<p><strong>ಬೆಂಗಳೂರು: </strong>`ಪ್ರತಿ ಜಿಲ್ಲೆಗಳಲ್ಲಿಯೂ ಕಣ್ಣಿನ ಆಸ್ಪತ್ರೆಗಳನ್ನು ತೆರೆಯಬೇಕು~ ಎಂದು ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ. ಶಿವಪ್ರಸಾದ್ ರೆಡ್ಡಿ ಸಲಹೆ ನೀಡಿದರು.<br /> <br /> ವಾಸನ್ ಕಣ್ಣಿನ ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಹಾಯಕರ ಸಂಘವು ಜಂಟಿಯಾಗಿ ನಿಮ್ಹಾನ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ದೃಷ್ಟಿ ಮಾಪನಕಾರರು ಮತ್ತು ಕನ್ನಡಕ ತಯಾರಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕಣ್ಣು ಮನುಷ್ಯನ ಪ್ರಮುಖವಾದ ಅಂಗಗಳಲ್ಲಿ ಒಂದು. ಕಣ್ಣಿಗೆ ತೊಂದರೆಯಾದರೆ ಇಡೀ ಬದುಕೇ ಅಂಧಕಾರವಾಗುತ್ತದೆ. ಕಣ್ಣಿನ ಚಿಕಿತ್ಸೆಗೆ ಎಲ್ಲೆಡೆಯೂ ಸೌಲಭ್ಯವನ್ನು ನೀಡುವಂತಾಗಬೇಕು~ ಎಂದರು.<br /> <br /> `ಈಗ ಚಿಕ್ಕ ಮಕ್ಕಳಿಗೂ ಹೆಚ್ಚಿನ ದೃಷ್ಟಿದೋಷ ಕಂಡುಬರುತ್ತಿದೆ. ಮಕ್ಕಳಿಗೆ ಸರಿಯಾದ ಚಿಕಿತ್ಸೆಯ ಅವಶ್ಯಕತೆಯಿದೆ. ಅಸಂಖ್ಯಾತ ಮಕ್ಕಳು ತಲೆನೋವು ಮತ್ತು ಕಣ್ಣುರಿಯೆಂದು ಬರುತ್ತಾರೆ. ಅವರಿಗೆ ಸರಿಯಾದ ಕನ್ನಡಕಗಳು ಅಥವಾ ಬೇರೆ ರೀತಿಯ ಚಿಕಿತ್ಸೆಗಳನ್ನು ನೀಡಬೇಕು~ ಎಂದರು.<br /> <br /> `ಸಾರ್ವಜನಿಕರಿಗಾಗಿ ವಾಸನ್ ಕಣ್ಣಿನ ಆಸ್ಪತ್ರೆಯು ಈ ರೀತಿಯ ತರಬೇತಿಗಳನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಈ ರೀತಿಯ ತರಬೇತಿಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಏರ್ಪಡಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ರೋಗಿಗಳು ದೃಷ್ಟಿ ಮಾಪನಕಾರ ಮತ್ತು ನೇತ್ರ ತಜ್ಞರಿಂದ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಗ್ರಾಮೀಣ ಭಾಗದಿಂದ ಬರುವ ಜನರಿಗೆ ಚಿಕಿತ್ಸೆಯನ್ನು ಸರಿಯಾದ ಕ್ರಮದಲ್ಲಿ ನೀಡಬೇಕು~ ಎಂದು ವಾಸನ್ ಐ ಕೇರ್ ಆಸ್ಪತ್ರೆಯ ವೈದ್ಯ ಆನಂದ ಹೇಳಿದರು.<br /> <br /> ರಾಜ್ಯದ ಗ್ರಾಮೀಣ ವಿಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕರು ಮತ್ತು ಪ್ರಮುಖ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ದೃಷ್ಟಿ ಮಾಪನಕಾರರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಪ್ರತಿ ಜಿಲ್ಲೆಗಳಲ್ಲಿಯೂ ಕಣ್ಣಿನ ಆಸ್ಪತ್ರೆಗಳನ್ನು ತೆರೆಯಬೇಕು~ ಎಂದು ಮಿಂಟೋ ಆಸ್ಪತ್ರೆಯ ನಿರ್ದೇಶಕ ಡಾ. ಶಿವಪ್ರಸಾದ್ ರೆಡ್ಡಿ ಸಲಹೆ ನೀಡಿದರು.<br /> <br /> ವಾಸನ್ ಕಣ್ಣಿನ ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಹಾಯಕರ ಸಂಘವು ಜಂಟಿಯಾಗಿ ನಿಮ್ಹಾನ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ದೃಷ್ಟಿ ಮಾಪನಕಾರರು ಮತ್ತು ಕನ್ನಡಕ ತಯಾರಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಕಣ್ಣು ಮನುಷ್ಯನ ಪ್ರಮುಖವಾದ ಅಂಗಗಳಲ್ಲಿ ಒಂದು. ಕಣ್ಣಿಗೆ ತೊಂದರೆಯಾದರೆ ಇಡೀ ಬದುಕೇ ಅಂಧಕಾರವಾಗುತ್ತದೆ. ಕಣ್ಣಿನ ಚಿಕಿತ್ಸೆಗೆ ಎಲ್ಲೆಡೆಯೂ ಸೌಲಭ್ಯವನ್ನು ನೀಡುವಂತಾಗಬೇಕು~ ಎಂದರು.<br /> <br /> `ಈಗ ಚಿಕ್ಕ ಮಕ್ಕಳಿಗೂ ಹೆಚ್ಚಿನ ದೃಷ್ಟಿದೋಷ ಕಂಡುಬರುತ್ತಿದೆ. ಮಕ್ಕಳಿಗೆ ಸರಿಯಾದ ಚಿಕಿತ್ಸೆಯ ಅವಶ್ಯಕತೆಯಿದೆ. ಅಸಂಖ್ಯಾತ ಮಕ್ಕಳು ತಲೆನೋವು ಮತ್ತು ಕಣ್ಣುರಿಯೆಂದು ಬರುತ್ತಾರೆ. ಅವರಿಗೆ ಸರಿಯಾದ ಕನ್ನಡಕಗಳು ಅಥವಾ ಬೇರೆ ರೀತಿಯ ಚಿಕಿತ್ಸೆಗಳನ್ನು ನೀಡಬೇಕು~ ಎಂದರು.<br /> <br /> `ಸಾರ್ವಜನಿಕರಿಗಾಗಿ ವಾಸನ್ ಕಣ್ಣಿನ ಆಸ್ಪತ್ರೆಯು ಈ ರೀತಿಯ ತರಬೇತಿಗಳನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಈ ರೀತಿಯ ತರಬೇತಿಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಏರ್ಪಡಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ರೋಗಿಗಳು ದೃಷ್ಟಿ ಮಾಪನಕಾರ ಮತ್ತು ನೇತ್ರ ತಜ್ಞರಿಂದ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಗ್ರಾಮೀಣ ಭಾಗದಿಂದ ಬರುವ ಜನರಿಗೆ ಚಿಕಿತ್ಸೆಯನ್ನು ಸರಿಯಾದ ಕ್ರಮದಲ್ಲಿ ನೀಡಬೇಕು~ ಎಂದು ವಾಸನ್ ಐ ಕೇರ್ ಆಸ್ಪತ್ರೆಯ ವೈದ್ಯ ಆನಂದ ಹೇಳಿದರು.<br /> <br /> ರಾಜ್ಯದ ಗ್ರಾಮೀಣ ವಿಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕರು ಮತ್ತು ಪ್ರಮುಖ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ದೃಷ್ಟಿ ಮಾಪನಕಾರರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>