<p><strong>ಬೆಂಗಳೂರು:</strong> ನಿವೇಶನ ಮಾರಾಟ ಮಾಡುವುದಾಗಿ ಇಂಟರ್ನೆಟ್ನಲ್ಲಿ ಜಾಹೀರಾತು ನೀಡಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.<br /> <br /> ವಿಜಯನಗರದ ಎಂ.ಸಿ.ಲೇಔಟ್ ಒಂದನೇ ಮುಖ್ಯರಸ್ತೆ ನಿವಾಸಿ ಮಂಜುಳಾ (50) ಮತ್ತು ಅವರ ಮಗಳು ಎಸ್.ನೇತ್ರಾವತಿ ಉರುಫ್ ಚೈತ್ರಾ (29) ಬಂಧಿತರು. ಆರೋಪಿಗಳಿಂದ ರೂ 1.20 ಲಕ್ಷ ಹಣ ಪೊಲೀಸರು ವಶಪಡಿಸಿಕೊಂಡಿದ್ದಾರೆ.<br /> <br /> ಯಲಹಂಕ ಸಮೀಪದ ನ್ಯಾಯಾಂಗ ಬಡಾವಣೆಯಲ್ಲಿ ರಾಜ್ಯ ನ್ಯಾಯಾಂಗ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಜಮೀನಿದೆ. ಮಂಜುಳಾ ಅವರ ಪತಿ ಸುರೇಶ್ಕುಮಾರ್ ಅವರು ಆ ಸಂಘದ ಕಾರ್ಯದರ್ಶಿಯಾಗಿದ್ದಾರೆ. ಸುರೇಶ್ಕುಮಾರ್ ಅವರು ಅಳಿಯ ಸೋಮೇಶ್ ಜತೆ ಸೇರಿಕೊಂಡು ಸಂಘದ ಜಮೀನಿನ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ 10 ನಿವೇಶನಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಿದ್ದರು. <br /> <br /> ಅಲ್ಲದೇ ಅವರು 11 ನಿವೇಶನಗಳನ್ನು ಅಳಿಯ ಮತ್ತು ಮಗಳ ಹೆಸರಿಗೆ ನೋಂದಣಿ ಮಾಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಂಚನೆ ಆರೋಪದಡಿ ಸುರೇಶ್ಕುಮಾರ್ ಮತ್ತು ಸೋಮೇಶ್ ಅವರನ್ನು 2006ರಲ್ಲಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆ ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. <br /> <br /> ಈ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ. ಈ ನಡುವೆ ನೇತ್ರಾವತಿ ಅವರು ನಿವೇಶನಗಳನ್ನು ತಾಯಿ ಮಂಜುಳಾ ಅವರ ಹೆಸರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಮಾಡಿಕೊಟ್ಟಂತೆ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದರು.<br /> <br /> ಆ ದಾಖಲೆ ಪತ್ರಗಳನ್ನು ಆಧರಿಸಿ ಆರೋಪಿಗಳು ಶಿವಮೊಗ್ಗದ ವಿಶ್ವನಾಥ್ ಎಂಬುವರಿಗೆ ನಿವೇಶನ ಮಾರಾಟ ಮಾಡುವುದಾಗಿ ನಂಬಿಸಿ ಸೆಪ್ಟೆಂಬರ್ನಲ್ಲಿ ಆರು ಲಕ್ಷ ರೂಪಾಯಿ ಮುಂಗಡ ಹಣ ಪಡೆದು ವಂಚಿಸಿದ್ದರು. ಈ ಸಂಬಂಧ ವಿಶ್ವನಾಥ್ ಅವರು ನೀಡಿದ ದೂರನ್ನು ಆಧರಿಸಿ ಅವರಿಬ್ಬರನ್ನು ಬಂಧಿಸಲಾಯಿತು.<br /> <br /> ಸೋಮೇಶ್ ಸಹ ಈ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಕಾನೂನು ಪದವೀಧರೆಯಾದ ನೇತ್ರಾವತಿ ಅವರು ವಕೀಲರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಈಶಾನ್ಯ ವಿಭಾಗ ಡಿಸಿಪಿ ಬಿ.ಆರ್.ರವಿಕಾಂತೇಗೌಡ ಮತ್ತು ಯಲಹಂಕ ಉಪ ವಿಭಾಗದ ಎಸಿಪಿ ಜಿ.ಆರ್.ದೇಸಾಯಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಕೆಂಚೇಗೌಡ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿವೇಶನ ಮಾರಾಟ ಮಾಡುವುದಾಗಿ ಇಂಟರ್ನೆಟ್ನಲ್ಲಿ ಜಾಹೀರಾತು ನೀಡಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.<br /> <br /> ವಿಜಯನಗರದ ಎಂ.ಸಿ.ಲೇಔಟ್ ಒಂದನೇ ಮುಖ್ಯರಸ್ತೆ ನಿವಾಸಿ ಮಂಜುಳಾ (50) ಮತ್ತು ಅವರ ಮಗಳು ಎಸ್.ನೇತ್ರಾವತಿ ಉರುಫ್ ಚೈತ್ರಾ (29) ಬಂಧಿತರು. ಆರೋಪಿಗಳಿಂದ ರೂ 1.20 ಲಕ್ಷ ಹಣ ಪೊಲೀಸರು ವಶಪಡಿಸಿಕೊಂಡಿದ್ದಾರೆ.<br /> <br /> ಯಲಹಂಕ ಸಮೀಪದ ನ್ಯಾಯಾಂಗ ಬಡಾವಣೆಯಲ್ಲಿ ರಾಜ್ಯ ನ್ಯಾಯಾಂಗ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಜಮೀನಿದೆ. ಮಂಜುಳಾ ಅವರ ಪತಿ ಸುರೇಶ್ಕುಮಾರ್ ಅವರು ಆ ಸಂಘದ ಕಾರ್ಯದರ್ಶಿಯಾಗಿದ್ದಾರೆ. ಸುರೇಶ್ಕುಮಾರ್ ಅವರು ಅಳಿಯ ಸೋಮೇಶ್ ಜತೆ ಸೇರಿಕೊಂಡು ಸಂಘದ ಜಮೀನಿನ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ 10 ನಿವೇಶನಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಿದ್ದರು. <br /> <br /> ಅಲ್ಲದೇ ಅವರು 11 ನಿವೇಶನಗಳನ್ನು ಅಳಿಯ ಮತ್ತು ಮಗಳ ಹೆಸರಿಗೆ ನೋಂದಣಿ ಮಾಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಂಚನೆ ಆರೋಪದಡಿ ಸುರೇಶ್ಕುಮಾರ್ ಮತ್ತು ಸೋಮೇಶ್ ಅವರನ್ನು 2006ರಲ್ಲಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆ ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. <br /> <br /> ಈ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ. ಈ ನಡುವೆ ನೇತ್ರಾವತಿ ಅವರು ನಿವೇಶನಗಳನ್ನು ತಾಯಿ ಮಂಜುಳಾ ಅವರ ಹೆಸರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಮಾಡಿಕೊಟ್ಟಂತೆ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದರು.<br /> <br /> ಆ ದಾಖಲೆ ಪತ್ರಗಳನ್ನು ಆಧರಿಸಿ ಆರೋಪಿಗಳು ಶಿವಮೊಗ್ಗದ ವಿಶ್ವನಾಥ್ ಎಂಬುವರಿಗೆ ನಿವೇಶನ ಮಾರಾಟ ಮಾಡುವುದಾಗಿ ನಂಬಿಸಿ ಸೆಪ್ಟೆಂಬರ್ನಲ್ಲಿ ಆರು ಲಕ್ಷ ರೂಪಾಯಿ ಮುಂಗಡ ಹಣ ಪಡೆದು ವಂಚಿಸಿದ್ದರು. ಈ ಸಂಬಂಧ ವಿಶ್ವನಾಥ್ ಅವರು ನೀಡಿದ ದೂರನ್ನು ಆಧರಿಸಿ ಅವರಿಬ್ಬರನ್ನು ಬಂಧಿಸಲಾಯಿತು.<br /> <br /> ಸೋಮೇಶ್ ಸಹ ಈ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಕಾನೂನು ಪದವೀಧರೆಯಾದ ನೇತ್ರಾವತಿ ಅವರು ವಕೀಲರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಈಶಾನ್ಯ ವಿಭಾಗ ಡಿಸಿಪಿ ಬಿ.ಆರ್.ರವಿಕಾಂತೇಗೌಡ ಮತ್ತು ಯಲಹಂಕ ಉಪ ವಿಭಾಗದ ಎಸಿಪಿ ಜಿ.ಆರ್.ದೇಸಾಯಿ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಕೆಂಚೇಗೌಡ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>