<p><strong>ಯಲಹಂಕ:</strong> `ಹೆಚ್ಚು ಪೌಷ್ಟಿಕ ಗುಣವಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪೌಷ್ಟಿಕ ಸ್ಥಿತಿ ಸುಧಾರಣೆಗೆ ಕೃಷಿ ವಿಜ್ಞಾನಿಗಳು ಶ್ರಮಿಸಬೇಕು' ಎಂದು ಕೇಂದ್ರ ಸರ್ಕಾರದ ಕೃಷಿ ಮತ್ತು ಸಹಕಾರ ಇಲಾಖೆಯ ಕಾರ್ಯದರ್ಶಿ ಡಾ.ಆಶಿಷ್ ಬಹುಗುಣ ಸಲಹೆ ನೀಡಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ಕೃಷಿ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು, ಭೋದನೆ, ಸಂಶೋಧನೆ ಮತ್ತು ವಿಸ್ತರಣಾ ವಿಭಾಗದ ಮುಖ್ಯಸ್ಥರೊಂದಿಗೆ ನಡೆದ ಸಂವಾದಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> `ನಮ್ಮ ರಾಷ್ಟ್ರ ಆಹಾರದ ಸುಭದ್ರತೆ ಪಡೆದಿದ್ದು, ಪೌಷ್ಟಿಕ ಆಹಾರ ಸುಭದ್ರತೆ ವಿಷಯದಲ್ಲಿ ನಾವು ಸಾಧಿಸಬೇಕಾದುದು ಬಹಳಷ್ಟಿದೆ. ಈ ದಿಸೆಯಲ್ಲಿ ವಿಜ್ಞಾನಿಗಳು ಹೆಚ್ಚಿನ ಪೌಷ್ಟಿಕ ಗುಣವಿರುವ ತಳಿಗಳನ್ನು ಅಭಿವೃದ್ಧಿಪಡಿಸಿ, ಬಿಡುಗಡೆ ಮಾಡಲು ಒತ್ತು ನೀಡಬೇಕು' ಎಂದು ಹೇಳಿದರು.<br /> <br /> `ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಲು ಕೃಷಿ ಉಪಕರಣಗಳ ಬಳಕೆ, ಮಣ್ಣು ಮತ್ತು ನೀರು ಸಂರಕ್ಷಣೆ, ರೈತರಿಗೆ ಎಲೆಕ್ಟ್ರಾನಿಕ್ ತಾಂತ್ರಿಕ ವಿಧಾನಗಳ ಬಗ್ಗೆ ಸೂಕ್ತ ಕಾಲದಲ್ಲಿ ಸೂಕ್ತ ಮಾಹಿತಿ ನೀಡುವುದು ಕೃಷಿ ಅಭಿವೃದ್ಧಿಗೆ ಬಹಳ ಮುಖ್ಯ ಎಂದು ತಿಳಿಸಿದರು.<br /> <br /> ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ, ಕೃಷಿ ನಿರ್ದೇಶಕ ಡಾ.ಡಿ.ಪಿ.ಕುಮಾರ್, ಕುಲಸಚಿವ ಡಾ.ಎಚ್.ನಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.<br /> <br /> ನಂತರ ಬಹುಗುಣ ಅವರು, ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿವಿಧ ತಾಕುಗಳು ಹಾಗೂ ವಿಭಾಗಗಳಿಗೆ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> `ಹೆಚ್ಚು ಪೌಷ್ಟಿಕ ಗುಣವಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪೌಷ್ಟಿಕ ಸ್ಥಿತಿ ಸುಧಾರಣೆಗೆ ಕೃಷಿ ವಿಜ್ಞಾನಿಗಳು ಶ್ರಮಿಸಬೇಕು' ಎಂದು ಕೇಂದ್ರ ಸರ್ಕಾರದ ಕೃಷಿ ಮತ್ತು ಸಹಕಾರ ಇಲಾಖೆಯ ಕಾರ್ಯದರ್ಶಿ ಡಾ.ಆಶಿಷ್ ಬಹುಗುಣ ಸಲಹೆ ನೀಡಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ಕೃಷಿ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು, ಭೋದನೆ, ಸಂಶೋಧನೆ ಮತ್ತು ವಿಸ್ತರಣಾ ವಿಭಾಗದ ಮುಖ್ಯಸ್ಥರೊಂದಿಗೆ ನಡೆದ ಸಂವಾದಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br /> <br /> `ನಮ್ಮ ರಾಷ್ಟ್ರ ಆಹಾರದ ಸುಭದ್ರತೆ ಪಡೆದಿದ್ದು, ಪೌಷ್ಟಿಕ ಆಹಾರ ಸುಭದ್ರತೆ ವಿಷಯದಲ್ಲಿ ನಾವು ಸಾಧಿಸಬೇಕಾದುದು ಬಹಳಷ್ಟಿದೆ. ಈ ದಿಸೆಯಲ್ಲಿ ವಿಜ್ಞಾನಿಗಳು ಹೆಚ್ಚಿನ ಪೌಷ್ಟಿಕ ಗುಣವಿರುವ ತಳಿಗಳನ್ನು ಅಭಿವೃದ್ಧಿಪಡಿಸಿ, ಬಿಡುಗಡೆ ಮಾಡಲು ಒತ್ತು ನೀಡಬೇಕು' ಎಂದು ಹೇಳಿದರು.<br /> <br /> `ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಲು ಕೃಷಿ ಉಪಕರಣಗಳ ಬಳಕೆ, ಮಣ್ಣು ಮತ್ತು ನೀರು ಸಂರಕ್ಷಣೆ, ರೈತರಿಗೆ ಎಲೆಕ್ಟ್ರಾನಿಕ್ ತಾಂತ್ರಿಕ ವಿಧಾನಗಳ ಬಗ್ಗೆ ಸೂಕ್ತ ಕಾಲದಲ್ಲಿ ಸೂಕ್ತ ಮಾಹಿತಿ ನೀಡುವುದು ಕೃಷಿ ಅಭಿವೃದ್ಧಿಗೆ ಬಹಳ ಮುಖ್ಯ ಎಂದು ತಿಳಿಸಿದರು.<br /> <br /> ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ, ಕೃಷಿ ನಿರ್ದೇಶಕ ಡಾ.ಡಿ.ಪಿ.ಕುಮಾರ್, ಕುಲಸಚಿವ ಡಾ.ಎಚ್.ನಂಜಪ್ಪ ಮೊದಲಾದವರು ಉಪಸ್ಥಿತರಿದ್ದರು.<br /> <br /> ನಂತರ ಬಹುಗುಣ ಅವರು, ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿವಿಧ ತಾಕುಗಳು ಹಾಗೂ ವಿಭಾಗಗಳಿಗೆ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>