<p>ಯಲಹಂಕ: `ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಣವ್ ಮುಖರ್ಜಿ ಅವರು ಅತ್ಯಧಿಕ ಬಹುಮತದಿಂದ ಜಯ ಗಳಿಸಿರುವುದು ಕಾಂಗ್ರೆಸ್ ನೇತೃತ್ವದ ಯುಪಿಎ ಶಕ್ತಿ ಏನೆಂಬುದನ್ನು ಸಾಬೀತಂತಾಗಿದೆ~ ಎಂದು ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.<br /> <br /> ದಾಸನಪುರ ಹೋಬಳಿಯ ಮಾಕಳಿ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಇದಕ್ಕೂ ಮುನ್ನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, `ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರ ಗಮನಹರಿಸುತ್ತಿಲ್ಲ. ಸಚಿವರು ಪ್ರಬಲ ಖಾತೆಗಳಿಗೆ ಕ್ಯಾತೆ ತೆಗೆಯುವುದರಲ್ಲೇ ಕಾಲ ಕಳೆಯುತ್ತ್ದ್ದಿದು, ಕೇಂದ್ರದಿಂದ ಬಿಡುಗಡೆಯಾದ ಅನುದಾನ ಸರಿಯಾದ ರೀತಿಯಲ್ಲಿ ಸದ್ಬಳಕೆಯಾಗಿಲ್ಲ~ ಎಂದರು.<br /> <br /> ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅಂಜನಮೂರ್ತಿ, ನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ಜಿ.ಪಂ. ಮಾಜಿ ಸದಸ್ಯ ಎಚ್.ಸೀನಪ್ಪ ಮಾತನಾಡಿದರು.<br /> <br /> ಮಾಜಿ ಶಾಸಕ ವಿ.ಕೃಷ್ಣಪ್ಪ. ಜಿ.ಪಂ. ಸದಸ್ಯ ವಿ.ಜಿ. ಜಯರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಭಾವ, ಸದಸ್ಯರಾದ ಸಿ.ವೆಂಕಟೇಶ್, ಮು.ಕೃಷ್ಣಮೂರ್ತಿ, ತಾ.ಪಂ. ಅಧ್ಯಕ್ಷ ಚಾಂದ್ಪಾಷ, ಮಾಜಿ ಅಧ್ಯಕ್ಷ ಜಯಶಂಕರ್, ಮುಖಂಡರಾದ ಗೋಪಾಲಕೃಷ್ಣ, ಎಸ್.ಬಿ. ಬಾಷಾ, ಡಿ.ಎಂ.ಪ್ರಕಾಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: `ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಣವ್ ಮುಖರ್ಜಿ ಅವರು ಅತ್ಯಧಿಕ ಬಹುಮತದಿಂದ ಜಯ ಗಳಿಸಿರುವುದು ಕಾಂಗ್ರೆಸ್ ನೇತೃತ್ವದ ಯುಪಿಎ ಶಕ್ತಿ ಏನೆಂಬುದನ್ನು ಸಾಬೀತಂತಾಗಿದೆ~ ಎಂದು ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.<br /> <br /> ದಾಸನಪುರ ಹೋಬಳಿಯ ಮಾಕಳಿ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಇದಕ್ಕೂ ಮುನ್ನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, `ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರ ಗಮನಹರಿಸುತ್ತಿಲ್ಲ. ಸಚಿವರು ಪ್ರಬಲ ಖಾತೆಗಳಿಗೆ ಕ್ಯಾತೆ ತೆಗೆಯುವುದರಲ್ಲೇ ಕಾಲ ಕಳೆಯುತ್ತ್ದ್ದಿದು, ಕೇಂದ್ರದಿಂದ ಬಿಡುಗಡೆಯಾದ ಅನುದಾನ ಸರಿಯಾದ ರೀತಿಯಲ್ಲಿ ಸದ್ಬಳಕೆಯಾಗಿಲ್ಲ~ ಎಂದರು.<br /> <br /> ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅಂಜನಮೂರ್ತಿ, ನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ಜಿ.ಪಂ. ಮಾಜಿ ಸದಸ್ಯ ಎಚ್.ಸೀನಪ್ಪ ಮಾತನಾಡಿದರು.<br /> <br /> ಮಾಜಿ ಶಾಸಕ ವಿ.ಕೃಷ್ಣಪ್ಪ. ಜಿ.ಪಂ. ಸದಸ್ಯ ವಿ.ಜಿ. ಜಯರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಭಾವ, ಸದಸ್ಯರಾದ ಸಿ.ವೆಂಕಟೇಶ್, ಮು.ಕೃಷ್ಣಮೂರ್ತಿ, ತಾ.ಪಂ. ಅಧ್ಯಕ್ಷ ಚಾಂದ್ಪಾಷ, ಮಾಜಿ ಅಧ್ಯಕ್ಷ ಜಯಶಂಕರ್, ಮುಖಂಡರಾದ ಗೋಪಾಲಕೃಷ್ಣ, ಎಸ್.ಬಿ. ಬಾಷಾ, ಡಿ.ಎಂ.ಪ್ರಕಾಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>