<p><strong>ಬೆಂಗಳೂರು:</strong> ನಗರದ ಹೊರಮಾವು ಮುಖ್ಯರಸ್ತೆ ಮತ್ತು ಇಂದಿರಾನಗರದಲ್ಲಿ ಬುಧವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಪೊಲೀಸರ ಸೋಗಿನಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.<br /> <br /> ಇಂದಿರಾನಗರ ನೂರು ಅಡಿ ರಸ್ತೆಯಲ್ಲಿ ಕಿಡಿಗೇಡಿಗಳು ಧನಲಕ್ಷ್ಮಿ (61) ಎಂಬುವರ ಗಮನ ಬೇರೆಡೆ ಸೆಳೆದು 114 ಗ್ರಾಂ ಆಭರಣಗಳನ್ನು ದೋಚಿದ್ದಾರೆ.<br /> <br /> ಇಂದಿರಾನಗರ ಬಳಿಯ `ಎಚ್~ ಕಾಲೊನಿ ನಿವಾಸಿಯಾದ ಧನಲಕ್ಷ್ಮಿ ಅವರು ಮಧ್ಯಾಹ್ನ 12.30ರ ಸುಮಾರಿಗೆ ಅಂಚೆ ಕಚೇರಿಗೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಪೊಲೀಸರೆಂದು ಪರಿಚಯಿಸಿಕೊಂಡು ಚಿನ್ನಾಭರಣ ದೋಚಿದ್ದಾರೆ.</p>.<p><br /> ಅವರಿಗೆ ಅಪರಿಚಿತ ವ್ಯಕ್ತಿಗಳು ಪೊಲೀಸ್ ಗುರುತಿನ ಚೀಟಿಯೊಂದನ್ನು ತೋರಿಸಿ, `ಮುಂದಿನ ರಸ್ತೆಯಲ್ಲಿ ಕೊಲೆಯಾಗಿದೆ. ಆಭರಣಗಳನ್ನು ಬಿಚ್ಚಿ ಪರ್ಸ್ನಲ್ಲಿ ಇಟ್ಟುಕೊಳ್ಳಿ~ ಎಂದು ಹೇಳಿದ್ದಾರೆ. ಇದರಿಂದ ಆತಂಕಗೊಂಡ ಅವರು ಆಭರಣಗಳನ್ನು ಬಿಚ್ಚಿದ್ದಾರೆ. ಈ ವೇಳೆ ಅವರಿಗೆ ನೆರವು ನೀಡುವ ನೆಪದಲ್ಲಿ ಆಭರಣಗಳನ್ನು ಪಡೆದ ಕಿಡಿಗೇಡಿಗಳು ಅವುಗಳನ್ನು ಪರ್ಸ್ನಲ್ಲಿ ಹಾಕಿದಂತೆ ಮಾಡಿ ಪರಾರಿಯಾಗಿದ್ದಾರೆ.<br /> <br /> ಧನಲಕ್ಷ್ಮಿ ಅವರು ಮನೆಗೆ ಹೋಗಿ ಪರ್ಸ್ ತೆರೆದು ನೋಡಿದಾಗ ಆಭರಣಗಳು ಇಲ್ಲದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿನ್ನದ ಎರಡು ಬಳೆ, ಸರ ಮತ್ತು ಉಂಗುರವನ್ನು ಕಿಡಿಗೇಡಿಗಳು ದೋಚಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> <strong>ಹೊರಮಾವು ರಸ್ತೆ: ಮತ್ತೊಂದು ಪ್ರಕರಣ</strong><br /> ಹೊರಮಾವು ಮುಖ್ಯರಸ್ತೆಯಲ್ಲಿ ಬೆಳಿಗ್ಗೆ 11.45ರ ಸುಮಾರಿಗೆ ಇದೇ ರೀತಿಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಧು (62) ಎಂಬ ಮಹಿಳೆಯ 60 ಗ್ರಾಂ ಆಭರಣಗಳನ್ನು ದೋಚಿದ್ದಾರೆ.<br /> <br /> ವಿಜಯಾ ಬ್ಯಾಂಕ್ ಕಾಲೊನಿ ನಿವಾಸಿಯಾದ ಮಧು ಅವರು ಸಮೀಪದ ಅಂಗಡಿಯೊಂದರಲ್ಲಿ ಮೀನು ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಅಪರಿಚಿತರು ಪೊಲೀಸರೆಂದು ಪರಿಚಯಿಸಿಕೊಂಡು ಈ ಕೃತ್ಯ ಎಸಗಿದ್ದಾರೆ.