<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುತ್ತಿಗೆ ಪೌರಕಾರ್ಮಿಕರಿಗೆ ಸಮರ್ಪಕವಾಗಿ ವೇತನ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗಿದೆ. ಮೂರ್ನಾಲ್ಕು ತಿಂಗಳಿಂದ ಸರಿಯಾಗಿ ವೇತನ ಸಿಗದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬುದು ಪೌರಕಾರ್ಮಿಕರ ಅಳಲು.<br /> <br /> ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 17 ಸಾವಿರ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಪ್ರತಿ ಪೌರಕಾರ್ಮಿಕರಿಗೆ ತಿಂಗಳಿಗೆ ₨ 5,400 ವೇತನ ನೀಡಲಾಗುತ್ತಿದೆ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ಚೆಕ್ ರೂಪದಲ್ಲಿ ವೇತನ ನೀಡುವ ವ್ಯವಸ್ಥೆ ಇದೆ.<br /> <br /> ‘ಕೆಲ ಮಧ್ಯವರ್ತಿಗಳು ಚೆಕ್ಗಳನ್ನು ಪಡೆದು ಹಣ ನೀಡದೆ ವಂಚಿಸುತ್ತಿದ್ದಾರೆ. ಕೆಲ ಗುತ್ತಿಗೆದಾರರು ಬಿಬಿಎಂಪಿಯಿಂದ ಚೆಕ್ ಬಂದಿಲ್ಲ ಎಂದು ಹೇಳುತ್ತಾರೆ. ಪ್ರತಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ವೇತನದ ಹಣ ಜಮೆ ಮಾಡಿದರೆ ಈ ಸಮಸ್ಯೆಯೇ ಇರುವುದಿಲ್ಲ’ ಎನ್ನುತ್ತಾರೆ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ್.<br /> ‘ಪೌರಕಾರ್ಮಿಕರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದ್ದಾರೆ.<br /> <br /> ಆರೋಗ್ಯ ವಿಮೆ ಹಾಗೂ ಭವಿಷ್ಯನಿಧಿಯ ಹಣವನ್ನು ಗುತ್ತಿಗೆದಾರರು ಸರಿಯಾಗಿ ಪಾವತಿಸುತ್ತಿಲ್ಲ. ಈ ಬಗ್ಗೆ ಪಾಲಿಕೆಯ ಆಯುಕ್ತರಿಗೂ ದೂರು ನೀಡಿದ್ದೇವೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಪ್ರತಿ ತಿಂಗಳ ವೇತನ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲು ಬಿಬಿಎಂಪಿ ಮುಂದಾಗಬೇಕು. ಭವಿಷ್ಯನಿಧಿಗೆ ಗುತ್ತಿಗೆದಾರರ ಪಾಲಿನ ಹಣವನ್ನು ಕಡ್ಡಾಯವಾಗಿ ಕಟ್ಟಿಸಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.<br /> <br /> ‘ಮೂರು ತಿಂಗಳಿಂದ ವೇತನ ಬಂದಿಲ್ಲ. ಗುತ್ತಿಗೆದಾರರು ನೀಡಿದ ಚೆಕ್ ಬ್ಯಾಂಕ್ಗೆ ಹಾಕಿದರೆ ಹಣ ಜಮೆ ಆಗುತ್ತಿಲ್ಲ. ಚೆಕ್ ವಾಪಸ್ ಹೋಗುತ್ತಿದೆ ಎಂದು ಬ್ಯಾಂಕ್ನವರು ಹೇಳುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ಬಿಬಿಎಂಪಿ ಅಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರರತ್ತ ಬೆರಳು ತೋರುತ್ತಾರೆ’ ಎಂದು ಪೌರಕಾರ್ಮಿಕ ಮಹಿಳೆ ಶಾರದಮ್ಮ ದೂರಿದರು.<br /> <br /> ‘ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ವೇತನದ ಹಣ ಜಮೆ ಆಗುವಂತೆ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಇದರಿಂದ ವೇತನ ವಿಳಂಬ ಹಾಗೂ ಚೆಕ್ ವಾಪಸ್ ಹೋಗುವುದನ್ನು ತಪ್ಪಿಸಬಹುದು. ಈ ಬಗ್ಗೆ ಪಾಲಿಕೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಚಿಂತಿಸಬೇಕು’ ಎಂದು ಅವರು ಹೇಳಿದರು.