<p>ವಿಜಾಪುರ/ಸಂಕೇಶ್ವರ: ವಿಜಾಪುರ ಜಿಲ್ಲೆಯ ಬಬಲೇಶ್ವರ ಮತ್ತು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹಾಗೂ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 7 ಜನರು ಸಾವಿಗೀಡಾಗಿದ್ದಾರೆ.<br /> <br /> ವಿಜಾಪುರ ತಾಲ್ಲೂಕಿನ ಬಬಲೇಶ್ವರ ಹತ್ತಿರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.<br /> <br /> ಕಾರು ಚಾಲಕ ಹೈದ್ರಾಬಾದ್ನ ರಮೇಶ ಶಾಂತಣ್ಣ ಯಾದವ್ (28), ಹೈದ್ರಾಬಾದ್ನ ನವ್ಯಶ್ರೀ ಎನ್. ಪ್ರಸಾದ್ ನಾಯ್ಡು (15) ಮೃತಪಟ್ಟಿದ್ದು, ಆರ್. ಚಿನ್ನಬಾಬು ಮಲಗಜ್ಜಯ್ಯ (50), ಆರ್.ರೋಹಿಣಿ ಚಿನ್ನಬಾಬು ನಾಯ್ಡು (40) ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಾರು ಪಣಜಿಯಿಂದ ಹೈದ್ರಾಬಾದ್ಗೆ ಹೊರಟಿತ್ತು. ಬಬಲೇಶ್ವರ ಹತ್ತಿರ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಸಂಕೇಶ್ವರ ವರದಿ:</strong> ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಹಳೆ ಪಿ.ಬಿ. ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಟ್ರಕ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ.<br /> <br /> ಮೃತರನ್ನು ಕಣಗಲಾ ಗ್ರಾಮದ ರೋಹಿತ ಹವಾಲ್ದಾರ (30), ಅನಿಲ್ ಹವಾಲ್ದಾರ (32) ಮತ್ತು ಚೇತನ ಕಾಂಬಳೆ (28) ಎಂದು ಗುರುತಿಸಲಾಗಿದೆ.<br /> <br /> ಕಣಗಲಾ ಕಡೆಯಿಂದ ಸಂಕೇಶ್ವರಕ್ಕೆ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಹಳೇ ಪಿ.ಬಿ.ರಸ್ತೆಯಲ್ಲಿ ಕಾರಿಕಾಜಿ ಪೆಟ್ರೋಲ್ ಪಂಪ್ ಹತ್ತಿರ ಟ್ರಕ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತು. ಸಂಕೇಶ್ವರ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.<br /> <br /> <strong>ಬಾಗಲಕೋಟೆ ವರದಿ: </strong>ಟಂಟಂ ಮತ್ತು ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಯಡಹಳ್ಳಿ ಸಮೀಪ ಮಂಗಳವಾರ ರಾತ್ರಿ ನಡೆದಿದೆ.<br /> <br /> ಬೀಳಗಿ ತಾಲ್ಲೂಕಿನ ತೆಗ್ಗಿ ಗ್ರಾಮದಲ್ಲಿ ನಡೆಯಲಿದ್ದ ಮದುವೆಗೆ ಬಾಗಲಕೋಟೆಯಿಂದ ಟಂಟಂ ಮೂಲಕ ಹೊರಟಿದ್ದ ಶಿಕ್ಕೇರಿಯ ರಂಗಪ್ಪ ಪೂಜಾರಿ (51) ಮತ್ತು ಬಾಗಲಕೋಟೆಯ ಮಾರುತಿ ಮನಗೂಳಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ/ಸಂಕೇಶ್ವರ: ವಿಜಾಪುರ ಜಿಲ್ಲೆಯ ಬಬಲೇಶ್ವರ ಮತ್ತು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹಾಗೂ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 7 ಜನರು ಸಾವಿಗೀಡಾಗಿದ್ದಾರೆ.<br /> <br /> ವಿಜಾಪುರ ತಾಲ್ಲೂಕಿನ ಬಬಲೇಶ್ವರ ಹತ್ತಿರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.<br /> <br /> ಕಾರು ಚಾಲಕ ಹೈದ್ರಾಬಾದ್ನ ರಮೇಶ ಶಾಂತಣ್ಣ ಯಾದವ್ (28), ಹೈದ್ರಾಬಾದ್ನ ನವ್ಯಶ್ರೀ ಎನ್. ಪ್ರಸಾದ್ ನಾಯ್ಡು (15) ಮೃತಪಟ್ಟಿದ್ದು, ಆರ್. ಚಿನ್ನಬಾಬು ಮಲಗಜ್ಜಯ್ಯ (50), ಆರ್.ರೋಹಿಣಿ ಚಿನ್ನಬಾಬು ನಾಯ್ಡು (40) ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಾರು ಪಣಜಿಯಿಂದ ಹೈದ್ರಾಬಾದ್ಗೆ ಹೊರಟಿತ್ತು. ಬಬಲೇಶ್ವರ ಹತ್ತಿರ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಸಂಕೇಶ್ವರ ವರದಿ:</strong> ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಹಳೆ ಪಿ.ಬಿ. ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಟ್ರಕ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ.<br /> <br /> ಮೃತರನ್ನು ಕಣಗಲಾ ಗ್ರಾಮದ ರೋಹಿತ ಹವಾಲ್ದಾರ (30), ಅನಿಲ್ ಹವಾಲ್ದಾರ (32) ಮತ್ತು ಚೇತನ ಕಾಂಬಳೆ (28) ಎಂದು ಗುರುತಿಸಲಾಗಿದೆ.<br /> <br /> ಕಣಗಲಾ ಕಡೆಯಿಂದ ಸಂಕೇಶ್ವರಕ್ಕೆ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಹಳೇ ಪಿ.ಬಿ.ರಸ್ತೆಯಲ್ಲಿ ಕಾರಿಕಾಜಿ ಪೆಟ್ರೋಲ್ ಪಂಪ್ ಹತ್ತಿರ ಟ್ರಕ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತು. ಸಂಕೇಶ್ವರ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.<br /> <br /> <strong>ಬಾಗಲಕೋಟೆ ವರದಿ: </strong>ಟಂಟಂ ಮತ್ತು ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಯಡಹಳ್ಳಿ ಸಮೀಪ ಮಂಗಳವಾರ ರಾತ್ರಿ ನಡೆದಿದೆ.<br /> <br /> ಬೀಳಗಿ ತಾಲ್ಲೂಕಿನ ತೆಗ್ಗಿ ಗ್ರಾಮದಲ್ಲಿ ನಡೆಯಲಿದ್ದ ಮದುವೆಗೆ ಬಾಗಲಕೋಟೆಯಿಂದ ಟಂಟಂ ಮೂಲಕ ಹೊರಟಿದ್ದ ಶಿಕ್ಕೇರಿಯ ರಂಗಪ್ಪ ಪೂಜಾರಿ (51) ಮತ್ತು ಬಾಗಲಕೋಟೆಯ ಮಾರುತಿ ಮನಗೂಳಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>