<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ `ಬ್ಲೂ ಫಿಲಂ~ ವೀಕ್ಷಿಸಿದ ಘಟನೆಗೆ ಸಂಬಂಧಿಸಿದ ಸದನದ ವಿಚಾರಣಾ ಸಮಿತಿ ಸದಸ್ಯ ನೆಹರು ಓಲೇಕಾರ್ ಅವರು, ನೀಡಿರುವ ಬಹಿರಂಗ ಹೇಳಿಕೆ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರತಿಪಕ್ಷಗಳು, ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿವೆ.<br /> <br /> `ವಿಚಾರಣೆ ಎದುರಿಸುತ್ತಿರುವ ಮೂವರು ಮಾಜಿ ಸಚಿವರಲ್ಲದೆ ಇನ್ನೂ ಹಲವು ಶಾಸಕರು ಸದನದಲ್ಲಿ ಬ್ಲೂ ಫಿಲಂ ವೀಕ್ಷಿಸಿರುವ ಬಗ್ಗೆ ದಾಖಲೆಗಳಿವೆ~ ಎಂಬ ಓಲೇಕಾರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, `ತನಿಖೆ ಪ್ರಗತಿಯಲ್ಲಿರುವಾಗಲೇ ಸಮಿತಿಯ ಸದಸ್ಯರು ಈ ರೀತಿ ಹೇಳಿಕೆ ನೀಡಿರುವುದು ಸಮಂಜಸವಲ್ಲ. ಜನತೆಯನ್ನು ದಿಕ್ಕುತಪ್ಪಿಸುವ ಉದ್ದೇಶದಿಂದಲೇ ಇಂತಹ ಹೇಳಿಕೆ ನೀಡಲಾಗಿದೆ~ ಎಂದು ದೂರಿದರು.<br /> <br /> `ಇಡೀ ಪ್ರಕರಣವನ್ನೇ ಮುಚ್ಚಿಹಾಕುವ ಅನುಮಾನ ಕಾಡುತ್ತಿದೆ. ಮಾಜಿ ಸಚಿವರ ರಕ್ಷಣೆಗೆ ಸರ್ಕಾರದ ಕಡೆಯಿಂದ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಕರಣದ ಗಂಭೀರತೆ ಕುಗ್ಗಿಸವಂತಹ ಹೇಳಿಕೆಗಳು ಬಹಿರಂಗವಾಗಿವೆ~ ಎಂದು ಅಸಮಾಧಾನಪಟ್ಟರು.<br /> <br /> <strong>ತಪ್ಪಿಸಿಕೊಳ್ಳುವ ಯತ್ನ: </strong>`ವಿರೋಧ ಪಕ್ಷಗಳ ಶಾಸಕರೂ ಬ್ಲೂ ಫಿಲಂ ವೀಕ್ಷಿಸಿದ್ದಾರೆ ಎಂಬ ಹೇಳಿಕೆ ಮೂಲಕ ಬಿಜೆಪಿ ಶಾಸಕರ ರಕ್ಷಣೆಗೆ ಓಲೇಕಾರ್ ಯತ್ನಿಸಿದ್ದಾರೆ. ನಮ್ಮ ಶಾಸಕರಷ್ಟೇ ಅಲ್ಲ, ನಿಮ್ಮ ಶಾಸಕರೂ ನೋಡಿದ್ದಾರೆ ಎಂದು ವಿರೋಧ ಪಕ್ಷಗಳನ್ನು ಪ್ರಶ್ನಿಸುವ ಧಾಟಿಯಲ್ಲಿ ಅವರು ಮಾತನಾಡಿದ್ದಾರೆ~ ಎಂದು ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ `ಬ್ಲೂ ಫಿಲಂ~ ವೀಕ್ಷಿಸಿದ ಘಟನೆಗೆ ಸಂಬಂಧಿಸಿದ ಸದನದ ವಿಚಾರಣಾ ಸಮಿತಿ ಸದಸ್ಯ ನೆಹರು ಓಲೇಕಾರ್ ಅವರು, ನೀಡಿರುವ ಬಹಿರಂಗ ಹೇಳಿಕೆ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರತಿಪಕ್ಷಗಳು, ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿವೆ.<br /> <br /> `ವಿಚಾರಣೆ ಎದುರಿಸುತ್ತಿರುವ ಮೂವರು ಮಾಜಿ ಸಚಿವರಲ್ಲದೆ ಇನ್ನೂ ಹಲವು ಶಾಸಕರು ಸದನದಲ್ಲಿ ಬ್ಲೂ ಫಿಲಂ ವೀಕ್ಷಿಸಿರುವ ಬಗ್ಗೆ ದಾಖಲೆಗಳಿವೆ~ ಎಂಬ ಓಲೇಕಾರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, `ತನಿಖೆ ಪ್ರಗತಿಯಲ್ಲಿರುವಾಗಲೇ ಸಮಿತಿಯ ಸದಸ್ಯರು ಈ ರೀತಿ ಹೇಳಿಕೆ ನೀಡಿರುವುದು ಸಮಂಜಸವಲ್ಲ. ಜನತೆಯನ್ನು ದಿಕ್ಕುತಪ್ಪಿಸುವ ಉದ್ದೇಶದಿಂದಲೇ ಇಂತಹ ಹೇಳಿಕೆ ನೀಡಲಾಗಿದೆ~ ಎಂದು ದೂರಿದರು.<br /> <br /> `ಇಡೀ ಪ್ರಕರಣವನ್ನೇ ಮುಚ್ಚಿಹಾಕುವ ಅನುಮಾನ ಕಾಡುತ್ತಿದೆ. ಮಾಜಿ ಸಚಿವರ ರಕ್ಷಣೆಗೆ ಸರ್ಕಾರದ ಕಡೆಯಿಂದ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಕರಣದ ಗಂಭೀರತೆ ಕುಗ್ಗಿಸವಂತಹ ಹೇಳಿಕೆಗಳು ಬಹಿರಂಗವಾಗಿವೆ~ ಎಂದು ಅಸಮಾಧಾನಪಟ್ಟರು.<br /> <br /> <strong>ತಪ್ಪಿಸಿಕೊಳ್ಳುವ ಯತ್ನ: </strong>`ವಿರೋಧ ಪಕ್ಷಗಳ ಶಾಸಕರೂ ಬ್ಲೂ ಫಿಲಂ ವೀಕ್ಷಿಸಿದ್ದಾರೆ ಎಂಬ ಹೇಳಿಕೆ ಮೂಲಕ ಬಿಜೆಪಿ ಶಾಸಕರ ರಕ್ಷಣೆಗೆ ಓಲೇಕಾರ್ ಯತ್ನಿಸಿದ್ದಾರೆ. ನಮ್ಮ ಶಾಸಕರಷ್ಟೇ ಅಲ್ಲ, ನಿಮ್ಮ ಶಾಸಕರೂ ನೋಡಿದ್ದಾರೆ ಎಂದು ವಿರೋಧ ಪಕ್ಷಗಳನ್ನು ಪ್ರಶ್ನಿಸುವ ಧಾಟಿಯಲ್ಲಿ ಅವರು ಮಾತನಾಡಿದ್ದಾರೆ~ ಎಂದು ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>