<br /> <br /> `ಒಂದೇ ತಂಡದ ಸದಸ್ಯರು ಇಂದಿರಾನಗರ ಮತ್ತು ಹೊರಮಾವು ಮುಖ್ಯರಸ್ತೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ಇದೆ. ಪೊಲೀಸರೆಂದು ಪರಿಚಯಿಸಿಕೊಳ್ಳುವ ವ್ಯಕ್ತಿಗಳ ಬಗ್ಗೆ ಮಹಿಳೆಯರು ಸ್ವಲ್ವ ಎಚ್ಚರ ವಹಿಸಬೇಕು. ಅಂತಹ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಆಭರಣಗಳನ್ನು ಬಿಚ್ಚಿ ಕೊಡಬಾರದು~ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ನಾಲ್ಕು ಲಕ್ಷ ರೂಪಾಯಿ ದರೋಡೆ</strong><br /> ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಾಪಾರಿಯೊಬ್ಬರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ನಾಲ್ಕು ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ಬ್ಯಾಟರಾಯನಪುರ ಎರಡನೇ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.<br /> ಬ್ಯಾಟರಾಯನಪುರ ನಿವಾಸಿ ಅಶೋಕ್ಕುಮಾರ್ ದರೋಡೆಗೆ ಒಳಗಾದವರು. ಪ್ಲಾಸ್ಟಿಕ್ ಚಾಪೆ, ಡೋರ್ ಮ್ಯಾಟ್ ಮತ್ತಿತರ ಸಾಮಗ್ರಿಗಳ ಸಗಟು ವ್ಯಾಪಾರಿಯಾದ ಅವರು ಕುಂಬಾರಪೇಟೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಹಿವಾಟು ಮುಗಿದ ನಂತರ ಅಶೋಕ್ಕುಮಾರ್ ಅವರು ನಾಲ್ಕು ಲಕ್ಷ ಹಣವನ್ನು ದ್ವಿಚಕ್ರ ವಾಹನದ ಬಾಕ್ಸ್ನಲ್ಲಿ ಇಟ್ಟುಕೊಂಡು ಅಂಗಡಿಯಿಂದ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. <br /> <br /> ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಅವರಿಗೆ ಉದ್ದೇಶಪೂರ್ವಕವಾಗಿ ವಾಹನ ಗುದ್ದಿಸಿ ಕೆಳಗೆ ಬೀಳಿಸಿದ್ದಾರೆ. ಈ ವೇಳೆ ಅವರಿಗೆ ನೆರವು ನೀಡುವ ಸೋಗಿನಲ್ಲಿ ಗಮನ ಬೇರೆಡೆ ಸೆಳೆದು, ವಾಹನದ ಬಾಕ್ಸ್ನಲ್ಲಿದ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.<br /> <br /> <strong>ಅಪಘಾತ; ಬೈಕ್ ಸವಾರ ಸಾವು</strong><br /> ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ.<br /> <br /> ಮೈಸೂರು ರಸ್ತೆಯ ವಿನಾಯಕ ಚಿತ್ರಮಂದಿರ ಸಮೀಪದ ಫ್ಲವರ್ ಗಾರ್ಡನ್ ನಿವಾಸಿ ರಾಮಲಿಂಗಂ (42) ಮೃತಪಟ್ಟವರು. ಅವರು ಅಲಂಕಾರ್ ಪ್ಲಾಜಾದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅವರು ಸ್ನೇಹಿತ ರಮೇಶ್ ಜತೆ ರಾಜರಾಜೇಶ್ವರಿನಗರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಿಎಂಟಿಸಿ ಬಸ್ ಅವರ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ರಾಮಲಿಂಗಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಹಿಂಬದಿ ಸವಾರ ರಮೇಶ್ (32) ಅವರ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮೆಜೆಸ್ಟಿಕ್ನಿಂದ ಬಿಡದಿಗೆ ಹೋಗುತ್ತಿತ್ತು. ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ವಿದ್ಯಾರ್ಥಿನಿಗೆ ಗಾಯ</strong><br /> ಕಂಟೇನರ್ ವಾಹನ ಕಾರು ಮತ್ತು ದ್ವಿಚಕ್ರ ವಾಹನದ ಮೇಲೆ ಉರುಳಿ ಬಿದ್ದು ವಿದ್ಯಾರ್ಥಿನಿಯೊಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯ ಸಮೀಪ ಬುಧವಾರ ಸಂಜೆ ನಡೆದಿದೆ.<br /> ಮಾಗಡಿಯ ಶ್ವೇತಾ (19) ಗಾಯಗೊಂಡ ವಿದ್ಯಾರ್ಥಿನಿ. ಅವರು ನಗರದ ಖಾಸಗಿ ಕಾಲೇಜು ಒಂದರ ಬಿಬಿಎಂ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಕಂಟೇನರ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾನೆ. ಈ ವೇಳೆ ಕಂಟೇನರ್ ಉರುಳಿ, ಪಕ್ಕದಲ್ಲೇ ಬರುತ್ತಿದ್ದ ಕಾರು ಮತ್ತು ಶ್ವೇತಾ ಅವರ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಶ್ವೇತಾ ಅವರ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಜಖಂಗೊಂಡಿವೆ. ಕಂಟೇನರ್ ಚಾಲಕ ಪರಾರಿಯಾಗಿದ್ದಾನೆ. <br /> <br /> ಅಪಘಾತ ನಡೆದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಸಂಚಾರ ಸ್ಥಗಿತಗೊಂಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹೊರಮಾವು ಮುಖ್ಯರಸ್ತೆ ಮತ್ತು ಇಂದಿರಾನಗರದಲ್ಲಿ ಬುಧವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಪೊಲೀಸರ ಸೋಗಿನಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.<br /> <br /> ಇಂದಿರಾನಗರ ನೂರು ಅಡಿ ರಸ್ತೆಯಲ್ಲಿ ಕಿಡಿಗೇಡಿಗಳು ಧನಲಕ್ಷ್ಮಿ (61) ಎಂಬುವರ ಗಮನ ಬೇರೆಡೆ ಸೆಳೆದು 114 ಗ್ರಾಂ ಆಭರಣಗಳನ್ನು ದೋಚಿದ್ದಾರೆ.<br /> <br /> ಇಂದಿರಾನಗರ ಬಳಿಯ `ಎಚ್~ ಕಾಲೊನಿ ನಿವಾಸಿಯಾದ ಧನಲಕ್ಷ್ಮಿ ಅವರು ಮಧ್ಯಾಹ್ನ 12.30ರ ಸುಮಾರಿಗೆ ಅಂಚೆ ಕಚೇರಿಗೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಪೊಲೀಸರೆಂದು ಪರಿಚಯಿಸಿಕೊಂಡು ಚಿನ್ನಾಭರಣ ದೋಚಿದ್ದಾರೆ.</p>.<p><br /> ಅವರಿಗೆ ಅಪರಿಚಿತ ವ್ಯಕ್ತಿಗಳು ಪೊಲೀಸ್ ಗುರುತಿನ ಚೀಟಿಯೊಂದನ್ನು ತೋರಿಸಿ, `ಮುಂದಿನ ರಸ್ತೆಯಲ್ಲಿ ಕೊಲೆಯಾಗಿದೆ. ಆಭರಣಗಳನ್ನು ಬಿಚ್ಚಿ ಪರ್ಸ್ನಲ್ಲಿ ಇಟ್ಟುಕೊಳ್ಳಿ~ ಎಂದು ಹೇಳಿದ್ದಾರೆ. ಇದರಿಂದ ಆತಂಕಗೊಂಡ ಅವರು ಆಭರಣಗಳನ್ನು ಬಿಚ್ಚಿದ್ದಾರೆ. ಈ ವೇಳೆ ಅವರಿಗೆ ನೆರವು ನೀಡುವ ನೆಪದಲ್ಲಿ ಆಭರಣಗಳನ್ನು ಪಡೆದ ಕಿಡಿಗೇಡಿಗಳು ಅವುಗಳನ್ನು ಪರ್ಸ್ನಲ್ಲಿ ಹಾಕಿದಂತೆ ಮಾಡಿ ಪರಾರಿಯಾಗಿದ್ದಾರೆ.