<p><strong>ಮೈಸೂರು: </strong>ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ವಿರುದ್ಧ ಇಲ್ಲಿನ ದೇವರಾಜ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.<br /> <br /> ಸೆಕ್ಟರ್ ಮ್ಯಾಜಿಸ್ಟ್ರೇಟ್ ಚಂದ್ರಶೇಖರಮೂರ್ತಿ ನೀಡಿದ ದೂರನ್ನು ಆಧರಿಸಿ ಪ್ರಜಾಪ್ರತಿನಿಧಿ ಕಾಯ್ದೆಯ 125ರ ನಿಯಮದ ಅಡಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಮುಂದುವರಿಯಲಾಗಿದೆ ಎಂದು ದೇವರಾಜ ಠಾಣೆಯ ಇನ್ಸ್ಪೆಕ್ಟರ್ ಕಾಂತರಾಜು ತಿಳಿಸಿದ್ದಾರೆ.<br /> <br /> ‘ಪಾಕಿಸ್ತಾನದ ಗಡಿಯಲ್ಲಿ ಭಾರತದ ಇಬ್ಬರು ಯೋಧರ ಶಿರಚ್ಛೇದನವಾದಾಗ ಪ್ರಧಾನಿ ಮನಮೋಹನ ಸಿಂಗ್ ಅವರು ಸಣ್ಣ ಪ್ರತಿರೋಧವನ್ನೂ ತೋರಲಿಲ್ಲ. ಇದಕ್ಕೆ ಪ್ರತಿಯಾಗಿ ಪಾಕ್ನ ನಾಲ್ವರ ಶಿರಚ್ಛೇದನ ಮಾಡಿ ಎಂದು ನಮ್ಮ ಸೈನಿಕರಿಗೆ ಹೇಳಬಹುದಿತ್ತು. ಭಾರತದಲ್ಲಿರುವ ರಾಜತಾಂತ್ರಿಕ ಕಚೇರಿಯನ್ನು ಧ್ವಂಸ ಮಾಡಬೇಕಾಗಿತ್ತು’ ಎಂದು ಮಾರ್ಚ್ 20ರಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪ್ರತಾಪಸಿಂಹ ಹೇಳಿದ್ದರು.<br /> <br /> ಇದೇ ಹೇಳಿಕೆಯನ್ನು ನಾಮಪತ್ರ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೂ ಪುನರುಚ್ಚರಿಸಿದ್ದರು ಎಂದು ಜಿಲ್ಲಾ ನಗರ ಕಾಂಗ್ರೆಸ್ ಸಮಿತಿಯ ಮಾಧ್ಯಮ ಸಂಚಾಲಕ ಎಂ. ಲಕ್ಷ್ಮಣ್ ಅವರು ಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದರು.<br /> <br /> ‘ಜಿಲ್ಲಾಧಿಕಾರಿ ಕಚೇರಿ ಎದುರು ಈ ಹೇಳಿಕೆ ನೀಡಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಪ್ರಕರಣವನ್ನು ದೇವರಾಜ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ಲಕ್ಷ್ಮೀಪುರಂ ಠಾಣೆಯ ಇನ್ಸ್ಪೆಕ್ಟರ್ ಸಿದ್ದರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ವಿರುದ್ಧ ಇಲ್ಲಿನ ದೇವರಾಜ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.<br /> <br /> ಸೆಕ್ಟರ್ ಮ್ಯಾಜಿಸ್ಟ್ರೇಟ್ ಚಂದ್ರಶೇಖರಮೂರ್ತಿ ನೀಡಿದ ದೂರನ್ನು ಆಧರಿಸಿ ಪ್ರಜಾಪ್ರತಿನಿಧಿ ಕಾಯ್ದೆಯ 125ರ ನಿಯಮದ ಅಡಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಮುಂದುವರಿಯಲಾಗಿದೆ ಎಂದು ದೇವರಾಜ ಠಾಣೆಯ ಇನ್ಸ್ಪೆಕ್ಟರ್ ಕಾಂತರಾಜು ತಿಳಿಸಿದ್ದಾರೆ.<br /> <br /> ‘ಪಾಕಿಸ್ತಾನದ ಗಡಿಯಲ್ಲಿ ಭಾರತದ ಇಬ್ಬರು ಯೋಧರ ಶಿರಚ್ಛೇದನವಾದಾಗ ಪ್ರಧಾನಿ ಮನಮೋಹನ ಸಿಂಗ್ ಅವರು ಸಣ್ಣ ಪ್ರತಿರೋಧವನ್ನೂ ತೋರಲಿಲ್ಲ. ಇದಕ್ಕೆ ಪ್ರತಿಯಾಗಿ ಪಾಕ್ನ ನಾಲ್ವರ ಶಿರಚ್ಛೇದನ ಮಾಡಿ ಎಂದು ನಮ್ಮ ಸೈನಿಕರಿಗೆ ಹೇಳಬಹುದಿತ್ತು. ಭಾರತದಲ್ಲಿರುವ ರಾಜತಾಂತ್ರಿಕ ಕಚೇರಿಯನ್ನು ಧ್ವಂಸ ಮಾಡಬೇಕಾಗಿತ್ತು’ ಎಂದು ಮಾರ್ಚ್ 20ರಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪ್ರತಾಪಸಿಂಹ ಹೇಳಿದ್ದರು.<br /> <br /> ಇದೇ ಹೇಳಿಕೆಯನ್ನು ನಾಮಪತ್ರ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೂ ಪುನರುಚ್ಚರಿಸಿದ್ದರು ಎಂದು ಜಿಲ್ಲಾ ನಗರ ಕಾಂಗ್ರೆಸ್ ಸಮಿತಿಯ ಮಾಧ್ಯಮ ಸಂಚಾಲಕ ಎಂ. ಲಕ್ಷ್ಮಣ್ ಅವರು ಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದರು.<br /> <br /> ‘ಜಿಲ್ಲಾಧಿಕಾರಿ ಕಚೇರಿ ಎದುರು ಈ ಹೇಳಿಕೆ ನೀಡಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಪ್ರಕರಣವನ್ನು ದೇವರಾಜ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ಲಕ್ಷ್ಮೀಪುರಂ ಠಾಣೆಯ ಇನ್ಸ್ಪೆಕ್ಟರ್ ಸಿದ್ದರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>