<p><strong>ಭುವನೇಶ್ವರ: </strong>ನೆಲದಿಂದ ನೆಲಕ್ಕೆ ಚಿಮ್ಮುವ 350 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಬಲ್ಲ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಅಣ್ವಸ್ತ್ರ ಸಾಗಿಸಬಲ್ಲ, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿರುವ ಒಂಬತ್ತು ಮೀಟರ್ ಉದ್ದದ ಕ್ಷಿಪಣಿಯ ಪರೀಕ್ಷೆಯನ್ನು ಸೋಮವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಚಂಡೀಪುರದಲ್ಲಿರುವ ಮಧ್ಯಂತರ ಪರೀಕ್ಷಾ ವಲಯದಲ್ಲಿ (ಐಟಿಆರ್) ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ನಿಯಮಿತವಾಗಿ ನಡೆಯುವ ತರಬೇತಿ ಕಾರ್ಯಕ್ರಮದ ಭಾಗವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೆರವಿನೊಂದಿಗೆ ಸಶಸ್ತ್ರ ಪಡೆಗಳು ಕ್ಷಿಪಣಿಯ ಪರೀಕ್ಷೆ ನಡೆಸಿದವು. <br /> <br /> `ಕ್ಷಿಪಣಿಯು ಪೂರ್ವನಿರ್ಧಾರಿತ ವಾಗಿ ಬಂಗಾಳಕೊಲ್ಲಿಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಗುರಿಯನ್ನು ಹೆಚ್ಚಿನ ನಿಖರತೆಯಿಂದ ತಲುಪಿತು. ಪರೀಕ್ಷೆಯ ಎಲ್ಲಾ ಉದ್ದೇಶಗಳನ್ನು ಪೂರೈಸಿದ ಕ್ಷಿಪಣಿಯು ಕರಾರುವಕ್ಕಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು~ ಎಂದು ಐಟಿಆರ್ ನಿರ್ದೇಶಕ ಎಸ್ಪಿ.ದಾಸ್ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ: </strong>ನೆಲದಿಂದ ನೆಲಕ್ಕೆ ಚಿಮ್ಮುವ 350 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಬಲ್ಲ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಅಣ್ವಸ್ತ್ರ ಸಾಗಿಸಬಲ್ಲ, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿರುವ ಒಂಬತ್ತು ಮೀಟರ್ ಉದ್ದದ ಕ್ಷಿಪಣಿಯ ಪರೀಕ್ಷೆಯನ್ನು ಸೋಮವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಚಂಡೀಪುರದಲ್ಲಿರುವ ಮಧ್ಯಂತರ ಪರೀಕ್ಷಾ ವಲಯದಲ್ಲಿ (ಐಟಿಆರ್) ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.<br /> <br /> ನಿಯಮಿತವಾಗಿ ನಡೆಯುವ ತರಬೇತಿ ಕಾರ್ಯಕ್ರಮದ ಭಾಗವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೆರವಿನೊಂದಿಗೆ ಸಶಸ್ತ್ರ ಪಡೆಗಳು ಕ್ಷಿಪಣಿಯ ಪರೀಕ್ಷೆ ನಡೆಸಿದವು. <br /> <br /> `ಕ್ಷಿಪಣಿಯು ಪೂರ್ವನಿರ್ಧಾರಿತ ವಾಗಿ ಬಂಗಾಳಕೊಲ್ಲಿಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಗುರಿಯನ್ನು ಹೆಚ್ಚಿನ ನಿಖರತೆಯಿಂದ ತಲುಪಿತು. ಪರೀಕ್ಷೆಯ ಎಲ್ಲಾ ಉದ್ದೇಶಗಳನ್ನು ಪೂರೈಸಿದ ಕ್ಷಿಪಣಿಯು ಕರಾರುವಕ್ಕಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು~ ಎಂದು ಐಟಿಆರ್ ನಿರ್ದೇಶಕ ಎಸ್ಪಿ.ದಾಸ್ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>