<p>ಬೆಂಗಳೂರು: ನಗರದ ಪ್ರತಿ ವಾರ್ಡಿನಲ್ಲಿ ಆಟದ ಮೈದಾನ, ಉದ್ಯಾನ ಮತ್ತು ಕೆರೆ ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲ ಪಾಲಿಕೆ ಸದಸ್ಯರು ಕೈ ಜೋಡಿಸಬೇಕು ಎಂದು ಸಂಸದ ಅನಂತಕುಮಾರ್ ಹೇಳಿದರು.<br /> <br /> ಸಂಸದರ ನಿಧಿಯಿಂದ ಎಸ್ಡಿಎಸ್ ಕ್ಷಯ ಮತ್ತು ರಾಜೀವ್ ಗಾಂಧಿ ಎದೆರೋಗಿಗಳ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಭಿವೃದ್ಧಿಪಡಿಸಿದ ಉದ್ಯಾನವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಕೃತಿಗೆ ಪೂರಕವಾಗಿ ಬದುಕುವ ಕುರಿತು ಗಾಂಧೀಜಿ ಕನಸು ಕಂಡಿದ್ದರು. ಕೇವಲ ದೊಡ್ಡ ದೊಡ್ಡ ಕಟ್ಟಡ ಹಾಗೂ ಮಾಲ್ಗಳಿಂದ ಕ್ರಾಂಕೀಟ್ ನಗರವನ್ನಾಗಿ ರೂಪಿಸುತ್ತಿದ್ದೇವೆ. ಹಸಿರು ಉಳಿಸುವ ಬೆಳೆಸುವ ಜವಾಬ್ದಾರಿ ನಾಗರಿಕರ ಮೇಲಿದೆ ಎಂದು ತಿಳಿಸಿದರು.<br /> <br /> ಸಂಶೋಧನಾ ಕೇಂದ್ರದ ಆವರಣದಲ್ಲಿ ಇನ್ನೊಂದು ಉದ್ಯಾನ ನಿರ್ಮಿಸಲು 6 ಲಕ್ಷ ರೂಪಾಯಿ ಧನ ಸಹಾಯ ನೀಡುವುದಾಗಿ ಭರವಸೆ ನೀಡಿದರು. ಕೇಂದ್ರದ ನಿರ್ದೇಶಕ ಡಾ.ಶಶಿಧರ್ ಬುಗ್ಗಿ, ಶಾಸಕ ಡಾ. ಡಿ.ಹೇಮಚಂದ್ರಸಾಗರ್, ಪಾಲಿಕೆ ಸದಸ್ಯೆ ಗಂಗಾಂಬಿಕೆ ಮಲ್ಲಿಕಾರ್ಜುನ, ತೇಜಸ್ವಿನಿ ಅನಂತಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಪ್ರತಿ ವಾರ್ಡಿನಲ್ಲಿ ಆಟದ ಮೈದಾನ, ಉದ್ಯಾನ ಮತ್ತು ಕೆರೆ ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲ ಪಾಲಿಕೆ ಸದಸ್ಯರು ಕೈ ಜೋಡಿಸಬೇಕು ಎಂದು ಸಂಸದ ಅನಂತಕುಮಾರ್ ಹೇಳಿದರು.<br /> <br /> ಸಂಸದರ ನಿಧಿಯಿಂದ ಎಸ್ಡಿಎಸ್ ಕ್ಷಯ ಮತ್ತು ರಾಜೀವ್ ಗಾಂಧಿ ಎದೆರೋಗಿಗಳ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಭಿವೃದ್ಧಿಪಡಿಸಿದ ಉದ್ಯಾನವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಕೃತಿಗೆ ಪೂರಕವಾಗಿ ಬದುಕುವ ಕುರಿತು ಗಾಂಧೀಜಿ ಕನಸು ಕಂಡಿದ್ದರು. ಕೇವಲ ದೊಡ್ಡ ದೊಡ್ಡ ಕಟ್ಟಡ ಹಾಗೂ ಮಾಲ್ಗಳಿಂದ ಕ್ರಾಂಕೀಟ್ ನಗರವನ್ನಾಗಿ ರೂಪಿಸುತ್ತಿದ್ದೇವೆ. ಹಸಿರು ಉಳಿಸುವ ಬೆಳೆಸುವ ಜವಾಬ್ದಾರಿ ನಾಗರಿಕರ ಮೇಲಿದೆ ಎಂದು ತಿಳಿಸಿದರು.<br /> <br /> ಸಂಶೋಧನಾ ಕೇಂದ್ರದ ಆವರಣದಲ್ಲಿ ಇನ್ನೊಂದು ಉದ್ಯಾನ ನಿರ್ಮಿಸಲು 6 ಲಕ್ಷ ರೂಪಾಯಿ ಧನ ಸಹಾಯ ನೀಡುವುದಾಗಿ ಭರವಸೆ ನೀಡಿದರು. ಕೇಂದ್ರದ ನಿರ್ದೇಶಕ ಡಾ.ಶಶಿಧರ್ ಬುಗ್ಗಿ, ಶಾಸಕ ಡಾ. ಡಿ.ಹೇಮಚಂದ್ರಸಾಗರ್, ಪಾಲಿಕೆ ಸದಸ್ಯೆ ಗಂಗಾಂಬಿಕೆ ಮಲ್ಲಿಕಾರ್ಜುನ, ತೇಜಸ್ವಿನಿ ಅನಂತಕುಮಾರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>