<br /> <br /> ಧನಲಕ್ಷ್ಮಿ ಅವರು ಮನೆಗೆ ಹೋಗಿ ಪರ್ಸ್ ತೆರೆದು ನೋಡಿದಾಗ ಆಭರಣಗಳು ಇಲ್ಲದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿನ್ನದ ಎರಡು ಬಳೆ, ಸರ ಮತ್ತು ಉಂಗುರವನ್ನು ಕಿಡಿಗೇಡಿಗಳು ದೋಚಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.<br /> <br /> <strong>ಹೊರಮಾವು ರಸ್ತೆ: ಮತ್ತೊಂದು ಪ್ರಕರಣ</strong><br /> ಹೊರಮಾವು ಮುಖ್ಯರಸ್ತೆಯಲ್ಲಿ ಬೆಳಿಗ್ಗೆ 11.45ರ ಸುಮಾರಿಗೆ ಇದೇ ರೀತಿಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಧು (62) ಎಂಬ ಮಹಿಳೆಯ 60 ಗ್ರಾಂ ಆಭರಣಗಳನ್ನು ದೋಚಿದ್ದಾರೆ.<br /> <br /> ವಿಜಯಾ ಬ್ಯಾಂಕ್ ಕಾಲೊನಿ ನಿವಾಸಿಯಾದ ಮಧು ಅವರು ಸಮೀಪದ ಅಂಗಡಿಯೊಂದರಲ್ಲಿ ಮೀನು ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಅಪರಿಚಿತರು ಪೊಲೀಸರೆಂದು ಪರಿಚಯಿಸಿಕೊಂಡು ಈ ಕೃತ್ಯ ಎಸಗಿದ್ದಾರೆ.<br /> <br /> `ಒಂದೇ ತಂಡದ ಸದಸ್ಯರು ಇಂದಿರಾನಗರ ಮತ್ತು ಹೊರಮಾವು ಮುಖ್ಯರಸ್ತೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ಇದೆ. ಪೊಲೀಸರೆಂದು ಪರಿಚಯಿಸಿಕೊಳ್ಳುವ ವ್ಯಕ್ತಿಗಳ ಬಗ್ಗೆ ಮಹಿಳೆಯರು ಸ್ವಲ್ವ ಎಚ್ಚರ ವಹಿಸಬೇಕು. ಅಂತಹ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಆಭರಣಗಳನ್ನು ಬಿಚ್ಚಿ ಕೊಡಬಾರದು~ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.<br /> <br /> <strong>ನಾಲ್ಕು ಲಕ್ಷ ರೂಪಾಯಿ ದರೋಡೆ</strong><br /> ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಾಪಾರಿಯೊಬ್ಬರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ನಾಲ್ಕು ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ಬ್ಯಾಟರಾಯನಪುರ ಎರಡನೇ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.<br /> ಬ್ಯಾಟರಾಯನಪುರ ನಿವಾಸಿ ಅಶೋಕ್ಕುಮಾರ್ ದರೋಡೆಗೆ ಒಳಗಾದವರು. ಪ್ಲಾಸ್ಟಿಕ್ ಚಾಪೆ, ಡೋರ್ ಮ್ಯಾಟ್ ಮತ್ತಿತರ ಸಾಮಗ್ರಿಗಳ ಸಗಟು ವ್ಯಾಪಾರಿಯಾದ ಅವರು ಕುಂಬಾರಪೇಟೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವಹಿವಾಟು ಮುಗಿದ ನಂತರ ಅಶೋಕ್ಕುಮಾರ್ ಅವರು ನಾಲ್ಕು ಲಕ್ಷ ಹಣವನ್ನು ದ್ವಿಚಕ್ರ ವಾಹನದ ಬಾಕ್ಸ್ನಲ್ಲಿ ಇಟ್ಟುಕೊಂಡು ಅಂಗಡಿಯಿಂದ ಮನೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. <br /> <br /> ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಅವರಿಗೆ ಉದ್ದೇಶಪೂರ್ವಕವಾಗಿ ವಾಹನ ಗುದ್ದಿಸಿ ಕೆಳಗೆ ಬೀಳಿಸಿದ್ದಾರೆ. ಈ ವೇಳೆ ಅವರಿಗೆ ನೆರವು ನೀಡುವ ಸೋಗಿನಲ್ಲಿ ಗಮನ ಬೇರೆಡೆ ಸೆಳೆದು, ವಾಹನದ ಬಾಕ್ಸ್ನಲ್ಲಿದ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.