<p><strong>ಹೈದರಾಬಾದ್ (ಐಎಎನ್ಎಸ್</strong>): ತೆಲಂಗಾಣ ಪ್ರತೇಕ ರಾಜ್ಯದ ಬೇಡಿಕೆ ಪರಿಶೀಲನೆ ಅಂತಿಮ ಹಂತದಲ್ಲಿದೆ ಎಂಬ ಸುಳಿವು ದೊರೆತ ಬೆನ್ನಲ್ಲೇ ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ರಾಯಲಸೀಮಾ ಪ್ರದೇಶದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ.<br /> <br /> ಸಮಖ್ಯ ಆಂಧ್ರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಗುರುವಾರ ಕಡಪಾ, ಅನಂತಪುರ ಜಿಲ್ಲೆಗಳಲ್ಲಿ ಭಾರಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಆಂಧ್ರ ಪ್ರದೇಶ ವಿಭಜನೆಗೆ ವಿರೋಧ ವ್ಯಕ್ತವಾಗಿದೆ.<br /> <br /> ಕಡಪಾ ಜಿಲ್ಲೆಯಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಘೋಷಣೆ ಕೂಗಿದರು.<br /> <br /> ಪ್ರತ್ಯೇಕ ರಾಯಲಸೀಮಾ ರಾಜ್ಯಕ್ಕೆ ಒತ್ತಾಯಿಸಿ ರಾಯಲಸೀಮಾ ಪರಿರಕ್ಷಣಾ ಸಮಿತಿ (ಆರ್ಪಿಸಿ) ಸಂಸ್ಥಾಪಕ ಬೈರೆಡ್ಡಿ ರಾಜಶೇಖರ್ ಹೈದರಾಬಾದ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.<br /> <br /> ತೆಲಂಗಾಣವನ್ನು ನಮ್ಮ ರಾಜ್ಯವೆಂದು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸುವುದಾದರೆ, ರಾಯಲಸೀಮಾ ಪ್ರದೇಶವನ್ನೂ ಪ್ರತ್ಯೇಕ ರಾಜ್ಯ ಎಂದು ಘೋಷಿಸಬೇಕು ಎಂದು ಅವರು ಬೇಡಿಕೆ ಮುಂದಿಟ್ಟಿದ್ದಾರೆ.<br /> <br /> ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಿರುವ ತೆಲಂಗಾಣ ಜಂಟಿ ಕ್ರಿಯಾ ಸಮಿತಿ (ಜೆಎಸಿ) ನವದೆಹಲಿಯಲ್ಲಿ ಹಲವು ಸುತ್ತಿನ ದುಂಡು ಮೇಜಿನ ಸಭೆ ನಡೆಸಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಬೆಂಬಲ ಪಡೆಯುವ ಹಿನ್ನೆಲೆಯಲ್ಲಿ ಅದು ಸಭೆಗಳನ್ನು ನಡೆಸುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಪರ-ವಿರೋಧ ಧ್ವನಿಗಳು ಬಲಗೊಳ್ಳತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್</strong>): ತೆಲಂಗಾಣ ಪ್ರತೇಕ ರಾಜ್ಯದ ಬೇಡಿಕೆ ಪರಿಶೀಲನೆ ಅಂತಿಮ ಹಂತದಲ್ಲಿದೆ ಎಂಬ ಸುಳಿವು ದೊರೆತ ಬೆನ್ನಲ್ಲೇ ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ರಾಯಲಸೀಮಾ ಪ್ರದೇಶದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ.<br /> <br /> ಸಮಖ್ಯ ಆಂಧ್ರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಗುರುವಾರ ಕಡಪಾ, ಅನಂತಪುರ ಜಿಲ್ಲೆಗಳಲ್ಲಿ ಭಾರಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಆಂಧ್ರ ಪ್ರದೇಶ ವಿಭಜನೆಗೆ ವಿರೋಧ ವ್ಯಕ್ತವಾಗಿದೆ.<br /> <br /> ಕಡಪಾ ಜಿಲ್ಲೆಯಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಘೋಷಣೆ ಕೂಗಿದರು.<br /> <br /> ಪ್ರತ್ಯೇಕ ರಾಯಲಸೀಮಾ ರಾಜ್ಯಕ್ಕೆ ಒತ್ತಾಯಿಸಿ ರಾಯಲಸೀಮಾ ಪರಿರಕ್ಷಣಾ ಸಮಿತಿ (ಆರ್ಪಿಸಿ) ಸಂಸ್ಥಾಪಕ ಬೈರೆಡ್ಡಿ ರಾಜಶೇಖರ್ ಹೈದರಾಬಾದ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.<br /> <br /> ತೆಲಂಗಾಣವನ್ನು ನಮ್ಮ ರಾಜ್ಯವೆಂದು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸುವುದಾದರೆ, ರಾಯಲಸೀಮಾ ಪ್ರದೇಶವನ್ನೂ ಪ್ರತ್ಯೇಕ ರಾಜ್ಯ ಎಂದು ಘೋಷಿಸಬೇಕು ಎಂದು ಅವರು ಬೇಡಿಕೆ ಮುಂದಿಟ್ಟಿದ್ದಾರೆ.<br /> <br /> ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಿರುವ ತೆಲಂಗಾಣ ಜಂಟಿ ಕ್ರಿಯಾ ಸಮಿತಿ (ಜೆಎಸಿ) ನವದೆಹಲಿಯಲ್ಲಿ ಹಲವು ಸುತ್ತಿನ ದುಂಡು ಮೇಜಿನ ಸಭೆ ನಡೆಸಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಬೆಂಬಲ ಪಡೆಯುವ ಹಿನ್ನೆಲೆಯಲ್ಲಿ ಅದು ಸಭೆಗಳನ್ನು ನಡೆಸುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಪರ-ವಿರೋಧ ಧ್ವನಿಗಳು ಬಲಗೊಳ್ಳತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>