<p>ಬೆಂಗಳೂರು: ‘ಪ್ರಕೃತಿ ಹಾಗೂ ಸಮುದಾಯದ ನಡುವೆ ಸಂಬಂಧವನ್ನು ಬೆಸೆಯುವ ನಿಟ್ಟಿನಲ್ಲಿ ಪ್ರಗತಿಯ ಪಥ ಸಾಗಬೇಕು’ ಎಂದು ಸಮಾಜ ಪರಿವರ್ತನ ಸಮುದಾಯ ಅಧ್ಯಕ್ಷ ಎಸ್.ಆರ್.ಹಿರೇಮಠ ತಿಳಿಸಿದರು.<br /> <br /> ಕರ್ನಾಟಕ ಸ್ವಾಭಿಮಾನಿ ವೇದಿಕೆಯು ಅನಿಕೇತನ ಕನ್ನಡ ಬಳಗದ ಸಹಯೋಗದೊಂದಿಗೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಮಾಜ ಪರಿವರ್ತನೆ ಮತ್ತು ನಮ್ಮ ಕರ್ತವ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> ‘ಪರಿವರ್ತನೆಯೆಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕಾರ್ಯಪ್ರವೃತ್ತರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಬಾಲ್ಯದಲ್ಲಿ ಶರಣ ಸಂಸ್ಕೃತಿಯ ವಿಚಾರಧಾರೆಯಿಂದ ಪ್ರಭಾವಿತನಾಗಿದ್ದೆ. ಆರಂಭದಿಂದಲೂ ಪ್ರತಿಭಟನೆ ಬಗ್ಗೆ ಸ್ಪಷ್ಟ ಕಲ್ಪನೆಯಿತ್ತು. ಕಲ್ಲು ತೂರಾಟ, ದೊಂಬಿಗಳಿಂದ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗುತ್ತದೆ ಹೊರತು ಬದಲಾವಣೆ ಕಾಣಲು ಸಾಧ್ಯವಿಲ್ಲ’ ಎಂದು ಹೇಳಿದರು.<br /> <br /> ‘ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ಗಳಿಸಲು ಇನ್ನೂ ಸಾಧ್ಯವಾಗಿಲ್ಲ. ಡಿ.ಕೆ. ಶಿವಕುಮಾರ್, ಬಿ.ಎಸ್.ಯಡಿಯೂರಪ್ಪ, ಎಸ್.ಎಂ.ಕೃಷ್ಣ ಅವರಂತಹ ಭ್ರಷ್ಟರು ರಾಜಕೀಯದಲ್ಲಿ ಇರುವುದರಿಂದ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗಿದೆ’ ಎಂದು ಟೀಕಿಸಿದರು.<br /> <br /> ರೌಡಿ ಸಹಚರರು ರಾಜಕೀಯ ಮುಖಂಡರು!: ‘ಕೊತ್ವಾಲ್ ರಾಮಚಂದ್ರ ಅವರ ಹೋಟೆಲ್ನಲ್ಲಿ ಚಹಾ ಮಾರುತ್ತಿದ್ದ, ಅಂದಿನ ಭೂಗತ ಪಾತಕಿಗಳ ಸಹಚರರಾಗಿದ್ದವರು ಇಂದು ಸಚಿವರಾಗಿದ್ದಾರೆ. ಇದು ಪ್ರಜಾಪ್ರಭುತ್ವದ ಅಣಕ’ ಎಂದು ವ್ಯಂಗ್ಯವಾಡಿದರು.<br /> <br /> ‘ಜಾತಿ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತೊಗೆಯಬೇಕು. ವಾಣಿಜ್ಯೀಕರಣಗೊಂಡ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವ ಮೂಲಕ ಅಭೂತಪೂರ್ವ ಪರಿವರ್ತನೆ ಸಾಧ್ಯವಿದೆ’ ಎಂದರು.<br /> <br /> ಎಚ್.ಎಸ್. ದೊರೆಸ್ವಾಮಿ, ‘ತಪ್ಪು ಮಾಡುವ ಭ್ರಷ್ಟ ರಾಜಕಾರಣಿ, ಅಧಿಕಾರಿಗಳನ್ನು ಪ್ರಶ್ನಿಸಿ, ಬುದ್ಧಿ ಕಲಿಸದ ಹೊರತು ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪ್ರಕೃತಿ ಹಾಗೂ ಸಮುದಾಯದ ನಡುವೆ ಸಂಬಂಧವನ್ನು ಬೆಸೆಯುವ ನಿಟ್ಟಿನಲ್ಲಿ ಪ್ರಗತಿಯ ಪಥ ಸಾಗಬೇಕು’ ಎಂದು ಸಮಾಜ ಪರಿವರ್ತನ ಸಮುದಾಯ ಅಧ್ಯಕ್ಷ ಎಸ್.