<br /> <br /> <strong>ಅಪಘಾತ; ಬೈಕ್ ಸವಾರ ಸಾವು</strong><br /> ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ.<br /> <br /> ಮೈಸೂರು ರಸ್ತೆಯ ವಿನಾಯಕ ಚಿತ್ರಮಂದಿರ ಸಮೀಪದ ಫ್ಲವರ್ ಗಾರ್ಡನ್ ನಿವಾಸಿ ರಾಮಲಿಂಗಂ (42) ಮೃತಪಟ್ಟವರು. ಅವರು ಅಲಂಕಾರ್ ಪ್ಲಾಜಾದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅವರು ಸ್ನೇಹಿತ ರಮೇಶ್ ಜತೆ ರಾಜರಾಜೇಶ್ವರಿನಗರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಿಎಂಟಿಸಿ ಬಸ್ ಅವರ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ರಾಮಲಿಂಗಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಹಿಂಬದಿ ಸವಾರ ರಮೇಶ್ (32) ಅವರ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮೆಜೆಸ್ಟಿಕ್ನಿಂದ ಬಿಡದಿಗೆ ಹೋಗುತ್ತಿತ್ತು. ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.<br /> <br /> <strong>ವಿದ್ಯಾರ್ಥಿನಿಗೆ ಗಾಯ</strong><br /> ಕಂಟೇನರ್ ವಾಹನ ಕಾರು ಮತ್ತು ದ್ವಿಚಕ್ರ ವಾಹನದ ಮೇಲೆ ಉರುಳಿ ಬಿದ್ದು ವಿದ್ಯಾರ್ಥಿನಿಯೊಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯ ಸಮೀಪ ಬುಧವಾರ ಸಂಜೆ ನಡೆದಿದೆ.<br /> ಮಾಗಡಿಯ ಶ್ವೇತಾ (19) ಗಾಯಗೊಂಡ ವಿದ್ಯಾರ್ಥಿನಿ. ಅವರು ನಗರದ ಖಾಸಗಿ ಕಾಲೇಜು ಒಂದರ ಬಿಬಿಎಂ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಕಂಟೇನರ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ವಾಹನ ಗುದ್ದಿಸಿದ್ದಾನೆ. ಈ ವೇಳೆ ಕಂಟೇನರ್ ಉರುಳಿ, ಪಕ್ಕದಲ್ಲೇ ಬರುತ್ತಿದ್ದ ಕಾರು ಮತ್ತು ಶ್ವೇತಾ ಅವರ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಶ್ವೇತಾ ಅವರ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಜಖಂಗೊಂಡಿವೆ. ಕಂಟೇನರ್ ಚಾಲಕ ಪರಾರಿಯಾಗಿದ್ದಾನೆ. <br /> <br /> ಅಪಘಾತ ನಡೆದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಸಂಚಾರ ಸ್ಥಗಿತಗೊಂಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>