<p><strong>ಬೆಂಗಳೂರು: </strong>`ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,000 ಪೌರಕಾರ್ಮಿಕರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾಯ ಪ್ರಕಟಿಸಿದರು.<br /> <br /> ಸೋಮವಾರ ವರದಿಗಾರರ ಜೊತೆ ಮಾತನಾಡಿದ ಅವರು, `ಪೌರಕಾರ್ಮಿಕರ ನೇಮಕದಿಂದ ನಗರದ ಸ್ವಚ್ಛತಾ ಸಮಸ್ಯೆ ಬಹುಮಟ್ಟಿಗೆ ತಗ್ಗಲಿದ್ದು, ಇದರಿಂದ ಬಿಬಿಎಂಪಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ' ಎಂದು ಅಭಿಪ್ರಾಯಪಟ್ಟರು.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಆರ್. ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನೇಮಕಾತಿ ಮಾರ್ಗಸೂಚಿ ಸಿದ್ಧಪಡಿಸಲಾಗುವುದು. ಕೌನ್ಸಿಲ್ ಸಭೆಯಿಂದ ಮಾರ್ಗಸೂಚಿಗೆ ಒಪ್ಪಿಗೆ ಪಡೆಯಲಾಗುವುದು' ಎಂದರು. `ಬಿಬಿಎಂಪಿಗೆ 20,000 ಪೌರಕಾರ್ಮಿಕರ ಅಗತ್ಯವಿದ್ದು, ಹಂತ, ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು. ಮೊದಲ ಹಂತದಲ್ಲಿ 4,000 ಕಾರ್ಮಿಕರ ನೇಮಕಕ್ಕೆ ಅನುಮತಿ ದೊರೆತಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,000 ಪೌರಕಾರ್ಮಿಕರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾಯ ಪ್ರಕಟಿಸಿದರು.<br /> <br /> ಸೋಮವಾರ ವರದಿಗಾರರ ಜೊತೆ ಮಾತನಾಡಿದ ಅವರು, `ಪೌರಕಾರ್ಮಿಕರ ನೇಮಕದಿಂದ ನಗರದ ಸ್ವಚ್ಛತಾ ಸಮಸ್ಯೆ ಬಹುಮಟ್ಟಿಗೆ ತಗ್ಗಲಿದ್ದು, ಇದರಿಂದ ಬಿಬಿಎಂಪಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ' ಎಂದು ಅಭಿಪ್ರಾಯಪಟ್ಟರು.<br /> <br /> `ಜಿಲ್ಲಾ ಉಸ್ತುವಾರಿ ಸಚಿವ ಆರ್. ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನೇಮಕಾತಿ ಮಾರ್ಗಸೂಚಿ ಸಿದ್ಧಪಡಿಸಲಾಗುವುದು. ಕೌನ್ಸಿಲ್ ಸಭೆಯಿಂದ ಮಾರ್ಗಸೂಚಿಗೆ ಒಪ್ಪಿಗೆ ಪಡೆಯಲಾಗುವುದು' ಎಂದರು. `ಬಿಬಿಎಂಪಿಗೆ 20,000 ಪೌರಕಾರ್ಮಿಕರ ಅಗತ್ಯವಿದ್ದು, ಹಂತ, ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು. ಮೊದಲ ಹಂತದಲ್ಲಿ 4,000 ಕಾರ್ಮಿಕರ ನೇಮಕಕ್ಕೆ ಅನುಮತಿ ದೊರೆತಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>