ಆರ್.ಹಿರೇಮಠ ತಿಳಿಸಿದರು.<br /> <br /> ಕರ್ನಾಟಕ ಸ್ವಾಭಿಮಾನಿ ವೇದಿಕೆಯು ಅನಿಕೇತನ ಕನ್ನಡ ಬಳಗದ ಸಹಯೋಗದೊಂದಿಗೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಸಮಾಜ ಪರಿವರ್ತನೆ ಮತ್ತು ನಮ್ಮ ಕರ್ತವ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> ‘ಪರಿವರ್ತನೆಯೆಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕಾರ್ಯಪ್ರವೃತ್ತರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಬಾಲ್ಯದಲ್ಲಿ ಶರಣ ಸಂಸ್ಕೃತಿಯ ವಿಚಾರಧಾರೆಯಿಂದ ಪ್ರಭಾವಿತನಾಗಿದ್ದೆ. ಆರಂಭದಿಂದಲೂ ಪ್ರತಿಭಟನೆ ಬಗ್ಗೆ ಸ್ಪಷ್ಟ ಕಲ್ಪನೆಯಿತ್ತು. ಕಲ್ಲು ತೂರಾಟ, ದೊಂಬಿಗಳಿಂದ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗುತ್ತದೆ ಹೊರತು ಬದಲಾವಣೆ ಕಾಣಲು ಸಾಧ್ಯವಿಲ್ಲ’ ಎಂದು ಹೇಳಿದರು.<br /> <br /> ‘ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ಗಳಿಸಲು ಇನ್ನೂ ಸಾಧ್ಯವಾಗಿಲ್ಲ. ಡಿ.ಕೆ. ಶಿವಕುಮಾರ್, ಬಿ.ಎಸ್.ಯಡಿಯೂರಪ್ಪ, ಎಸ್.ಎಂ.ಕೃಷ್ಣ ಅವರಂತಹ ಭ್ರಷ್ಟರು ರಾಜಕೀಯದಲ್ಲಿ ಇರುವುದರಿಂದ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗಿದೆ’ ಎಂದು ಟೀಕಿಸಿದರು.<br /> <br /> ರೌಡಿ ಸಹಚರರು ರಾಜಕೀಯ ಮುಖಂಡರು!: ‘ಕೊತ್ವಾಲ್ ರಾಮಚಂದ್ರ ಅವರ ಹೋಟೆಲ್ನಲ್ಲಿ ಚಹಾ ಮಾರುತ್ತಿದ್ದ, ಅಂದಿನ ಭೂಗತ ಪಾತಕಿಗಳ ಸಹಚರರಾಗಿದ್ದವರು ಇಂದು ಸಚಿವರಾಗಿದ್ದಾರೆ. ಇದು ಪ್ರಜಾಪ್ರಭುತ್ವದ ಅಣಕ’ ಎಂದು ವ್ಯಂಗ್ಯವಾಡಿದರು.<br /> <br /> ‘ಜಾತಿ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತೊಗೆಯಬೇಕು. ವಾಣಿಜ್ಯೀಕರಣಗೊಂಡ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವ ಮೂಲಕ ಅಭೂತಪೂರ್ವ ಪರಿವರ್ತನೆ ಸಾಧ್ಯವಿದೆ’ ಎಂದರು.<br /> <br /> ಎಚ್.ಎಸ್. ದೊರೆಸ್ವಾಮಿ, ‘ತಪ್ಪು ಮಾಡುವ ಭ್ರಷ್ಟ ರಾಜಕಾರಣಿ, ಅಧಿಕಾರಿಗಳನ್ನು ಪ್ರಶ್ನಿಸಿ, ಬುದ್ಧಿ ಕಲಿಸದ ಹೊರತು ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>