<p>ತುಮಕೂರು: ಕೆಜಿಎಫ್ನಲ್ಲಿ ಪಿಟ್ಗುಂಡಿ ಸ್ವಚ್ಛತೆ ಮಾಡುವ ಸಮಯದಲ್ಲಿ ಮೂವರು ಪೌರ ಕಾರ್ಮಿಕರು ಮೃತಪಟ್ಟ ಘಟನೆಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಕಾರ್ಯಕರ್ತರು ನಗರದ ಟೌನ್ಹಾಲ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ಪೌರಕಾರ್ಮಿಕರ ಸಾವನ್ನು ಕೊಲೆ ಎಂದು ಪರಿಗಣಿಸಬೇಕು ಹಾಗೂ ಕೋಲಾರ ಜಿಲ್ಲಾಧಿಕಾರಿ, ಕೆಜಿಎಫ್ ನಗರಸಭೆ ಆಯುಕ್ತರ ಮೇಲೆ ಕೊಲೆ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.<br /> <br /> ಮೃತರ ಕುಟುಂಬಕ್ಕೆ ತಲಾ ರೂ. 10 ಲಕ್ಷ ಪರಿಹಾರ ನೀಡಬೇಕು. ಮೃತ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ದುಡಿಯುತ್ತಿರುವ ಗುತ್ತಿಗೆ ಆಧಾರದ ಪೌರ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಪ್ರಗತಿಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ಪಿಟ್ಗುಂಡಿಯಲ್ಲಿ ಬಿದ್ದು ಪೌರಕಾರ್ಮಿಕರು ಸಾಯಲು ಆಡಳಿತದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಜಿಲ್ಲಾಧಿಕಾರಿ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.<br /> <br /> ಪ್ರಾಂತ ರೈತ ಸಂಘದ ಮುಖಂಡ ಬಿ.ಉಮೇಶ್, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್ ಮುಜೀಬ್, ಸೈಯದ್ ಅಲ್ತಾಫ್, ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಮುಖಂಡರಾದ ವೆಂಕಟೇಶ್, ಚಂದ್ರಪ್ಪ ಮುಂತಾದವರು ಮಾತನಾಡಿದರು.<br /> <br /> ಪ್ರತಿಭಟನೆ ನೇತೃತ್ವವನ್ನು ಮುಖಂಡರಾದ ಕೆ.ನರಸಿಂಹಮೂರ್ತಿ, ರವಿ, ನರಸಿಂಹಮೂರ್ತಿ, ಕದರಪ್ಪ, ಕೆಂಪಣ್ಣ, ಶೆಟ್ಟಳಯ್ಯ, ದರ್ಶನ್, ಸರ್ದಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕೆಜಿಎಫ್ನಲ್ಲಿ ಪಿಟ್ಗುಂಡಿ ಸ್ವಚ್ಛತೆ ಮಾಡುವ ಸಮಯದಲ್ಲಿ ಮೂವರು ಪೌರ ಕಾರ್ಮಿಕರು ಮೃತಪಟ್ಟ ಘಟನೆಗೆ ಸರ್ಕಾರವೇ ಹೊಣೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಕಾರ್ಯಕರ್ತರು ನಗರದ ಟೌನ್ಹಾಲ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.<br /> <br /> ಪೌರಕಾರ್ಮಿಕರ ಸಾವನ್ನು ಕೊಲೆ ಎಂದು ಪರಿಗಣಿಸಬೇಕು ಹಾಗೂ ಕೋಲಾರ ಜಿಲ್ಲಾಧಿಕಾರಿ, ಕೆಜಿಎಫ್ ನಗರಸಭೆ ಆಯುಕ್ತರ ಮೇಲೆ ಕೊಲೆ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.<br /> <br /> ಮೃತರ ಕುಟುಂಬಕ್ಕೆ ತಲಾ ರೂ. 10 ಲಕ್ಷ ಪರಿಹಾರ ನೀಡಬೇಕು. ಮೃತ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ರಾಜ್ಯದಲ್ಲಿ ದುಡಿಯುತ್ತಿರುವ ಗುತ್ತಿಗೆ ಆಧಾರದ ಪೌರ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.<br /> <br /> ಪ್ರಗತಿಪರ ಚಿಂತಕ ಕೆ.ದೊರೈರಾಜ್ ಮಾತನಾಡಿ, ಪಿಟ್ಗುಂಡಿಯಲ್ಲಿ ಬಿದ್ದು ಪೌರಕಾರ್ಮಿಕರು ಸಾಯಲು ಆಡಳಿತದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಜಿಲ್ಲಾಧಿಕಾರಿ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.<br /> <br /> ಪ್ರಾಂತ ರೈತ ಸಂಘದ ಮುಖಂಡ ಬಿ.ಉಮೇಶ್, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್ ಮುಜೀಬ್, ಸೈಯದ್ ಅಲ್ತಾಫ್, ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಮುಖಂಡರಾದ ವೆಂಕಟೇಶ್, ಚಂದ್ರಪ್ಪ ಮುಂತಾದವರು ಮಾತನಾಡಿದರು.<br /> <br /> ಪ್ರತಿಭಟನೆ ನೇತೃತ್ವವನ್ನು ಮುಖಂಡರಾದ ಕೆ.ನರಸಿಂಹಮೂರ್ತಿ, ರವಿ, ನರಸಿಂಹಮೂರ್ತಿ, ಕದರಪ್ಪ, ಕೆಂಪಣ್ಣ, ಶೆಟ್ಟಳಯ್ಯ, ದರ್ಶನ್, ಸರ್ದಾರ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>