<p>ಬೆಂಗಳೂರು: ನೂತನ ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ವಿಶೇಷ ಅನುದಾನ ಮೀಸಲಿಡಬೇಕು ಹಾಗೂ 18 ವರ್ಷದೊಳಗಿನ ಮಕ್ಕಳ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸಾಮಾಜಿಕ ಪರಿವರ್ತನಾ ಜನಾಂದೋಲನ ಸಮಿತಿ ಆಗ್ರಹಿಸಿದೆ.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಎಂ.ನಾರಾಯಣಸ್ವಾಮಿ, ಅಪೌಷ್ಟಿಕತೆಯಿಂದ ಬಳಲುವ ಮ್ಕಕಳ ಸಂಖ್ಯೆಯನ್ನು ಕಡಿಮೆ ಮಾಡಲು ಅಂಗನವಾಡಿ ಮಕ್ಕಳಿಗೆ ಈಗಾಗಲೇ ಹಾಲು, ಮೊಟ್ಟೆ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ ಈ ಯೋಜನೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಆರೋಪಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸುವ ವ್ಯವಸ್ಥೆಯನ್ನು ಪುನಃ ಪ್ರಾರಂಭಿಸಬೇಕು. ಮಕ್ಕಳ ಅಪೌಷ್ಟಿಕತೆ ಹಾಗೂ ಅಂಗನವಾಡಿಗಳ ಸಬಲೀಕರಣಕ್ಕಾಗಿ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಮರ್ಥವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಶಾಲಾ ಶಿಕ್ಷಣದ ಉನ್ನತೀಕರಣ ಹಾಗೂ ಪುನರ್ ಸಂಘಟನೆಯ ಹೆಸರಿನಲ್ಲಿ ದೆಹಲಿಯ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆರ್.ಗೋವಿಂದ್ ಅವರು ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸಬಹುದು ಎಂದು ವರದಿ ನೀಡಿದ್ದಾರೆ. ಇದರಿಂದ ಹಲವಾರು ಸರ್ಕಾರಿ ಶಾಲೆಗಳನ್ನು ಮುಚ್ಚಬೇಕಾಗುತ್ತದೆ. ಹೀಗಾಗಿ ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಮನವಿ ಮಾಡಿದರು.<br /> <br /> ಜೊತೆಗೆ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ, ಮೂಲಸೌಲಭ್ಯಗಳನ್ನು ಒದಗಿಸಿ, ಶಿಕ್ಷರನ್ನು ನೇಮಕಮಾಡುವ ಮೂಲಕ ಕೇಂದ್ರೀಯ ಶಾಲೆಗಳ ಮಟ್ಟಕ್ಕೆ ಉನ್ನತೀಕರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನೂತನ ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ವಿಶೇಷ ಅನುದಾನ ಮೀಸಲಿಡಬೇಕು ಹಾಗೂ 18 ವರ್ಷದೊಳಗಿನ ಮಕ್ಕಳ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸಾಮಾಜಿಕ ಪರಿವರ್ತನಾ ಜನಾಂದೋಲನ ಸಮಿತಿ ಆಗ್ರಹಿಸಿದೆ.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಎಂ.ನಾರಾಯಣಸ್ವಾಮಿ, ಅಪೌಷ್ಟಿಕತೆಯಿಂದ ಬಳಲುವ ಮ್ಕಕಳ ಸಂಖ್ಯೆಯನ್ನು ಕಡಿಮೆ ಮಾಡಲು ಅಂಗನವಾಡಿ ಮಕ್ಕಳಿಗೆ ಈಗಾಗಲೇ ಹಾಲು, ಮೊಟ್ಟೆ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ ಈ ಯೋಜನೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಆರೋಪಿಸಿದರು.<br /> <br /> ಈ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸುವ ವ್ಯವಸ್ಥೆಯನ್ನು ಪುನಃ ಪ್ರಾರಂಭಿಸಬೇಕು. ಮಕ್ಕಳ ಅಪೌಷ್ಟಿಕತೆ ಹಾಗೂ ಅಂಗನವಾಡಿಗಳ ಸಬಲೀಕರಣಕ್ಕಾಗಿ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿರುವ ವರದಿಯನ್ನು ಸಮರ್ಥವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಶಾಲಾ ಶಿಕ್ಷಣದ ಉನ್ನತೀಕರಣ ಹಾಗೂ ಪುನರ್ ಸಂಘಟನೆಯ ಹೆಸರಿನಲ್ಲಿ ದೆಹಲಿಯ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆರ್.ಗೋವಿಂದ್ ಅವರು ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸಬಹುದು ಎಂದು ವರದಿ ನೀಡಿದ್ದಾರೆ. ಇದರಿಂದ ಹಲವಾರು ಸರ್ಕಾರಿ ಶಾಲೆಗಳನ್ನು ಮುಚ್ಚಬೇಕಾಗುತ್ತದೆ. ಹೀಗಾಗಿ ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಮನವಿ ಮಾಡಿದರು.<br /> <br /> ಜೊತೆಗೆ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ, ಮೂಲಸೌಲಭ್ಯಗಳನ್ನು ಒದಗಿಸಿ, ಶಿಕ್ಷರನ್ನು ನೇಮಕಮಾಡುವ ಮೂಲಕ ಕೇಂದ್ರೀಯ ಶಾಲೆಗಳ ಮಟ್ಟಕ್ಕೆ ಉನ್ನತೀಕರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>