<p>ಬಾಗಲಕೋಟೆ: ಜಿಲ್ಲಾ ಪೊಲೀಸ್ ಇಲಾಖೆಯಿಂದ ನವನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟ ಭಾನುವಾರ ಆರಂಭಗೊಂಡಿತು.<br /> <br /> ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಮನೋಜ್ ಜೈನ್, ಮನೆ, ಮಡದಿ, ಮಕ್ಕಳು, ಹಬ್ಬ, ಆಚರಣೆಗಳನ್ನು ಮರೆತು ವರ್ಷ ಪೂರ್ತಿ ಸಮಾಜಕ್ಕೆ ರಕ್ಷಣೆ ನೀಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು.<br /> <br /> ಕೆಲಸದ ಒತ್ತಡದಲ್ಲಿ ಮಾನಸಿಕವಾಗಿ, ದೈಹಿಕವಾಗಿ ಬಳಲಿರುವ ಮನಸ್ಸಿಗೆ ಸಮಾದಾನ ನೀಡಲು ಹಾಗೂ ದೈಹಿಕವಾಗಿ ಮತ್ತಷ್ಟು ಬಲಿಷ್ಠರಾಗಲು ಪೊಲೀಸರಿಗೆ ಕ್ರೀಡೆ ಅತೀ ಮುಖ್ಯ ಎಂದರು.<br /> <br /> ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಏಕ ತಂಡವಾಗಿ ಮುನ್ನೆಡೆಯುವುದು ಮುಖ್ಯ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಖುಷಿ ಪಡಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮೂಲತಃ ಜಮಖಂಡಿ ತಾಲ್ಲೂಕಿನ ಹುಲ್ಯಾಳದವರಾದ ಚನ್ನಪ್ಪ ಶಿವಸಿಂಪಿ, ಬಾಗಲಕೋಟೆ ಡಿಎಸ್ಪಿ ವಿ.ಪಿ. ಜಗಲಿ, ಜಮಖಂಡಿ ಡಿಎಸ್ಪಿ ಜಿ.ಎಂ.ದೇಸೂರ್, ಡಿಸಿಆರ್ಬಿ ಡಿಎಸ್ಪಿ ಬಿ.ಪಿ.ಹಲಸಗುಂದ ಮತ್ತಿತರರು ಉಪಸ್ಥಿತರಿದ್ದರು.<br /> <br /> ಬಾದಾಮಿ, ಹುನಗುಂದ, ಬಾಗಲಕೋಟೆ, ಜಮಖಂಡಿ, ಮುಧೋಳ, ಬನಹಟ್ಟಿ–ಬೀಳಗಿ, ಡಿಆರ್ ಹಾಗೂ ಮಹಿಳಾ ತಂಡ ಸೇರಿದಂತೆ ಒಟ್ಟು 8 ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಜಿಲ್ಲಾ ಪೊಲೀಸ್ ಇಲಾಖೆಯಿಂದ ನವನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟ ಭಾನುವಾರ ಆರಂಭಗೊಂಡಿತು.<br /> <br /> ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಮನೋಜ್ ಜೈನ್, ಮನೆ, ಮಡದಿ, ಮಕ್ಕಳು, ಹಬ್ಬ, ಆಚರಣೆಗಳನ್ನು ಮರೆತು ವರ್ಷ ಪೂರ್ತಿ ಸಮಾಜಕ್ಕೆ ರಕ್ಷಣೆ ನೀಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು.<br /> <br /> ಕೆಲಸದ ಒತ್ತಡದಲ್ಲಿ ಮಾನಸಿಕವಾಗಿ, ದೈಹಿಕವಾಗಿ ಬಳಲಿರುವ ಮನಸ್ಸಿಗೆ ಸಮಾದಾನ ನೀಡಲು ಹಾಗೂ ದೈಹಿಕವಾಗಿ ಮತ್ತಷ್ಟು ಬಲಿಷ್ಠರಾಗಲು ಪೊಲೀಸರಿಗೆ ಕ್ರೀಡೆ ಅತೀ ಮುಖ್ಯ ಎಂದರು.<br /> <br /> ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಏಕ ತಂಡವಾಗಿ ಮುನ್ನೆಡೆಯುವುದು ಮುಖ್ಯ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಖುಷಿ ಪಡಬೇಕು ಎಂದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮೂಲತಃ ಜಮಖಂಡಿ ತಾಲ್ಲೂಕಿನ ಹುಲ್ಯಾಳದವರಾದ ಚನ್ನಪ್ಪ ಶಿವಸಿಂಪಿ, ಬಾಗಲಕೋಟೆ ಡಿಎಸ್ಪಿ ವಿ.ಪಿ. ಜಗಲಿ, ಜಮಖಂಡಿ ಡಿಎಸ್ಪಿ ಜಿ.ಎಂ.ದೇಸೂರ್, ಡಿಸಿಆರ್ಬಿ ಡಿಎಸ್ಪಿ ಬಿ.ಪಿ.ಹಲಸಗುಂದ ಮತ್ತಿತರರು ಉಪಸ್ಥಿತರಿದ್ದರು.<br /> <br /> ಬಾದಾಮಿ, ಹುನಗುಂದ, ಬಾಗಲಕೋಟೆ, ಜಮಖಂಡಿ, ಮುಧೋಳ, ಬನಹಟ್ಟಿ–ಬೀಳಗಿ, ಡಿಆರ್ ಹಾಗೂ ಮಹಿಳಾ ತಂಡ ಸೇರಿದಂತೆ ಒಟ್ಟು 8 ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>