<p>ಕೆಂಗೇರಿ: `ನಾವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿದಂತೆಲ್ಲಾ ಹೊಸ ಹೊಸ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವುದು ಆತಂಕಕಾರಿ ಸಂಗತಿ~ ಎಂದು ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.<br /> <br /> ನಾಗರಬಾವಿಯಲ್ಲಿ ನೂತನ ಪೆನೇಷಿಯಾ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, `ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವ ಅಗತ್ಯವಿದೆ~ ಎಂದು ಸಲಹೆ ಮಾಡಿದರು.<br /> <br /> `ಮನುಷ್ಯನ ದೇಹ ಯಂತ್ರವಿದ್ದಂತೆ. ಯಂತ್ರವು ಕೆಟ್ಟು ರೋಗಿಯು ಮೆಕ್ಯಾನಿಕ್ ಎಂಬ ವೈದ್ಯರನ್ನು ನಂಬಿ ಬಂದಾಗ ಉತ್ತಮ ಚಿಕಿತ್ಸೆ ನೀಡಿ ಕಳಿಸಬೇಕು~ ಎಂದು ಶ್ರೀಗಳು ಕರೆ ನೀಡಿದರು.<br /> <br /> ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್, ಶಾಸಕ ಎಂ.ಕೃಷ್ಣಪ್ಪ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಯಣ್ಣ, ಪ್ರೊ.ರಾಧಾಕೃಷ್ಣ, ಪಾಲಿಕೆ ಸದಸ್ಯರಾದ ಉಮೇಶ್ ಶೆಟ್ಟಿ, ವೆಂಕಟೇಶ್ಬಾಬು, ರಂಗಣ್ಣ, ಮಾಜಿ ಉಪ ಮೇಯರ್ ಪುಟ್ಟರಾಜು ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಗೇರಿ: `ನಾವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿದಂತೆಲ್ಲಾ ಹೊಸ ಹೊಸ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವುದು ಆತಂಕಕಾರಿ ಸಂಗತಿ~ ಎಂದು ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.<br /> <br /> ನಾಗರಬಾವಿಯಲ್ಲಿ ನೂತನ ಪೆನೇಷಿಯಾ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, `ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವ ಅಗತ್ಯವಿದೆ~ ಎಂದು ಸಲಹೆ ಮಾಡಿದರು.<br /> <br /> `ಮನುಷ್ಯನ ದೇಹ ಯಂತ್ರವಿದ್ದಂತೆ. ಯಂತ್ರವು ಕೆಟ್ಟು ರೋಗಿಯು ಮೆಕ್ಯಾನಿಕ್ ಎಂಬ ವೈದ್ಯರನ್ನು ನಂಬಿ ಬಂದಾಗ ಉತ್ತಮ ಚಿಕಿತ್ಸೆ ನೀಡಿ ಕಳಿಸಬೇಕು~ ಎಂದು ಶ್ರೀಗಳು ಕರೆ ನೀಡಿದರು.<br /> <br /> ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್, ಶಾಸಕ ಎಂ.ಕೃಷ್ಣಪ್ಪ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಯಣ್ಣ, ಪ್ರೊ.ರಾಧಾಕೃಷ್ಣ, ಪಾಲಿಕೆ ಸದಸ್ಯರಾದ ಉಮೇಶ್ ಶೆಟ್ಟಿ, ವೆಂಕಟೇಶ್ಬಾಬು, ರಂಗಣ್ಣ, ಮಾಜಿ ಉಪ ಮೇಯರ್ ಪುಟ್ಟರಾಜು ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>