ಪ್ರಣಾಳಿಕೆ ಕಿರುಹೊತ್ತಿಗೆ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳು ಇರಬೇಕೆಂಬ ಬಗ್ಗೆ ರಾಜ್ಯದ ವಿವಿಧ ಕ್ಷೇತ್ರಗಳ ತಜ್ಞರಿಂದ ಸಂಗ್ರಹಿಸಿದ ಮಾಹಿತಿಯ ಕಿರುಹೊತ್ತಿಗೆಯನ್ನು ರಾಜ್ಯ ಬಿಜೆಪಿ ಶನಿವಾರ ಪಕ್ಷದ ಹೈಕಮಾಂಡ್ಗೆ ಸಲ್ಲಿಸಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲೇ ಪ್ರಣಾಳಿಕೆಯ ಕಿರುಹೊತ್ತಿಗೆಯನ್ನು ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮುರುಳಿ ಮನೋಹರ ಜೋಶಿ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತಿತರರಿಗೆ ನೀಡಿದರು.
ಹೈಕಮಾಂಡ್ ಸಲಹೆ ಮೇರೆಗೆ ಈ ಅಭಿಪ್ರಾಯ ಸಂಗ್ರಹಿಸಲಾಗಿತ್ತು. 40ಕ್ಕೂ ಹೆಚ್ಚು ತಜ್ಞರ ಹಾಗೂ ಸಾರ್ವಜನಿಕರಿಂದ ಕ್ಷೇತ್ರವಾರು ಸಂಗ್ರಹಿಸಿದ್ದ ಅಭಿಪ್ರಾಯಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಪ್ರಣಾಳಿಕೆ ಪ್ರಕೋಷ್ಠದ ರಾಷ್ಟ್ರೀಯ ಸಹ ಸಂಚಾಲಕ ಎಂ.ಎಚ್.ಶ್ರೀಧರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.