<p><strong>ಜಮಖಂಡಿ: </strong>ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ ಎನಿಸಿರುವ ನಾಟಕಗಳಿಗೆ ಜೀವಕಳೆ ತುಂಬಿಕೊಡುವ ಪ್ರತಿಭಾವಂತ ಕಲಾವಿದರನ್ನು ಸರ್ಕಾರ ಮತ್ತು ಸಮಾಜ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ಮಾಜಿ ಸಚಿವ ಸಿದ್ದು ನ್ಯಾಮಗೌಡ ಹೇಳಿದರು.<br /> <br /> ಸ್ಥಳೀಯ ಬಸವ ಸಮಿತಿ ಹಾಗೂ ಬಸವ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಬಸವ ಭವನದಲ್ಲಿ ಚಿತ್ರದುರ್ಗದ ಮುರುಘಾಮಠದ ಜಮುರಾ ಕಲಾಲೋಕ ತಂಡದ ಕಲಾವಿದರಿಂದ ಪ್ರದರ್ಶನಗೊಂಡ ಎಡೆಯೂರ ಸಿದ್ಧಲಿಂಗೇಶ್ವರ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿಧಾನ ಪರಿಷತ್ತು ಸದಸ್ಯ ಜಿ.ಎಸ್. ನ್ಯಾಮಗೌಡ ಮುಖ್ಯ ಅತಿಥಿಯಾಗಿ ಮಾತನಾಡಿದರು. ಹಿರಿಯ ಸಾಹಿತಿ ಡಾ. ಸಂಗಮೇಶ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಸಿಂಧೂರ, ಕಲಾಲೋಕದ ವ್ಯವಸ್ಥಾಪಕ ಎಂ.ಟಿ.ರುದ್ರಮೂರ್ತಿ, ಭರತ ಕುಲಕರ್ಣಿ ವೇದಿಕೆಯಲ್ಲಿದ್ದರು.<br /> <br /> ಸರಸ್ವತಿ ಸಬರದ ಪ್ರಾರ್ಥನೆ ಗೀತೆ ಹಾಡಿದರು. ಬಸವ ಸಮಿತಿ ಅಧ್ಯಕ್ಷ ಕಾಡು ಮಾಳಿ ಸ್ವಾಗತಿಸಿದರು. ಬಸವ ಕೇಂದ್ರ ಅಧ್ಯಕ್ಷ ರವಿ ಯಡಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲೇಶಪ್ಪ ಗೆದ್ದೆಪ್ಪನವರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ: </strong>ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ ಎನಿಸಿರುವ ನಾಟಕಗಳಿಗೆ ಜೀವಕಳೆ ತುಂಬಿಕೊಡುವ ಪ್ರತಿಭಾವಂತ ಕಲಾವಿದರನ್ನು ಸರ್ಕಾರ ಮತ್ತು ಸಮಾಜ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ಮಾಜಿ ಸಚಿವ ಸಿದ್ದು ನ್ಯಾಮಗೌಡ ಹೇಳಿದರು.<br /> <br /> ಸ್ಥಳೀಯ ಬಸವ ಸಮಿತಿ ಹಾಗೂ ಬಸವ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಬಸವ ಭವನದಲ್ಲಿ ಚಿತ್ರದುರ್ಗದ ಮುರುಘಾಮಠದ ಜಮುರಾ ಕಲಾಲೋಕ ತಂಡದ ಕಲಾವಿದರಿಂದ ಪ್ರದರ್ಶನಗೊಂಡ ಎಡೆಯೂರ ಸಿದ್ಧಲಿಂಗೇಶ್ವರ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿಧಾನ ಪರಿಷತ್ತು ಸದಸ್ಯ ಜಿ.ಎಸ್. ನ್ಯಾಮಗೌಡ ಮುಖ್ಯ ಅತಿಥಿಯಾಗಿ ಮಾತನಾಡಿದರು. ಹಿರಿಯ ಸಾಹಿತಿ ಡಾ. ಸಂಗಮೇಶ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಸಿಂಧೂರ, ಕಲಾಲೋಕದ ವ್ಯವಸ್ಥಾಪಕ ಎಂ.ಟಿ.ರುದ್ರಮೂರ್ತಿ, ಭರತ ಕುಲಕರ್ಣಿ ವೇದಿಕೆಯಲ್ಲಿದ್ದರು.<br /> <br /> ಸರಸ್ವತಿ ಸಬರದ ಪ್ರಾರ್ಥನೆ ಗೀತೆ ಹಾಡಿದರು. ಬಸವ ಸಮಿತಿ ಅಧ್ಯಕ್ಷ ಕಾಡು ಮಾಳಿ ಸ್ವಾಗತಿಸಿದರು. ಬಸವ ಕೇಂದ್ರ ಅಧ್ಯಕ್ಷ ರವಿ ಯಡಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲೇಶಪ್ಪ ಗೆದ್ದೆಪ್ಪನವರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>