<p>ಚಿಂತಾಮಣಿ: ಸಂವಿಧಾನದ ಆಶಯದಂತೆ ಪ್ರಜೆಗಳ ಸೇವಕರಾಗಬೇಕಿದ್ದ ರಾಜಕಾರಣಿಗಳು, ಅಧಿಕಾರಿಗಳು ಪ್ರಭುಗಳಾಗಿ ಮೆರೆಯುತ್ತಿದ್ದಾರೆ ಎಂದು ವಕೀಲ ಶ್ರೀನಾಥ್ ವಿಷಾದಿಸಿದರು.<br /> <br /> ನಗರಸಭೆ ಸಭಾಂಗಣದಲ್ಲಿ ಸೋಮವಾರ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿ.ಗೋಪಾಲಗೌಡರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಂವಿಧಾನದ ನೀತಿಯಂತೆ ಪ್ರಜೆಗಳು ಪ್ರಭುಗಳಾಗಬೇಕು, ಅಧಿಕಾರಿಗಳು ಮತ್ತು ರಾಜಕಾರಣಿಗಳು ಅವರ ಸೇವಕರಾಗಿ ಕೆಲಸ ಮಾಡಬೇಕು.</p>.<p>ಈಚೆಗೆ ಇದು ತದ್ವಿರುದ್ಧವಾಗಿದೆ. ನ್ಯಾಯಾಲಯಗಳು ಕ್ರಿಯಾಶೀಲವಾಗಿದ್ದು, ಸಂವಿಧಾನದ ಘನತೆ ಗೌರವಎತ್ತಿ ಹಿಡಿಯುವಂಥ ಕೆಲಸ ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟರು.<br /> <br /> ನ್ಯಾಯಮೂರ್ತಿ ವಿ.ಗೋಪಾಲಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿ ಸಂವಿಧಾನದ ರಕ್ಷಣೆಯಲ್ಲಿ ವಕೀಲರ ಪಾತ್ರ ಮಹತ್ತರವಾದುದು. ವಕೀಲರ ಸಂಘಗಳಿಂದ ತರಬೇತಿ ಶಿಬಿರಗಳು, ವಿಚಾರ ವಿನಿಮಯ ಸಭೆಗಳನ್ನು ಏರ್ಪಡಿಸುವುದರಿಂದ ಕಕ್ಷಿದಾರರಿಗೆ ಅನುಕೂಲವಾಗುತ್ತದೆ ಎಂದರು.<br /> <br /> ಹಿರಿಯ ವಕೀಲರಾದ ವಿಶ್ವನಾಥಶೆಟ್ಟಿ, ವೆಂಕಟರಾಯಪ್ಪ, ಪಾಪಿರೆಡ್ಡಿ, ಪ್ರಸಾದ್ ವೇದಿಕೆಯಲ್ಲಿದ್ದರು. ನಗರದ ನ್ಯಾಯಾಲಯಗಳ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಿರಿಯ ವಕೀಲ ಬೈರಾರೆಡ್ಡಿ ಸ್ವಾಗತಿಸಿದರು. ಇಬ್ರಾಹಿಂ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಸಂವಿಧಾನದ ಆಶಯದಂತೆ ಪ್ರಜೆಗಳ ಸೇವಕರಾಗಬೇಕಿದ್ದ ರಾಜಕಾರಣಿಗಳು, ಅಧಿಕಾರಿಗಳು ಪ್ರಭುಗಳಾಗಿ ಮೆರೆಯುತ್ತಿದ್ದಾರೆ ಎಂದು ವಕೀಲ ಶ್ರೀನಾಥ್ ವಿಷಾದಿಸಿದರು.<br /> <br /> ನಗರಸಭೆ ಸಭಾಂಗಣದಲ್ಲಿ ಸೋಮವಾರ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿ.ಗೋಪಾಲಗೌಡರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಂವಿಧಾನದ ನೀತಿಯಂತೆ ಪ್ರಜೆಗಳು ಪ್ರಭುಗಳಾಗಬೇಕು, ಅಧಿಕಾರಿಗಳು ಮತ್ತು ರಾಜಕಾರಣಿಗಳು ಅವರ ಸೇವಕರಾಗಿ ಕೆಲಸ ಮಾಡಬೇಕು.</p>.<p>ಈಚೆಗೆ ಇದು ತದ್ವಿರುದ್ಧವಾಗಿದೆ. ನ್ಯಾಯಾಲಯಗಳು ಕ್ರಿಯಾಶೀಲವಾಗಿದ್ದು, ಸಂವಿಧಾನದ ಘನತೆ ಗೌರವಎತ್ತಿ ಹಿಡಿಯುವಂಥ ಕೆಲಸ ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟರು.<br /> <br /> ನ್ಯಾಯಮೂರ್ತಿ ವಿ.ಗೋಪಾಲಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿ ಸಂವಿಧಾನದ ರಕ್ಷಣೆಯಲ್ಲಿ ವಕೀಲರ ಪಾತ್ರ ಮಹತ್ತರವಾದುದು. ವಕೀಲರ ಸಂಘಗಳಿಂದ ತರಬೇತಿ ಶಿಬಿರಗಳು, ವಿಚಾರ ವಿನಿಮಯ ಸಭೆಗಳನ್ನು ಏರ್ಪಡಿಸುವುದರಿಂದ ಕಕ್ಷಿದಾರರಿಗೆ ಅನುಕೂಲವಾಗುತ್ತದೆ ಎಂದರು.<br /> <br /> ಹಿರಿಯ ವಕೀಲರಾದ ವಿಶ್ವನಾಥಶೆಟ್ಟಿ, ವೆಂಕಟರಾಯಪ್ಪ, ಪಾಪಿರೆಡ್ಡಿ, ಪ್ರಸಾದ್ ವೇದಿಕೆಯಲ್ಲಿದ್ದರು. ನಗರದ ನ್ಯಾಯಾಲಯಗಳ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಿರಿಯ ವಕೀಲ ಬೈರಾರೆಡ್ಡಿ ಸ್ವಾಗತಿಸಿದರು. ಇಬ್ರಾಹಿಂ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>