<p><strong>ಚಿಕ್ಕಮಗಳೂರು: </strong>ನಾಗರಿಕರ ರಕ್ಷಣೆಗಾಗಿ ಅಹರ್ನಿಶಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಕರ್ತವ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಿ.ಕೆ.ರಂಗಸ್ವಾಮಿ ಪ್ರಶಂಸಿಸಿದರು.ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ಪೊಲೀಸರು ಸಮಯದ ಮಿತಿಯಿಲ್ಲದೇ ಸಮಾಜದಲ್ಲಿ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದಾರೆ. ಇದರ ಬಗ್ಗೆ ಎಲ್ಲರೂ ಹೆಮ್ಮೆ ಪಡಬೇಕಾಗಿದೆ ಎಂದರು.ನಿವೃತ್ತ ಪಿಎಸ್ಐ ಎಂ.ಎಸ್.ಬಸವಯ್ಯ ಮಾತನಾಡಿ, ಇಲಾಖೆಯಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯು ತಮಗೆ ತೃಪ್ತಿ ತಂದಿದೆ. ಪ್ರತಿಯೊಬ್ಬರು ಆತ್ಮತೃಪ್ತಿಯಾಗುವಂತೆ ಕೆಲಸ ಮಾಡಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ್ ಕಲ್ಯಾಣ ನಿಧಿಯಿಂದ ಇಲಾಖೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಬಳಸಿಕೊಳ್ಳಲಾಗುತ್ತಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ನಿವೃತ್ತಿಯಾದ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಕವಾಯತು ತುಕಡಿಗಳಿಂದ ಪಥ ಸಂಚಲನ ನಡೆಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಿತ್ರ ಹೆರಾಜೆ, ಡಿವೈಎಸ್ಪಿ ವೇದಮೂರ್ತಿ ಇದ್ದರು. <br /> <br /> ಇದಕ್ಕೂ ಮೊದಲು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕವಾಯತು ತಂಡಗಳ ಪರಿವೀಕ್ಷಣೆ ನಡೆಸಿದರು. ಸಿವಿಲ್ ಮತ್ತು ಜಿಲ್ಲಾ ಶಸಸ್ತ್ರ ಪಡೆ ಪೊಲೀಸ್ ತುಕಡಿಗಳಿಂದ ಪಥ ಸಂಚಲನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಾಗರಿಕರ ರಕ್ಷಣೆಗಾಗಿ ಅಹರ್ನಿಶಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಕರ್ತವ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಿ.ಕೆ.ರಂಗಸ್ವಾಮಿ ಪ್ರಶಂಸಿಸಿದರು.ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ಪೊಲೀಸರು ಸಮಯದ ಮಿತಿಯಿಲ್ಲದೇ ಸಮಾಜದಲ್ಲಿ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದಾರೆ. ಇದರ ಬಗ್ಗೆ ಎಲ್ಲರೂ ಹೆಮ್ಮೆ ಪಡಬೇಕಾಗಿದೆ ಎಂದರು.ನಿವೃತ್ತ ಪಿಎಸ್ಐ ಎಂ.ಎಸ್.ಬಸವಯ್ಯ ಮಾತನಾಡಿ, ಇಲಾಖೆಯಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯು ತಮಗೆ ತೃಪ್ತಿ ತಂದಿದೆ. ಪ್ರತಿಯೊಬ್ಬರು ಆತ್ಮತೃಪ್ತಿಯಾಗುವಂತೆ ಕೆಲಸ ಮಾಡಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ್ ಕಲ್ಯಾಣ ನಿಧಿಯಿಂದ ಇಲಾಖೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಬಳಸಿಕೊಳ್ಳಲಾಗುತ್ತಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ನಿವೃತ್ತಿಯಾದ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಕವಾಯತು ತುಕಡಿಗಳಿಂದ ಪಥ ಸಂಚಲನ ನಡೆಯಿತು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಿತ್ರ ಹೆರಾಜೆ, ಡಿವೈಎಸ್ಪಿ ವೇದಮೂರ್ತಿ ಇದ್ದರು. <br /> <br /> ಇದಕ್ಕೂ ಮೊದಲು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕವಾಯತು ತಂಡಗಳ ಪರಿವೀಕ್ಷಣೆ ನಡೆಸಿದರು. ಸಿವಿಲ್ ಮತ್ತು ಜಿಲ್ಲಾ ಶಸಸ್ತ್ರ ಪಡೆ ಪೊಲೀಸ್ ತುಕಡಿಗಳಿಂದ ಪಥ ಸಂಚಲನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>