<p>ಬೆಂಗಳೂರು: ವಿವಿಧ ನಾಗರಿಕ ಮತ್ತು ಸಾಮಾಜಿಕ ಸಂಘಟನೆಗಳು ಒಗ್ಗೂಡಿ `ಪ್ರಜಾ ಪ್ರಗತಿರಂಗ~ ಎಂಬ ಪರ್ಯಾಯ ರಾಜಕೀಯ ವೇದಿಕೆಯನ್ನು ಅಸ್ತಿತ್ವಕ್ಕೆ ತಂದಿವೆ. ರಾಜಕೀಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡುವ ಉದ್ದೇಶವನ್ನು ಈ ವೇದಿಕೆ ಹೊಂದಿದೆ.<br /> <br /> ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಇದೇ 14ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಸಮಾರಂಭದಲ್ಲಿ ವೇದಿಕೆಗೆ ಚಾಲನೆ ದೊರೆಯಲಿದೆ. ಹಿಂದುಳಿದ ವರ್ಗಗಳು, ದಲಿತರು, ಮುಸ್ಲಿಮರು, ಕ್ರೈಸ್ತರು, ಮಹಿಳೆಯರು ಮತ್ತು ಆದಿವಾಸಿ ಸಮುದಾಯದ ಸಂಘಟನೆಗಳಿಗೆ ವೇದಿಕೆಯಲ್ಲಿ ಪ್ರಾತಿನಿಧ್ಯ ದೊರೆಯಲಿದೆ.<br /> <br /> ಸರ್ವೋದಯ ಕರ್ನಾಟಕ ಪಕ್ಷದ ದೇವನೂರು ಮಹಾದೇವ, ಕರ್ನಾಟಕ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್, ಭಾರತೀಯ ಕಲ್ಯಾಣ ಪಕ್ಷದ ಬಿ.ಟಿ.ಲಲಿತಾನಾಯಕ್, ಸೋಷಿಯೋ ಡೆಮಾಕ್ರಟಿಕ್ ಪಕ್ಷದ ಅಬ್ದುಲ್ ಮಜೀದ್, ಅಲೆಮಾರಿ ಬುಡಕಟ್ಟು ಮಹಾಸಭಾದ ಡಾ.ಸಿ.ಎಸ್. ದ್ವಾರಕಾನಾಥ್ ಮತ್ತಿತರರು `ಪ್ರಜಾ ಪ್ರಗತಿರಂಗ~ದ ನೇತೃತ್ವ ವಹಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಅಖಿಲ ಭಾರತೀಯ ಕ್ರಿಶ್ಚಿಯನ್ ಕೌನ್ಸಿಲ್ ಕೂಡ ಈ ವೇದಿಕೆಯಲ್ಲಿವೆ.<br /> <br /> ಪ್ರಜಾ ಪ್ರಗತಿರಂಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ಬುಧವಾರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭ್ರಷ್ಟಾಚಾರ ಮತ್ತು ದುರಾಡಳಿತ ಸಹಿಸಲು ಆಗದ ಸ್ಥಿತಿ ತಲುಪಿದೆ. <br /> <br /> ಭ್ರಷ್ಟಾಚಾರದ ವಿರುದ್ಧ ಹೋರಾಡುವವರಿಗೆ ಈ ಒಕ್ಕೂಟ ವೇದಿಕೆಯಾಗಲಿದೆ. ಒಕ್ಕೂಟವು ಒಗ್ಗಟ್ಟಿನಿಂದ ಮುಂಬರುವ ಚುನಾವಣೆಯನ್ನು ಎದುರಿಸಲಿದೆ ಎಂದರು.