<p><strong>ಬೆಂಗಳೂರು: </strong>‘ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಪ್ರತ್ಯೇಕ ಶ್ರೇಣಿಯ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅವರಿಗೆ 2 ವರ್ಷಗಳ ಸೂಕ್ತ ತರಬೇತಿ ನೀಡಬೇಕು’ ಎಂದು ಬಳ್ಳಾರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟರಾವ್ ಘೋರ್ಪಡೆ ಹೇಳಿದರು.<br /> <br /> ಕಾರಿಥಾಸ್ ಇಂಡಿಯಾ, ಕ್ರಾಸ್ ಬೆಂಗಳೂರು ಹಾಗೂ ಜನವಿಕಾಸ ಕರ್ನಾಟಕ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಪಂಚಾಯತ್ ರಾಜ್ ಸಬಲೀಕರಣ’ ಚಿಂತನಾ ಸಮಾವೇಶದಲ್ಲಿ ಅವರು ಮಾತನಾಡಿದರು.<br /> <br /> ‘ರಾಜ್ಯದಲ್ಲಿ 5,773 ಗ್ರಾಮ ಪಂಚಾಯಿತಿಗಳಿದ್ದರೂ, 97 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯದರ್ಶಿಗಳೇ ಇಲ್ಲ. ಇರುವ ಕಾರ್ಯದರ್ಶಿಗಳು 2–3 ಗ್ರಾಮ ಪಂಚಾಯಿತಿಗಳ ಹೊಣೆ ಹೊತ್ತಿರುವುದರಿಂದ ಅವರಿಗೆ ಸೂಕ್ತ ಮಾಹಿತಿಯೇ ಇರುವುದಿಲ್ಲ’ ಎಂದರು.<br /> <br /> ‘ಗ್ರಾಮ ಪಂಚಾಯಿತಿಗೆ ನೇಮಕ ಮಾಡುವ ಅಧಿಕಾರಿಗಳಿಗೆ 2 ವರ್ಷಗಳ ಸೂಕ್ತ ತರಬೇತಿ ನೀಡಬೇಕು. ನಂತರವಷ್ಟೇ ಕಾರ್ಯದರ್ಶಿಯಾಗಿ ನೇಮಕ ಮಾಡಬೇಕು. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಮಾಣವನ್ನು 10 ವರ್ಷಗಳವರೆಗೆ ಹೆಚ್ಚಿಸಬೇಕು. ಅವರ ಅಧಿಕಾರ ಅವಧಿಯನ್ನು 29 ತಿಂಗಳಿನಿಂದ 60 ತಿಂಗಳವರೆಗೆ ಏರಿಸಬೇಕು’ ಎಂದು ಅವರು ಹೇಳಿದರು.<br /> <br /> ‘ಸರ್ಕಾರವು ತನ್ನ ಬಜೆಟ್ನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಶೇ 3 ರಷ್ಟಾದರೂ ಅನುದಾನವನ್ನು ತೆಗೆದಿರಿಸಬೇಕು. ಈ ಮೂಲಕ ಸ್ಥಳೀಯ ಸಂಸ್ಥೆಗಳ ಬಲಪಡಿಸುವಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದರು.<br /> <br /> ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಹಾಗೂ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ‘ಸಾಮಾಜಿಕ ಬದಲಾವಣೆಗೆ ಕೆಲವು ಕಾನೂನುಗಳಲ್ಲಿ ತಿದ್ದುಪಡಿ ತರುವ ಅಗತ್ಯವಿದ್ದು, ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸಲು ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಬೇಕಾಗಿದೆ’ ಎಂದು ಹೇಳಿದರು.<br /> <br /> ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆ ತಂದು, ನಗರ ಮತ್ತು ಪಟ್ಟಣ ಪ್ರದೇಶದ ಜನರಿಗಿರುವ ಸೌಲಭ್ಯಗಳು, ಸೌಕರ್ಯಗಳು ಗ್ರಾಮೀಣ ಮಟ್ಟದ ಜನರಿಗೂ ದೊರೆಯುವಂತಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.<br /> <br /> ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜೆ.ಅಲೆಕ್ಸಾಂಡರ್, ಕಾರಿಥಾಸ್ ಇಂಡಿಯಾ ದಕ್ಷಿಣ ವಲಯದ ವ್ಯವಸ್ಥಾಪಕ ಜಿಮ್ಮಿ ಮ್ಯಾಥ್ಯು ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಪ್ರತ್ಯೇಕ ಶ್ರೇಣಿಯ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅವರಿಗೆ 2 ವರ್ಷಗಳ ಸೂಕ್ತ ತರಬೇತಿ ನೀಡಬೇಕು’ ಎಂದು ಬಳ್ಳಾರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟರಾವ್ ಘೋರ್ಪಡೆ ಹೇಳಿದರು.<br /> <br /> ಕಾರಿಥಾಸ್ ಇಂಡಿಯಾ, ಕ್ರಾಸ್ ಬೆಂಗಳೂರು ಹಾಗೂ ಜನವಿಕಾಸ ಕರ್ನಾಟಕ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಪಂಚಾಯತ್ ರಾಜ್ ಸಬಲೀಕರಣ’ ಚಿಂತನಾ ಸಮಾವೇಶದಲ್ಲಿ ಅವರು ಮಾತನಾಡಿದರು.<br /> <br /> ‘ರಾಜ್ಯದಲ್ಲಿ 5,773 ಗ್ರಾಮ ಪಂಚಾಯಿತಿಗಳಿದ್ದರೂ, 97 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯದರ್ಶಿಗಳೇ ಇಲ್ಲ. ಇರುವ ಕಾರ್ಯದರ್ಶಿಗಳು 2–3 ಗ್ರಾಮ ಪಂಚಾಯಿತಿಗಳ ಹೊಣೆ ಹೊತ್ತಿರುವುದರಿಂದ ಅವರಿಗೆ ಸೂಕ್ತ ಮಾಹಿತಿಯೇ ಇರುವುದಿಲ್ಲ’ ಎಂದರು.<br /> <br /> ‘ಗ್ರಾಮ ಪಂಚಾಯಿತಿಗೆ ನೇಮಕ ಮಾಡುವ ಅಧಿಕಾರಿಗಳಿಗೆ 2 ವರ್ಷಗಳ ಸೂಕ್ತ ತರಬೇತಿ ನೀಡಬೇಕು. ನಂತರವಷ್ಟೇ ಕಾರ್ಯದರ್ಶಿಯಾಗಿ ನೇಮಕ ಮಾಡಬೇಕು. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಮಾಣವನ್ನು 10 ವರ್ಷಗಳವರೆಗೆ ಹೆಚ್ಚಿಸಬೇಕು. ಅವರ ಅಧಿಕಾರ ಅವಧಿಯನ್ನು 29 ತಿಂಗಳಿನಿಂದ 60 ತಿಂಗಳವರೆಗೆ ಏರಿಸಬೇಕು’ ಎಂದು ಅವರು ಹೇಳಿದರು.<br /> <br /> ‘ಸರ್ಕಾರವು ತನ್ನ ಬಜೆಟ್ನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಶೇ 3 ರಷ್ಟಾದರೂ ಅನುದಾನವನ್ನು ತೆಗೆದಿರಿಸಬೇಕು. ಈ ಮೂಲಕ ಸ್ಥಳೀಯ ಸಂಸ್ಥೆಗಳ ಬಲಪಡಿಸುವಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದರು.<br /> <br /> ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಹಾಗೂ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ‘ಸಾಮಾಜಿಕ ಬದಲಾವಣೆಗೆ ಕೆಲವು ಕಾನೂನುಗಳಲ್ಲಿ ತಿದ್ದುಪಡಿ ತರುವ ಅಗತ್ಯವಿದ್ದು, ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸಲು ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಬೇಕಾಗಿದೆ’ ಎಂದು ಹೇಳಿದರು.<br /> <br /> ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆ ತಂದು, ನಗರ ಮತ್ತು ಪಟ್ಟಣ ಪ್ರದೇಶದ ಜನರಿಗಿರುವ ಸೌಲಭ್ಯಗಳು, ಸೌಕರ್ಯಗಳು ಗ್ರಾಮೀಣ ಮಟ್ಟದ ಜನರಿಗೂ ದೊರೆಯುವಂತಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.<br /> <br /> ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜೆ.ಅಲೆಕ್ಸಾಂಡರ್, ಕಾರಿಥಾಸ್ ಇಂಡಿಯಾ ದಕ್ಷಿಣ ವಲಯದ ವ್ಯವಸ್ಥಾಪಕ ಜಿಮ್ಮಿ ಮ್ಯಾಥ್ಯು ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>