<p><strong>ಬೆಂಗಳೂರು:</strong> ‘ಭಾರತೀಯ ಜೀವ ವಿಮಾ ನಿಗಮದ ‘ಬೆಂಗಳೂರು ವಿಭಾಗ –1’ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₨260.28 ಕೋಟಿ ಪ್ರೀಮಿಯಂ ಸಂಗ್ರಹಿಸಿದೆ’ ಎಂದು ನಿಗಮದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಪಿ.ಕುಮರೇಸನ್ ಹೇಳಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಭಾಗವು 2,35,478 ಪಾಲಿಸಿಗಳನ್ನು ಮಾರಾಟ ಮಾಡುವ ಮೂಲಕ ಈ ಸಾಧನೆ ಮಾಡಿದೆ. ಇದರಿಂದಾಗಿ ಶೇ 20.07 ಪ್ರೀಮಿಯಂ ಸಂಗ್ರಹಿಸಿದಂತಾಗಿದೆ ಎಂದರು.<br /> <br /> ವಿಭಾಗದ ಪಿಂಚಣಿ ಹಾಗೂ ಗುಂಪು ವಿಮಾ ಘಟಕವು ₨2,995.50 ಕೋಟಿ ಪ್ರೀಮಿಯಂ ಸಂಗ್ರಹಿಸಿದೆ. ಸಾಮಾಜಿಕ ಸುರಕ್ಷಾ ಯೋಜನೆ ಜನಶ್ರೀ ಬಿಮಾ ಯೋಜನೆ ಮೂಲಕ 3ಲಕ್ಷಕ್ಕೂ ಅಧಿಕ ಜನರಿಗೆ ವಿಮಾ ರಕ್ಷೆಯನ್ನು ಒದಗಿಸಿದೆ ಎಂದು ತಿಳಿಸಿದರು.ಎಲ್ಐಸಿಯ ಬೆಂಗಳೂರು –1 ವಿಭಾಗವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 82,673 ಪರಿಪಕ್ವ ದಾವೆಗಳನ್ನು ಇತ್ಯರ್ಥಪಡಿಸಿದ್ದು ₨320.18 ಕೋಟಿ ಪಾವತಿಸಿದೆ. ವಿಭಾಗವು ಕ್ಲೈಮ್ ಪಾವತಿ ಕುರಿತು ಪಾಲಿಸಿದಾರರಿಗೆ ಮಾಹಿತಿ ನೀಡಲು ಆರಂಭಿಸಿದ್ದ ಎಸ್ಎಂಎಸ್ ಅಲರ್ಟ್ ಸೇವೆಯು ಯಶಸ್ವಿಯಾಗಿದ್ದು ಈವರೆಗೆ 85,304 ಜನರಿಗೆ ಎಸ್ಎಂಎಸ್ ಮುಖಾಂತರ ಮಾಹಿತಿ ನೀಡಲಾಗಿದೆ ಎಂದರು.<br /> <br /> ನಗರದಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಭಾಗದ ವ್ಯಾಪ್ತಿಯಲ್ಲಿ ಒಂದರಿಂದ 10ನೇ ತರಗತಿವರೆಗಿನ ಒಂದು ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು ಜನವರಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ವರ್ಷದ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭಾರತೀಯ ಜೀವ ವಿಮಾ ನಿಗಮದ ‘ಬೆಂಗಳೂರು ವಿಭಾಗ –1’ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₨260.28 ಕೋಟಿ ಪ್ರೀಮಿಯಂ ಸಂಗ್ರಹಿಸಿದೆ’ ಎಂದು ನಿಗಮದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಪಿ.ಕುಮರೇಸನ್ ಹೇಳಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಭಾಗವು 2,35,478 ಪಾಲಿಸಿಗಳನ್ನು ಮಾರಾಟ ಮಾಡುವ ಮೂಲಕ ಈ ಸಾಧನೆ ಮಾಡಿದೆ. ಇದರಿಂದಾಗಿ ಶೇ 20.07 ಪ್ರೀಮಿಯಂ ಸಂಗ್ರಹಿಸಿದಂತಾಗಿದೆ ಎಂದರು.<br /> <br /> ವಿಭಾಗದ ಪಿಂಚಣಿ ಹಾಗೂ ಗುಂಪು ವಿಮಾ ಘಟಕವು ₨2,995.50 ಕೋಟಿ ಪ್ರೀಮಿಯಂ ಸಂಗ್ರಹಿಸಿದೆ. ಸಾಮಾಜಿಕ ಸುರಕ್ಷಾ ಯೋಜನೆ ಜನಶ್ರೀ ಬಿಮಾ ಯೋಜನೆ ಮೂಲಕ 3ಲಕ್ಷಕ್ಕೂ ಅಧಿಕ ಜನರಿಗೆ ವಿಮಾ ರಕ್ಷೆಯನ್ನು ಒದಗಿಸಿದೆ ಎಂದು ತಿಳಿಸಿದರು.ಎಲ್ಐಸಿಯ ಬೆಂಗಳೂರು –1 ವಿಭಾಗವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 82,673 ಪರಿಪಕ್ವ ದಾವೆಗಳನ್ನು ಇತ್ಯರ್ಥಪಡಿಸಿದ್ದು ₨320.18 ಕೋಟಿ ಪಾವತಿಸಿದೆ. ವಿಭಾಗವು ಕ್ಲೈಮ್ ಪಾವತಿ ಕುರಿತು ಪಾಲಿಸಿದಾರರಿಗೆ ಮಾಹಿತಿ ನೀಡಲು ಆರಂಭಿಸಿದ್ದ ಎಸ್ಎಂಎಸ್ ಅಲರ್ಟ್ ಸೇವೆಯು ಯಶಸ್ವಿಯಾಗಿದ್ದು ಈವರೆಗೆ 85,304 ಜನರಿಗೆ ಎಸ್ಎಂಎಸ್ ಮುಖಾಂತರ ಮಾಹಿತಿ ನೀಡಲಾಗಿದೆ ಎಂದರು.<br /> <br /> ನಗರದಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಭಾಗದ ವ್ಯಾಪ್ತಿಯಲ್ಲಿ ಒಂದರಿಂದ 10ನೇ ತರಗತಿವರೆಗಿನ ಒಂದು ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು ಜನವರಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ವರ್ಷದ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>