗಳಿಸಿದ್ದ ಸಂದರ್ಭದಲ್ಲಿ ಪೂನಂ ಪಾಂಡೆ ಅವರು ನಗ್ನರಾಗಿ ವಿಷ್ಣು ದೇವರ ಭಾವಚಿತ್ರ ಹಿಡಿದು ಫೋಟೊ ತೆಗೆಸಿಕೊಂಡಿದ್ದರು. ಆ ಫೋಟೊಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದವು.<br /> <br /> ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಮತ್ತು ದೇಶದ ಸ್ತ್ರೀ ಸಮುದಾಯಕ್ಕೆ ಅವಮಾನವಾಗಿದೆ' ಎಂದು ಆರೋಪಿಸಿ ವಕೀಲ ಎಸ್.ಉಮೇಶ್ ಎಂಬುವರು ಪೂನಂ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.<br /> <br /> ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಹಿಂದೆ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಪೂನಂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕಾಗಿ ನ್ಯಾಯಾಲಯವು ಅ.31ರಂದು ಅವರನ್ನು ವಿಚಾರಣೆಗೆ ಖುದ್ದು ಹಾಜರುಪಡಿಸುವಂತೆ ಸೂಚಿಸಿ ಮುಂಬೈ ನಗರ ಪೊಲೀಸ್ ಕಮಿಷನರ್ಗೆ ಆದೇಶಿಸಿದೆ. ಅದೇ ರೀತಿ ಪೂನಂ ಅವರಿಗೆ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆ ಸಮನ್ಸ್ನಲ್ಲಿ ತಿಳಿಸಿದೆ.<br /> <br /> <strong>ವಧು-ವರರ ಸಮಾವೇಶ</strong><br /> ಲಿಂಗಾಯತ ಕಲ್ಯಾಣ ಟ್ರಸ್ಟ್ ವತಿಯಿಂದ ಜೂನ್ 9ರಂದು ಮಧ್ಯಾಹ್ನ 2ಕ್ಕೆ ವೈದ್ಯರು, ಎಂಜಿನಿಯರ್ಗಳು, ಪದವೀಧರು, ಆನಿವಾಸಿ ಭಾರತೀಯ ವೀರಶೈವ ವಧು-ವರರ ಮುಖಾಮುಖಿ ಸಮಾವೇಶವನ್ನು ಆಯೋಜಿಸಲಾಗಿದೆ.<br /> ಆಸಕ್ತರು ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಲಿಂಗಾಯತ ಕಲ್ಯಾಣ ಟ್ರಸ್ಟ್, ನಂ.14, ಜಯದೇವ ವಾಣಿಜ್ಯ ಸಂಕೀರ್ಣ, ಐದನೇ ಮುಖ್ಯರಸ್ತೆ, ಗಾಂಧಿನಗರ. ಹೆಚ್ಚಿನ ಮಾಹಿತಿಗೆ : 2226 9237.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ರೂಪದರ್ಶಿ ಪೂನಂ ಪಾಂಡೆ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅ.31ರಂದು ವಿಚಾರಣೆಗೆ ಹಾಜರಾಗುವಂತೆ ನಗರದ ಆರನೇ ಎಸಿಎಂಎಂ ನ್ಯಾಯಾಲಯವು ಪೂನಂಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.<br /> <br /> `2011ರ ವಿಶ್ವಕಪ್ ಕ್ರಿಕೆಟ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಪಾಕಿಸ್ತಾನ ತಂಡದ ವಿರುದ್ಧ ಜಯಗಳಿಸಿದ್ದ ಸಂದರ್ಭದಲ್ಲಿ ಪೂನಂ ಪಾಂಡೆ ಅವರು ನಗ್ನರಾಗಿ ವಿಷ್ಣು ದೇವರ ಭಾವಚಿತ್ರ ಹಿಡಿದು ಫೋಟೊ ತೆಗೆಸಿಕೊಂಡಿದ್ದರು. ಆ ಫೋಟೊಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದವು.<br /> <br /> ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಮತ್ತು ದೇಶದ ಸ್ತ್ರೀ ಸಮುದಾಯಕ್ಕೆ ಅವಮಾನವಾಗಿದೆ' ಎಂದು ಆರೋಪಿಸಿ ವಕೀಲ ಎಸ್.ಉಮೇಶ್ ಎಂಬುವರು ಪೂನಂ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.<br /> <br /> ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಹಿಂದೆ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಪೂನಂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕಾಗಿ ನ್ಯಾಯಾಲಯವು ಅ.31ರಂದು ಅವರನ್ನು ವಿಚಾರಣೆಗೆ ಖುದ್ದು ಹಾಜರುಪಡಿಸುವಂತೆ ಸೂಚಿಸಿ ಮುಂಬೈ ನಗರ ಪೊಲೀಸ್ ಕಮಿಷನರ್ಗೆ ಆದೇಶಿಸಿದೆ. ಅದೇ ರೀತಿ ಪೂನಂ ಅವರಿಗೆ ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆ ಸಮನ್ಸ್ನಲ್ಲಿ ತಿಳಿಸಿದೆ.<br /> <br /> <strong>ವಧು-ವರರ ಸಮಾವೇಶ</strong><br /> ಲಿಂಗಾಯತ ಕಲ್ಯಾಣ ಟ್ರಸ್ಟ್ ವತಿಯಿಂದ ಜೂನ್ 9ರಂದು ಮಧ್ಯಾಹ್ನ 2ಕ್ಕೆ ವೈದ್ಯರು, ಎಂಜಿನಿಯರ್ಗಳು, ಪದವೀಧರು, ಆನಿವಾಸಿ ಭಾರತೀಯ ವೀರಶೈವ ವಧು-ವರರ ಮುಖಾಮುಖಿ ಸಮಾವೇಶವನ್ನು ಆಯೋಜಿಸಲಾಗಿದೆ.<br /> ಆಸಕ್ತರು ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಲಿಂಗಾಯತ ಕಲ್ಯಾಣ ಟ್ರಸ್ಟ್, ನಂ.14, ಜಯದೇವ ವಾಣಿಜ್ಯ ಸಂಕೀರ್ಣ, ಐದನೇ ಮುಖ್ಯರಸ್ತೆ, ಗಾಂಧಿನಗರ. ಹೆಚ್ಚಿನ ಮಾಹಿತಿಗೆ : 2226 9237.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>