<br /> <br /> ಈ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ‘ಬೊಮ್ಮನಹಳ್ಳಿ ವಲಯದಲ್ಲಿ ಪೌರಕಾರ್ಮಿಕರಿಗೆ ಸರಿಯಾಗಿ ಚೆಕ್ ನೀಡುತ್ತಿಲ್ಲ ಎಂಬ ದೂರುಗಳಿದ್ದವು. ಆ ಸಮಸ್ಯೆಯನ್ನು ಪರಿಹರಿಸಲಾಗಿದೆ. ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಅವರೊಂದಿಗೆ ಪಾಲಿಕೆ ನೇರ ಸಂಬಂಧ ಹೊಂದಿರುವುದಿಲ್ಲ. ಪ್ರತಿ ತಿಂಗಳು ಗುತ್ತಿಗೆದಾರರಿಗೆ ವೇತನದ ಚೆಕ್ ವಿತರಿಸಲಾಗುತ್ತಿದೆ. ಈ ಬಗ್ಗೆ ದೂರುಗಳಿದ್ದರೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.<br /> <br /> <strong>ಗುತ್ತಿಗೆದಾರರ ವಿರುದ್ಧ ಕ್ರಮ<br /> ಗುತ್ತಿಗೆದಾರರು ಪೌರಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ </strong>ಇದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನದ ಹಣ ನೇರವಾಗಿ ಜಮೆ ಮಾಡುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗುವುದು.<br /> –ಎಂ.ಲಕ್ಷ್ಮೀನಾರಾಯಣ,<br /> ಆಯುಕ್ತರು, ಬಿಬಿಎಂಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುತ್ತಿಗೆ ಪೌರಕಾರ್ಮಿಕರಿಗೆ ಸಮರ್ಪಕವಾಗಿ ವೇತನ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗಿದೆ. ಮೂರ್ನಾಲ್ಕು ತಿಂಗಳಿಂದ ಸರಿಯಾಗಿ ವೇತನ ಸಿಗದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬುದು ಪೌರಕಾರ್ಮಿಕರ ಅಳಲು.<br /> <br /> ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 17 ಸಾವಿರ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಪ್ರತಿ ಪೌರಕಾರ್ಮಿಕರಿಗೆ ತಿಂಗಳಿಗೆ ₨ 5,400 ವೇತನ ನೀಡಲಾಗುತ್ತಿದೆ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ಚೆಕ್ ರೂಪದಲ್ಲಿ ವೇತನ ನೀಡುವ ವ್ಯವಸ್ಥೆ ಇದೆ.<br /> <br /> ‘ಕೆಲ ಮಧ್ಯವರ್ತಿಗಳು ಚೆಕ್ಗಳನ್ನು ಪಡೆದು ಹಣ ನೀಡದೆ ವಂಚಿಸುತ್ತಿದ್ದಾರೆ. ಕೆಲ ಗುತ್ತಿಗೆದಾರರು ಬಿಬಿಎಂಪಿಯಿಂದ ಚೆಕ್ ಬಂದಿಲ್ಲ ಎಂದು ಹೇಳುತ್ತಾರೆ. ಪ್ರತಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ವೇತನದ ಹಣ ಜಮೆ ಮಾಡಿದರೆ ಈ ಸಮಸ್ಯೆಯೇ ಇರುವುದಿಲ್ಲ’ ಎನ್ನುತ್ತಾರೆ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ್.<br /> ‘ಪೌರಕಾರ್ಮಿಕರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದ್ದಾರೆ.