<p>ಕೃಷ್ಣರಾಜಪುರ: ಸಮಾಜದ ಕಟ್ಟ ಕಡೆಯ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷವಾಗಿ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಪ್ರತಿಭೆ ಗುರುತಿಸುವುದು ಶಿಕ್ಷಕರ ಹೊಣೆ ಎಂದು ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ ಹೇಳಿದರು.<br /> <br /> ದೇವಸಂದ್ರ ಸರ್ಕಾರಿ ಶಾಲೆಯ ಆವರಣದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ನಾಲ್ಕು ಹೆಚ್ಚುವರಿ ಕೊಠಡಿಗಳಿಗೆ ಗುದ್ದಲಿ ಪೂಜೆ ಮತ್ತು ಸರ್ವ ಶಿಕ್ಷಣ ಅಭಿಯಾನದಡಿ ನಿರ್ಮಿಸಿದ ಒಂದು ಹೆಚ್ಚುವರಿ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಾಲಾ ಅಭಿವೃದ್ಧಿ ಸಮಿತಿಯು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದಿಟ್ಟಿದೆ. 2-3 ತಿಂಗಳ ಒಳಗೆ ಬಗೆಹರಿಸಲಾಗುವುದು. ಕುಡಿಯುವ ನೀರು, ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ವಂತ ಖರ್ಚಿನಿಂದ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸತೀಶ್, ಬಿಬಿಎಂಪಿ ಸಹಾಯಕ ಎಂಜಿನಿಯರ್ ಸುರೇಶ್, ಮುಖ್ಯ ಶಿಕ್ಷಕಿ ಶಂಕರಮ್ಮ, ಮುಖಂಡ ಟಿ.ಕೃಷ್ಣಪ್ಪ, ಕೆ.ಮುನಿಸ್ವಾಮಿ, ಬ್ಯಾಂಕ್ ಮುನಿರಾಜು, ವೆಂಕಟೇಶ್, ಶಾಂತಕುಮಾರಿ ,ಕಲಾ, ಸಾಕಮ್ಮ, ರತ್ನ ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ: ಸಮಾಜದ ಕಟ್ಟ ಕಡೆಯ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷವಾಗಿ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಪ್ರತಿಭೆ ಗುರುತಿಸುವುದು ಶಿಕ್ಷಕರ ಹೊಣೆ ಎಂದು ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ ಹೇಳಿದರು.<br /> <br /> ದೇವಸಂದ್ರ ಸರ್ಕಾರಿ ಶಾಲೆಯ ಆವರಣದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ನಾಲ್ಕು ಹೆಚ್ಚುವರಿ ಕೊಠಡಿಗಳಿಗೆ ಗುದ್ದಲಿ ಪೂಜೆ ಮತ್ತು ಸರ್ವ ಶಿಕ್ಷಣ ಅಭಿಯಾನದಡಿ ನಿರ್ಮಿಸಿದ ಒಂದು ಹೆಚ್ಚುವರಿ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶಾಲಾ ಅಭಿವೃದ್ಧಿ ಸಮಿತಿಯು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದಿಟ್ಟಿದೆ. 2-3 ತಿಂಗಳ ಒಳಗೆ ಬಗೆಹರಿಸಲಾಗುವುದು. ಕುಡಿಯುವ ನೀರು, ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ವಂತ ಖರ್ಚಿನಿಂದ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.<br /> <br /> ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸತೀಶ್, ಬಿಬಿಎಂಪಿ ಸಹಾಯಕ ಎಂಜಿನಿಯರ್ ಸುರೇಶ್, ಮುಖ್ಯ ಶಿಕ್ಷಕಿ ಶಂಕರಮ್ಮ, ಮುಖಂಡ ಟಿ.ಕೃಷ್ಣಪ್ಪ, ಕೆ.ಮುನಿಸ್ವಾಮಿ, ಬ್ಯಾಂಕ್ ಮುನಿರಾಜು, ವೆಂಕಟೇಶ್, ಶಾಂತಕುಮಾರಿ ,ಕಲಾ, ಸಾಕಮ್ಮ, ರತ್ನ ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>