<p><strong>ಬೆಂಗಳೂರು: </strong>ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥ ಆಗದೇ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಇನ್ನಷ್ಟು ರಾಜಿಸಂಧಾನ ಕೇಂದ್ರಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಇಲ್ಲಿ ಹೇಳಿದರು.<br /> <br /> ಭಾನುವಾರ ನಗರದಲ್ಲಿ ನಡೆದ ವಿವಿಧ ಜಿಲ್ಲೆಗಳ ಸರ್ಕಾರಿ ವಕೀಲರ ಪ್ರಥಮ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಅದಕ್ಕೆ ತಕ್ಕಂತೆ ಪ್ರಕರಣಗಳು ಇತ್ಯರ್ಥಗೊಳ್ಳುವ ಅವಶ್ಯಕತೆಯೂ ಇದೆ. ಬೆಂಗಳೂರಿನಲ್ಲಿ ಸದ್ಯ `ನ್ಯಾಯದೇಗುಲ~ದಲ್ಲಿ ರಾಜಿಸಂಧಾನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಂತಹ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಯೋಚಿಸಿದೆ. ಇದರಿಂದ ಚಿಕ್ಕಪುಟ್ಟ ಪ್ರಕರಣಗಳನ್ನು ಶೀಘ್ರದಲ್ಲಿ ವಿಲೇ ಮಾಡಲು ಸಾಧ್ಯವಾಗುತ್ತದೆ~ ಎಂದು ಅವರು ಹೇಳಿದರು.<br /> <br /> ವಕೀಲಿ ವೃತ್ತಿಯ ಬಗ್ಗೆ ಮಾತನಾಡಿದ ಸಚಿವರು, `ಸಮಾಜಕ್ಕೆ ಕೆಡುಕು ಉಂಟಾಗುವ ಕೃತ್ಯಗಳಿಗೆ ವಕೀಲರು ಕುಮ್ಮಕ್ಕು ನೀಡದೆ, ವಕೀಲಿ ವೃತ್ತಿಯ ಘನತೆಯನ್ನು ಕಾಪಾಡಬೇಕು. ಈ ವೃತ್ತಿಗೆ ಅದರದ್ದೇ ಆದ ಗಾಂಭೀರ್ಯ ಇದೆ. ಅದನ್ನು ಉಳಿಸಬೇಕು~ ಎಂದರು.<br /> <br /> ಸರ್ಕಾರಿ ವಕೀಲರ ಸೇವಾ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಕ್ಕೆ ಏರಿಸಬೇಕು ಎಂದು ಇದೇ ಸಂದರ್ಭದಲ್ಲಿ ವಕೀಲರು ಸಚಿವರಿಗೆ ಮನವಿ ಸಲ್ಲಿಸಿದರು. ತಮಗೆ ಸರ್ಕಾರದಿಂದ ಕಂಪ್ಯೂಟರ್ ಸೌಲಭ್ಯ ಹಾಗೂ ಇತರ ಸೌಕರ್ಯಗಳನ್ನು ನೀಡುವಂತೆಯೂ ಮನವಿ ಮಾಡಿಕೊಳ್ಳಲಾಯಿತು. ಈ ಮನವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.<br /> ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್, ಅಡ್ವೊಕೇಟ್ ಜನರಲ್ ಎಸ್.ವಿಜಯಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥ ಆಗದೇ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಇನ್ನಷ್ಟು ರಾಜಿಸಂಧಾನ ಕೇಂದ್ರಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಇಲ್ಲಿ ಹೇಳಿದರು.<br /> <br /> ಭಾನುವಾರ ನಗರದಲ್ಲಿ ನಡೆದ ವಿವಿಧ ಜಿಲ್ಲೆಗಳ ಸರ್ಕಾರಿ ವಕೀಲರ ಪ್ರಥಮ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಅದಕ್ಕೆ ತಕ್ಕಂತೆ ಪ್ರಕರಣಗಳು ಇತ್ಯರ್ಥಗೊಳ್ಳುವ ಅವಶ್ಯಕತೆಯೂ ಇದೆ. ಬೆಂಗಳೂರಿನಲ್ಲಿ ಸದ್ಯ `ನ್ಯಾಯದೇಗುಲ~ದಲ್ಲಿ ರಾಜಿಸಂಧಾನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಂತಹ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಯೋಚಿಸಿದೆ. ಇದರಿಂದ ಚಿಕ್ಕಪುಟ್ಟ ಪ್ರಕರಣಗಳನ್ನು ಶೀಘ್ರದಲ್ಲಿ ವಿಲೇ ಮಾಡಲು ಸಾಧ್ಯವಾಗುತ್ತದೆ~ ಎಂದು ಅವರು ಹೇಳಿದರು.<br /> <br /> ವಕೀಲಿ ವೃತ್ತಿಯ ಬಗ್ಗೆ ಮಾತನಾಡಿದ ಸಚಿವರು, `ಸಮಾಜಕ್ಕೆ ಕೆಡುಕು ಉಂಟಾಗುವ ಕೃತ್ಯಗಳಿಗೆ ವಕೀಲರು ಕುಮ್ಮಕ್ಕು ನೀಡದೆ, ವಕೀಲಿ ವೃತ್ತಿಯ ಘನತೆಯನ್ನು ಕಾಪಾಡಬೇಕು. ಈ ವೃತ್ತಿಗೆ ಅದರದ್ದೇ ಆದ ಗಾಂಭೀರ್ಯ ಇದೆ. ಅದನ್ನು ಉಳಿಸಬೇಕು~ ಎಂದರು.<br /> <br /> ಸರ್ಕಾರಿ ವಕೀಲರ ಸೇವಾ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಕ್ಕೆ ಏರಿಸಬೇಕು ಎಂದು ಇದೇ ಸಂದರ್ಭದಲ್ಲಿ ವಕೀಲರು ಸಚಿವರಿಗೆ ಮನವಿ ಸಲ್ಲಿಸಿದರು. ತಮಗೆ ಸರ್ಕಾರದಿಂದ ಕಂಪ್ಯೂಟರ್ ಸೌಲಭ್ಯ ಹಾಗೂ ಇತರ ಸೌಕರ್ಯಗಳನ್ನು ನೀಡುವಂತೆಯೂ ಮನವಿ ಮಾಡಿಕೊಳ್ಳಲಾಯಿತು. ಈ ಮನವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.<br /> ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್, ಅಡ್ವೊಕೇಟ್ ಜನರಲ್ ಎಸ್.ವಿಜಯಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>