<p><strong>ಬೆಳಗಾವಿ: </strong>ಪೊಲೀಸ್ ಹಾಗೂ ಸೇನಾ ವೃತ್ತಿ ರಾಷ್ಟ್ರಕ್ಕಾಗಿ ಸಮರ್ಪಣೆ, ತ್ಯಾಗ ಹಾಗೂ ಬಲಿದಾನ ಮಾಡುವಂತಹ ಗೌರವಯುತ ವೃತ್ತಿಗಳಾಗಿವೆ ಎಂದು ನಿವೃತ್ತ ಮೇಜರ್ ಜನರಲ್ ಎಸ್. ಎಸ್.ಗೌಡರ ಹೇಳಿದರು. <br /> <br /> ನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.<br /> <br /> `ಸೇನಾ ಸಿಬ್ಬಂದಿ ದೇಶವನ್ನು ಬಾಹ್ಯ ಆಕ್ರಮಣದಿಂದ ರಕ್ಷಿಸುವ ಜವಾಬ್ದಾರಿ ಹೊಂದಿದ್ದರೆ, ಪೊಲೀಸ್ ಸಿಬ್ಬಂದಿ ದೇಶದ ಆಂತರಿಕ ಭದ್ರತೆಯ ಗುರುತರ ಜವಾಬ್ದಾರಿ ಹೊಂದಿರುತ್ತಾರೆ. ಈ ಎರಡೂ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ತ್ಯಾಗ, ಬಲಿದಾನ ಮಾಡಿದವರನ್ನು ಎಂದಿಗೂ ಮರೆಯಲಾಗದು~ ಎಂದು ಅವರು ಹೇಳಿದರು.<br /> <br /> `ದೇಶದ ಪ್ರತಿಯೊಬ್ಬ ನಾಗರಿಕರ, ಕುಟುಂಬಗಳ ಸ್ವಾತಂತ್ರ್ಯ ರಕ್ಷಣೆಗೆ ತಮ್ಮ ಜೀವವನ್ನು ಮುಡುಪಾಗಿಟ್ಟು ಹೋರಾಟ ನಡೆಸುತ್ತಾರೆ. ಇವರ ತ್ಯಾಗ, ಸದಾ ಸ್ಮರಣೀಯವಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು.<br /> <br /> `ಈಗ ಭಯೋತ್ಪಾದನೆ, ನಕ್ಸಲ್, ಪೂರ್ವೋತ್ತರ ಭಾಗಗಳಿಂದ ಸಮಾಜಘಾತುಕ ಶಕ್ತಿಗಳ ಒಳ ನುಸುಳುವಿಕೆಯಂತಹ ಸಮಸ್ಯೆಗಳನ್ನು ಎದುರಿಸಲು ಸನ್ನದ್ಧವಾಗಬೇಕಾಗಿದೆ. ಆಂತರಿಕ ರಕ್ಷಣಾ ಜವಾಬ್ದಾರಿಯನ್ನು ಹೊರಬೇಕು~ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ್ ಪಾಟೀಲ ಮಾತನಾಡಿ, ಪೊಲೀಸ್ರು ಶೌರ್ಯ, ಧೈರ್ಯ ಹಾಗೂ ಸಾಹಸದಿಂದ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತ ವೀರ ಮರಣ ಹೊಂದಿದ್ದಾರೆ. ಅಂತಹವರನ್ನು ನೆನೆಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಪಿ.ಎಸ್. ಸಂಧು ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯ ನಾಗರಿಕರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪವಿಟ್ಟು ಗೌರವ ಸಲ್ಲಿಸಿದರು. <br /> <br /> ಇದೇ ಸಂದರ್ಭದಲ್ಲಿ ಆಕಾಶದತ್ತ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸಲಾುತು. ಎರಡು ನಿಮಿಷ ಮೌನ ಆಚರಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಪೊಲೀಸ್ ಹಾಗೂ ಸೇನಾ ವೃತ್ತಿ ರಾಷ್ಟ್ರಕ್ಕಾಗಿ ಸಮರ್ಪಣೆ, ತ್ಯಾಗ ಹಾಗೂ ಬಲಿದಾನ ಮಾಡುವಂತಹ ಗೌರವಯುತ ವೃತ್ತಿಗಳಾಗಿವೆ ಎಂದು ನಿವೃತ್ತ ಮೇಜರ್ ಜನರಲ್ ಎಸ್. ಎಸ್.ಗೌಡರ ಹೇಳಿದರು. <br /> <br /> ನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.<br /> <br /> `ಸೇನಾ ಸಿಬ್ಬಂದಿ ದೇಶವನ್ನು ಬಾಹ್ಯ ಆಕ್ರಮಣದಿಂದ ರಕ್ಷಿಸುವ ಜವಾಬ್ದಾರಿ ಹೊಂದಿದ್ದರೆ, ಪೊಲೀಸ್ ಸಿಬ್ಬಂದಿ ದೇಶದ ಆಂತರಿಕ ಭದ್ರತೆಯ ಗುರುತರ ಜವಾಬ್ದಾರಿ ಹೊಂದಿರುತ್ತಾರೆ. ಈ ಎರಡೂ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ತ್ಯಾಗ, ಬಲಿದಾನ ಮಾಡಿದವರನ್ನು ಎಂದಿಗೂ ಮರೆಯಲಾಗದು~ ಎಂದು ಅವರು ಹೇಳಿದರು.<br /> <br /> `ದೇಶದ ಪ್ರತಿಯೊಬ್ಬ ನಾಗರಿಕರ, ಕುಟುಂಬಗಳ ಸ್ವಾತಂತ್ರ್ಯ ರಕ್ಷಣೆಗೆ ತಮ್ಮ ಜೀವವನ್ನು ಮುಡುಪಾಗಿಟ್ಟು ಹೋರಾಟ ನಡೆಸುತ್ತಾರೆ. ಇವರ ತ್ಯಾಗ, ಸದಾ ಸ್ಮರಣೀಯವಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು.<br /> <br /> `ಈಗ ಭಯೋತ್ಪಾದನೆ, ನಕ್ಸಲ್, ಪೂರ್ವೋತ್ತರ ಭಾಗಗಳಿಂದ ಸಮಾಜಘಾತುಕ ಶಕ್ತಿಗಳ ಒಳ ನುಸುಳುವಿಕೆಯಂತಹ ಸಮಸ್ಯೆಗಳನ್ನು ಎದುರಿಸಲು ಸನ್ನದ್ಧವಾಗಬೇಕಾಗಿದೆ. ಆಂತರಿಕ ರಕ್ಷಣಾ ಜವಾಬ್ದಾರಿಯನ್ನು ಹೊರಬೇಕು~ ಎಂದು ಅವರು ಹೇಳಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ್ ಪಾಟೀಲ ಮಾತನಾಡಿ, ಪೊಲೀಸ್ರು ಶೌರ್ಯ, ಧೈರ್ಯ ಹಾಗೂ ಸಾಹಸದಿಂದ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತ ವೀರ ಮರಣ ಹೊಂದಿದ್ದಾರೆ. ಅಂತಹವರನ್ನು ನೆನೆಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಪಿ.ಎಸ್. ಸಂಧು ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯ ನಾಗರಿಕರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪವಿಟ್ಟು ಗೌರವ ಸಲ್ಲಿಸಿದರು. <br /> <br /> ಇದೇ ಸಂದರ್ಭದಲ್ಲಿ ಆಕಾಶದತ್ತ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸಲಾುತು. ಎರಡು ನಿಮಿಷ ಮೌನ ಆಚರಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>