<p><strong>ಬೆಂಗಳೂರು: </strong>ಚಾಮರಾಜಪೇಟೆ ಒಂದನೇ ಮುಖ್ಯರಸ್ತೆ ನಿವಾಸಿ ರಾಜೇಶ್ಶರ್ಮಾ (35) ಮತ್ತು ಎಚ್ಎಸ್ಆರ್ ಲೇಔಟ್ ಒಂದನೇ ಹಂತದ ನಿವಾಸಿ ಪ್ರಭಾಕರ್ (42) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ರಾಜಸ್ತಾನ ಮೂಲದ ರಾಜೇಶ್ಶರ್ಮಾ, ಕಾಟನ್ಪೇಟೆಯ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.<br /> <br /> ಪತ್ನಿ ಮತ್ತು ಮಕ್ಕಳು ಡಿ.9ರಂದು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ರಾತ್ರಿ ಮೃತಪಟ್ಟರು ಎಂದು ಚಾಮರಾಜಪೇಟೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.<br /> <br /> <strong>ಮತ್ತೊಂದು ಪ್ರಕರಣ: </strong>ಪ್ರಭಾಕರ್, ಕುಟುಂಬ ಸದಸ್ಯರೊಂದಿಗೆ ಎಚ್ಎಸ್ಆರ್ ಲೇಔಟ್ 24ನೇ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.<br /> ಮನೆಯ ಸಮೀಪವೇ ಬಜ್ಜಿ ಅಂಗಡಿ ಇಟ್ಟುಕೊಂಡಿದ್ದ ಅವರು ಮದ್ಯವ್ಯಸನಿಯಾಗಿದ್ದರು.<br /> <br /> ಪ್ರಭಾಕರ್, ಡಿ.10ರಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎಚ್ಎಸ್ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಾಮರಾಜಪೇಟೆ ಒಂದನೇ ಮುಖ್ಯರಸ್ತೆ ನಿವಾಸಿ ರಾಜೇಶ್ಶರ್ಮಾ (35) ಮತ್ತು ಎಚ್ಎಸ್ಆರ್ ಲೇಔಟ್ ಒಂದನೇ ಹಂತದ ನಿವಾಸಿ ಪ್ರಭಾಕರ್ (42) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ರಾಜಸ್ತಾನ ಮೂಲದ ರಾಜೇಶ್ಶರ್ಮಾ, ಕಾಟನ್ಪೇಟೆಯ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.<br /> <br /> ಪತ್ನಿ ಮತ್ತು ಮಕ್ಕಳು ಡಿ.9ರಂದು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ರಾತ್ರಿ ಮೃತಪಟ್ಟರು ಎಂದು ಚಾಮರಾಜಪೇಟೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.<br /> <br /> <strong>ಮತ್ತೊಂದು ಪ್ರಕರಣ: </strong>ಪ್ರಭಾಕರ್, ಕುಟುಂಬ ಸದಸ್ಯರೊಂದಿಗೆ ಎಚ್ಎಸ್ಆರ್ ಲೇಔಟ್ 24ನೇ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.<br /> ಮನೆಯ ಸಮೀಪವೇ ಬಜ್ಜಿ ಅಂಗಡಿ ಇಟ್ಟುಕೊಂಡಿದ್ದ ಅವರು ಮದ್ಯವ್ಯಸನಿಯಾಗಿದ್ದರು.<br /> <br /> ಪ್ರಭಾಕರ್, ಡಿ.10ರಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಎಚ್ಎಸ್ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>