<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಗಡಿಗ್ರಾಮ ಹತ್ತರ್ಗಾದಲ್ಲಿನ ಕೊಳವೆ ಬಾವಿಗೆ ಸಾಕಷ್ಟು ನೀರಿದ್ದರೂ ಉಪಯೋಗ ಆಗುತ್ತಿಲ್ಲ. ಪೈಪ್ಲೈನ್ ಮೂಲಕ ಅಲ್ಲಿನ ನೀರನ್ನು ಟ್ಯಾಂಕ್ಗೆ ಒಯ್ಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾರೂ ಲಕ್ಷ ಕೊಡುತ್ತಿಲ್ಲ.<br /> <br /> ಈ ಗ್ರಾಮ ಬೆಣ್ಣೆತೊರೆ ನದಿ ದಂಡೆಯಲ್ಲಿದ್ದರೂ ಕೆಲ ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮಕ್ಕೆ ನೀರು ಪೋರೈಸುವ ಕಿರುನೀರು ಪೋರೈಕೆ ಯೋಜನೆಯ ಕೊಳವೆಬಾವಿಗೆ ಅಲ್ಪಸ್ವಲ್ಪ ನೀರಿರುವ ಕಾರಣ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರಿನ ಸರಬರಾಜು ಆಗುತ್ತಿಲ್ಲ. ಆದ್ದರಿಂದ ದೂರದಿಂದ ಕೊಡಗಳನ್ನು ಹೊತ್ತುಕೊಂಡು ನೀರು ತರಬೇಕಾಗುತ್ತಿದೆ.<br /> <br /> ಹಾಗೆ ನೋಡಿದರೆ, ಅಧಿಕಾರಿಗಳ ನಿಷ್ಕಾಳಜಿತನವೇ ಸಮಸ್ಯೆಗೆ ಕಾರಣವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಗ್ರಾಮದ ಹೊರಭಾಗದಲ್ಲಿ ಕೊರೆದ ಕೊಳವೆ ಬಾವಿಯ ನೀರನ್ನು ಬಳಸಿಕೊಳ್ಳದೆ ಈಚೆಗೆ ಬೇರೆ ಸ್ಥಳದಲ್ಲಿ ಇನ್ನೊಂದು ಕೊಳವೆ ಬಾವಿ ಕೊರೆದು ಹಣ ಪೋಲು ಮಾಡಲಾಗಿದೆ.<br /> <br /> ಹಣ ಖರ್ಚಾದರೂ ಪರವಾಗಿಲ್ಲ ಆದರೆ ಅದಕ್ಕೆ ನೀರು ಹತ್ತಲಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ. ಶೀಘ್ರ ಸಾಕಷ್ಟು ನೀರಿರುವ ಕೊಳವೆಬಾವಿಯಿಂದ ಪೈಪಲೈನ್ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಗಡಿಗ್ರಾಮ ಹತ್ತರ್ಗಾದಲ್ಲಿನ ಕೊಳವೆ ಬಾವಿಗೆ ಸಾಕಷ್ಟು ನೀರಿದ್ದರೂ ಉಪಯೋಗ ಆಗುತ್ತಿಲ್ಲ. ಪೈಪ್ಲೈನ್ ಮೂಲಕ ಅಲ್ಲಿನ ನೀರನ್ನು ಟ್ಯಾಂಕ್ಗೆ ಒಯ್ಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾರೂ ಲಕ್ಷ ಕೊಡುತ್ತಿಲ್ಲ.<br /> <br /> ಈ ಗ್ರಾಮ ಬೆಣ್ಣೆತೊರೆ ನದಿ ದಂಡೆಯಲ್ಲಿದ್ದರೂ ಕೆಲ ದಿನಗಳಿಂದ ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮಕ್ಕೆ ನೀರು ಪೋರೈಸುವ ಕಿರುನೀರು ಪೋರೈಕೆ ಯೋಜನೆಯ ಕೊಳವೆಬಾವಿಗೆ ಅಲ್ಪಸ್ವಲ್ಪ ನೀರಿರುವ ಕಾರಣ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರಿನ ಸರಬರಾಜು ಆಗುತ್ತಿಲ್ಲ. ಆದ್ದರಿಂದ ದೂರದಿಂದ ಕೊಡಗಳನ್ನು ಹೊತ್ತುಕೊಂಡು ನೀರು ತರಬೇಕಾಗುತ್ತಿದೆ.<br /> <br /> ಹಾಗೆ ನೋಡಿದರೆ, ಅಧಿಕಾರಿಗಳ ನಿಷ್ಕಾಳಜಿತನವೇ ಸಮಸ್ಯೆಗೆ ಕಾರಣವಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಗ್ರಾಮದ ಹೊರಭಾಗದಲ್ಲಿ ಕೊರೆದ ಕೊಳವೆ ಬಾವಿಯ ನೀರನ್ನು ಬಳಸಿಕೊಳ್ಳದೆ ಈಚೆಗೆ ಬೇರೆ ಸ್ಥಳದಲ್ಲಿ ಇನ್ನೊಂದು ಕೊಳವೆ ಬಾವಿ ಕೊರೆದು ಹಣ ಪೋಲು ಮಾಡಲಾಗಿದೆ.<br /> <br /> ಹಣ ಖರ್ಚಾದರೂ ಪರವಾಗಿಲ್ಲ ಆದರೆ ಅದಕ್ಕೆ ನೀರು ಹತ್ತಲಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ. ಶೀಘ್ರ ಸಾಕಷ್ಟು ನೀರಿರುವ ಕೊಳವೆಬಾವಿಯಿಂದ ಪೈಪಲೈನ್ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>