<br /> <br /> ಆರೋಗ್ಯ ವಿಮೆ ಹಾಗೂ ಭವಿಷ್ಯನಿಧಿಯ ಹಣವನ್ನು ಗುತ್ತಿಗೆದಾರರು ಸರಿಯಾಗಿ ಪಾವತಿಸುತ್ತಿಲ್ಲ. ಈ ಬಗ್ಗೆ ಪಾಲಿಕೆಯ ಆಯುಕ್ತರಿಗೂ ದೂರು ನೀಡಿದ್ದೇವೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಪ್ರತಿ ತಿಂಗಳ ವೇತನ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲು ಬಿಬಿಎಂಪಿ ಮುಂದಾಗಬೇಕು. ಭವಿಷ್ಯನಿಧಿಗೆ ಗುತ್ತಿಗೆದಾರರ ಪಾಲಿನ ಹಣವನ್ನು ಕಡ್ಡಾಯವಾಗಿ ಕಟ್ಟಿಸಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.<br /> <br /> ‘ಮೂರು ತಿಂಗಳಿಂದ ವೇತನ ಬಂದಿಲ್ಲ. ಗುತ್ತಿಗೆದಾರರು ನೀಡಿದ ಚೆಕ್ ಬ್ಯಾಂಕ್ಗೆ ಹಾಕಿದರೆ ಹಣ ಜಮೆ ಆಗುತ್ತಿಲ್ಲ. ಚೆಕ್ ವಾಪಸ್ ಹೋಗುತ್ತಿದೆ ಎಂದು ಬ್ಯಾಂಕ್ನವರು ಹೇಳುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ಬಿಬಿಎಂಪಿ ಅಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರರತ್ತ ಬೆರಳು ತೋರುತ್ತಾರೆ’ ಎಂದು ಪೌರಕಾರ್ಮಿಕ ಮಹಿಳೆ ಶಾರದಮ್ಮ ದೂರಿದರು.<br /> <br /> ‘ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ವೇತನದ ಹಣ ಜಮೆ ಆಗುವಂತೆ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಇದರಿಂದ ವೇತನ ವಿಳಂಬ ಹಾಗೂ ಚೆಕ್ ವಾಪಸ್ ಹೋಗುವುದನ್ನು ತಪ್ಪಿಸಬಹುದು. ಈ ಬಗ್ಗೆ ಪಾಲಿಕೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಚಿಂತಿಸಬೇಕು’ ಎಂದು ಅವರು ಹೇಳಿದರು.<br /> <br /> ಈ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ‘ಬೊಮ್ಮನಹಳ್ಳಿ ವಲಯದಲ್ಲಿ ಪೌರಕಾರ್ಮಿಕರಿಗೆ ಸರಿಯಾಗಿ ಚೆಕ್ ನೀಡುತ್ತಿಲ್ಲ ಎಂಬ ದೂರುಗಳಿದ್ದವು. ಆ ಸಮಸ್ಯೆಯನ್ನು ಪರಿಹರಿಸಲಾಗಿದೆ. ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಅವರೊಂದಿಗೆ ಪಾಲಿಕೆ ನೇರ ಸಂಬಂಧ ಹೊಂದಿರುವುದಿಲ್ಲ. ಪ್ರತಿ ತಿಂಗಳು ಗುತ್ತಿಗೆದಾರರಿಗೆ ವೇತನದ ಚೆಕ್ ವಿತರಿಸಲಾಗುತ್ತಿದೆ. ಈ ಬಗ್ಗೆ ದೂರುಗಳಿದ್ದರೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.<br /> <br /> <strong>ಗುತ್ತಿಗೆದಾರರ ವಿರುದ್ಧ ಕ್ರಮ<br /> ಗುತ್ತಿಗೆದಾರರು ಪೌರಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ </strong>ಇದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನದ ಹಣ ನೇರವಾಗಿ ಜಮೆ ಮಾಡುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗುವುದು.<br /> –ಎಂ.ಲಕ್ಷ್ಮೀನಾರಾಯಣ,<br /> ಆಯುಕ್ತರು, ಬಿಬಿಎಂಪಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>