<br /> <br /> ಒಕ್ಕೂಟದಲ್ಲಿರುವ ಸಂಘಟನೆಗಳು ಚುನಾವಣೆಯನ್ನು ಎದುರಿಸಲು ಅಗತ್ಯವಿರುವ ಸಂಪನ್ಮೂಲವನ್ನು ಹೊಂದಿವೆ. ಸಾಮಾನ್ಯ ಚಿಹ್ನೆಯೊಂದನ್ನು ಬಳಸಿಕೊಳ್ಳಲು ನಿರ್ಧರಿಸಿದ್ದು, ಏ.14ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಿವಿಧ ನಾಗರಿಕ ಮತ್ತು ಸಾಮಾಜಿಕ ಸಂಘಟನೆಗಳು ಒಗ್ಗೂಡಿ `ಪ್ರಜಾ ಪ್ರಗತಿರಂಗ~ ಎಂಬ ಪರ್ಯಾಯ ರಾಜಕೀಯ ವೇದಿಕೆಯನ್ನು ಅಸ್ತಿತ್ವಕ್ಕೆ ತಂದಿವೆ. ರಾಜಕೀಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡುವ ಉದ್ದೇಶವನ್ನು ಈ ವೇದಿಕೆ ಹೊಂದಿದೆ.<br /> <br /> ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಇದೇ 14ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಸಮಾರಂಭದಲ್ಲಿ ವೇದಿಕೆಗೆ ಚಾಲನೆ ದೊರೆಯಲಿದೆ. ಹಿಂದುಳಿದ ವರ್ಗಗಳು, ದಲಿತರು, ಮುಸ್ಲಿಮರು, ಕ್ರೈಸ್ತರು, ಮಹಿಳೆಯರು ಮತ್ತು ಆದಿವಾಸಿ ಸಮುದಾಯದ ಸಂಘಟನೆಗಳಿಗೆ ವೇದಿಕೆಯಲ್ಲಿ ಪ್ರಾತಿನಿಧ್ಯ ದೊರೆಯಲಿದೆ.<br /> <br /> ಸರ್ವೋದಯ ಕರ್ನಾಟಕ ಪಕ್ಷದ ದೇವನೂರು ಮಹಾದೇವ, ಕರ್ನಾಟಕ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್, ಭಾರತೀಯ ಕಲ್ಯಾಣ ಪಕ್ಷದ ಬಿ.ಟಿ.ಲಲಿತಾನಾಯಕ್, ಸೋಷಿಯೋ ಡೆಮಾಕ್ರಟಿಕ್ ಪಕ್ಷದ ಅಬ್ದುಲ್ ಮಜೀದ್, ಅಲೆಮಾರಿ ಬುಡಕಟ್ಟು ಮಹಾಸಭಾದ ಡಾ.ಸಿ.ಎಸ್. ದ್ವಾರಕಾನಾಥ್ ಮತ್ತಿತರರು `ಪ್ರಜಾ ಪ್ರಗತಿರಂಗ~ದ ನೇತೃತ್ವ ವಹಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಅಖಿಲ ಭಾರತೀಯ ಕ್ರಿಶ್ಚಿಯನ್ ಕೌನ್ಸಿಲ್ ಕೂಡ ಈ ವೇದಿಕೆಯಲ್ಲಿವೆ.<br /> <br /> ಪ್ರಜಾ ಪ್ರಗತಿರಂಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ಬುಧವಾರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭ್ರಷ್ಟಾಚಾರ ಮತ್ತು ದುರಾಡಳಿತ ಸಹಿಸಲು ಆಗದ ಸ್ಥಿತಿ ತಲುಪಿದೆ. <br /> <br /> ಭ್ರಷ್ಟಾಚಾರದ ವಿರುದ್ಧ ಹೋರಾಡುವವರಿಗೆ ಈ ಒಕ್ಕೂಟ ವೇದಿಕೆಯಾಗಲಿದೆ. ಒಕ್ಕೂಟವು ಒಗ್ಗಟ್ಟಿನಿಂದ ಮುಂಬರುವ ಚುನಾವಣೆಯನ್ನು ಎದುರಿಸಲಿದೆ ಎಂದರು.<br /> <br /> ಒಕ್ಕೂಟದಲ್ಲಿರುವ ಸಂಘಟನೆಗಳು ಚುನಾವಣೆಯನ್ನು ಎದುರಿಸಲು ಅಗತ್ಯವಿರುವ ಸಂಪನ್ಮೂಲವನ್ನು ಹೊಂದಿವೆ. ಸಾಮಾನ್ಯ ಚಿಹ್ನೆಯೊಂದನ್ನು ಬಳಸಿಕೊಳ್ಳಲು ನಿರ್ಧರಿಸಿದ್ದು, ಏ.14ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>