<p>ನವದೆಹಲಿ(ಪಿಟಿಐ): ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ನಾಯಕರು ಮಾಡುವ ಪ್ರಚೋದನಕಾರಿ ಭಾಷಣದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ರೂಪಿಸುವ ಕುರಿತು ಪರಿಶೀಲಿಸುವಂತೆ ಬುಧವಾರ ಸುಪ್ರೀಂಕೋರ್ಟ್ ಕಾನೂನು ಆಯೋಗಕ್ಕೆ ಸೂಚಿಸಿದೆ.<br /> <br /> ತಾನೇ ಸ್ವತಃ ಮಾರ್ಗಸೂಚಿ ರೂಪಿಸಲು ನಿರಾಕರಿಸಿದ ನ್ಯಾಯಮೂರ್ತಿ ಬಿ.ಎಸ್. ಚವಾಣ್ ನೇತೃತ್ವದ ಪೀಠ, ಈ ವಿಷಯದ ಕುರಿತು ಪರಿಶೀಲಿಸಿ ಕೇಂದ್ರಕ್ಕೆ ಶಿಫಾರಸು ಸಲ್ಲಿಸುವಂತೆ ಕಾನೂನು ಆಯೋಗವನ್ನು ಕೇಳಿಕೊಂಡಿದೆ.<br /> <br /> ಪ್ರಚೋದನಕಾರಿ ಭಾಷಣಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸುತ್ತವೆ ಮತ್ತು ಕಾನೂನು ನಿಬಂಧನೆಗಳನ್ನು ಉಲ್ಲಂಘಿಸುತ್ತವೆ. ಆದ್ದರಿಂದ ಅಂತಹ ಭಾಷಣಗಳ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ಅವಶ್ಯಕತೆ ಇದೆ ಎಂದು ‘ಪ್ರವಾಸಿ ಭಲಾಯ್ ಸಂಘಟನ್’ ಎಂಬ ಸರ್ಕಾರೇತರ ಸಂಸ್ಥೆ (ಎನ್ಜಿಓ) ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.<br /> <br /> ಮಹಾರಾಷ್ಟ್ರದಲ್ಲಿ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಪ್ರಚೋದನಕಾರಿ ಭಾಷಣ ಮಾಡಿದ್ದರು. ಆದರೆ ಅವರ ಮೇಲೆ ರಾಜ್ಯದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿದೆ. ಆಂಧ್ರಪ್ರದೇಶದಲ್ಲಿ ‘ಆಲ್ ಇಂಡಿಯಾ ಮಜ್ಲಿಸ್–ಎ–ಇತ್ಲೆಹಾದುಲ್ ಮುಸ್ಲಿಮೀನ್’ನ ಮುಖಂಡ ಅಕ್ಬರುದ್ದೀನ್ ಓವೈಸಿ ಕೂಡ ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದರು. ಆದರೆ ಜಾಮೀನಿನ ಮೇಲೆ ಬಿಡುಗಡೆಯಾದ ಅವರು ನಾಂದೇಡ್ನಲ್ಲಿ ಮತ್ತೆ ಅಂತಹದ್ದೇ ಪ್ರಚೋದನಾಕಾರಿ ಭಾಷಣ ಮಾಡಿದ್ದರು’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ(ಪಿಟಿಐ): ರಾಜಕೀಯ, ಸಾಮಾಜಿಕ, ಮತ್ತು ಧಾರ್ಮಿಕ ನಾಯಕರು ಮಾಡುವ ಪ್ರಚೋದನಕಾರಿ ಭಾಷಣದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ರೂಪಿಸುವ ಕುರಿತು ಪರಿಶೀಲಿಸುವಂತೆ ಬುಧವಾರ ಸುಪ್ರೀಂಕೋರ್ಟ್ ಕಾನೂನು ಆಯೋಗಕ್ಕೆ ಸೂಚಿಸಿದೆ.<br /> <br /> ತಾನೇ ಸ್ವತಃ ಮಾರ್ಗಸೂಚಿ ರೂಪಿಸಲು ನಿರಾಕರಿಸಿದ ನ್ಯಾಯಮೂರ್ತಿ ಬಿ.ಎಸ್. ಚವಾಣ್ ನೇತೃತ್ವದ ಪೀಠ, ಈ ವಿಷಯದ ಕುರಿತು ಪರಿಶೀಲಿಸಿ ಕೇಂದ್ರಕ್ಕೆ ಶಿಫಾರಸು ಸಲ್ಲಿಸುವಂತೆ ಕಾನೂನು ಆಯೋಗವನ್ನು ಕೇಳಿಕೊಂಡಿದೆ.<br /> <br /> ಪ್ರಚೋದನಕಾರಿ ಭಾಷಣಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸುತ್ತವೆ ಮತ್ತು ಕಾನೂನು ನಿಬಂಧನೆಗಳನ್ನು ಉಲ್ಲಂಘಿಸುತ್ತವೆ. ಆದ್ದರಿಂದ ಅಂತಹ ಭಾಷಣಗಳ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ಅವಶ್ಯಕತೆ ಇದೆ ಎಂದು ‘ಪ್ರವಾಸಿ ಭಲಾಯ್ ಸಂಘಟನ್’ ಎಂಬ ಸರ್ಕಾರೇತರ ಸಂಸ್ಥೆ (ಎನ್ಜಿಓ) ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.<br /> <br /> ಮಹಾರಾಷ್ಟ್ರದಲ್ಲಿ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಪ್ರಚೋದನಕಾರಿ ಭಾಷಣ ಮಾಡಿದ್ದರು. ಆದರೆ ಅವರ ಮೇಲೆ ರಾಜ್ಯದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿದೆ. ಆಂಧ್ರಪ್ರದೇಶದಲ್ಲಿ ‘ಆಲ್ ಇಂಡಿಯಾ ಮಜ್ಲಿಸ್–ಎ–ಇತ್ಲೆಹಾದುಲ್ ಮುಸ್ಲಿಮೀನ್’ನ ಮುಖಂಡ ಅಕ್ಬರುದ್ದೀನ್ ಓವೈಸಿ ಕೂಡ ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದರು. ಆದರೆ ಜಾಮೀನಿನ ಮೇಲೆ ಬಿಡುಗಡೆಯಾದ ಅವರು ನಾಂದೇಡ್ನಲ್ಲಿ ಮತ್ತೆ ಅಂತಹದ್ದೇ ಪ್ರಚೋದನಾಕಾರಿ ಭಾಷಣ ಮಾಡಿದ್ದರು’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>