<p><strong>ಕಿಸ್ತ್ವಾರ್ (ಪಿಟಿಐ/ಐಎಎನ್ಎಸ್</strong>): ಪ್ರಧಾನಿ ಮನಮೋಹನಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಮಂಗಳವಾರ ಪೂರ್ವ ನಿಗದಿಯಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಭಯೋತ್ಪಾದನೆ ವಿರುದ್ಧ ಇಡೀ ದೇಶ ಒಗ್ಗಟ್ಟಿನಿಂದ ಇದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಅವರು ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.<br /> <br /> ಉಭಯ ನಾಯಕರು ಸೋಮವಾರ ಉಗ್ರರ ದಾಳಿಯಿಂದಾಗಿ ಗಾಯಗೊಂಡ ಸೈನಿಕರನ್ನು ಇಲ್ಲಿನ ಬಾದಾಮಿ ಭಾಗ್ ಸೇನಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.<br /> <br /> 850 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಶಂಕುಸ್ಥಾಪನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪ್ರಧಾನಿ ಅವರು ಭಯೋತ್ಪಾದನೆ ವಿರುದ್ಧ ಇಡೀ ದೇಶ ಒಗ್ಗಟ್ಟಿನಿಂದಿದೆ. ಉಗ್ರರು ಏನೇ ಮಾಡಿದರೂ ತಮ್ಮ ಉದ್ದೇಶದಲ್ಲಿ ಸಫಲರಾಗಲು ತಾವು ಬಿಡುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಉಗ್ರರಿಗೆ ನೀಡಿದರು.<br /> <br /> ಇದೇ ವೇಳೆ ಅವರು ಉಗ್ರರೊಂದಿಗೆ ಕಾದಾಡಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸಿದರು.<br /> <br /> ಇದೇ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಭೂಕಂಪದಿಂದ ಸಂತ್ರಸ್ತರಾದವರ ಪುನರ್ವಸತಿಗಾಗಿ 600 ಕೋಟಿ ರೂಗಳ ವಿಶೇಷ ಪ್ಯಾಕೇಜ್ನ್ನು ನೀಡಬೇಕೆಂದು ಪ್ರಧಾನಿ ಅವರಲ್ಲಿ ಮನವಿ ಮಾಡಿದರು.<br /> <br /> ಇದೇ ಸಮಯದಲ್ಲಿ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನವು ಭಾರತದ ಗಡಿಯತ್ತ ಗುಂಡಿನ ದಾಳಿ ನಡೆಸಿದೆ. ಜೂನ್ ತಿಂಗಳಲ್ಲಿ ಪಾಕಿಸ್ತಾನ ಶಾಂತಿಯನ್ನು ಉಲ್ಲಂಘಿಸಿದ ನಾಲ್ಕನೆ ಪ್ರಕರಣ ಇದು.<br /> <br /> 1991ರಲ್ಲಿ ಕಣಿವೆ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಕುನಾನ್-ಫೋಸ್ಪೋರಾ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಸಂಘಟನೆಯೊಂದು ಪ್ರಧಾನಿ ಅವರಲ್ಲಿ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಿಬೇಕೆಂದು ಮನವಿ ಮಾಡಿದೆ.<br /> <br /> ಈ ಮಧ್ಯೆ ಪ್ರತ್ಯೇಕತಾವಾದಿಗಳು ಪ್ರಧಾನಿ ಅವರ ಭೇಟಿಯನ್ನು ವಿರೋಧಿಸಿ ಕರೆ ನೀಡಿದ್ದ ಪ್ರತಿಭಟನೆಯಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಮಂಗಳವಾರ ಅಸ್ತವ್ಯಸ್ತಗೊಂಡಿತು.<br /> <br /> ಹುರಿಯತ್ ಕಾನ್ಫರೇನ್ಸ್ ಹಾಗೂ ಜೆಕೆಎಲ್ಎಫ್ ಸಂಘಟನೆಗಳು ನೀಡಿದ್ದ ಸಾರ್ವತ್ರಿಕ ಮುಷ್ಕರದ ಪರಿಣಾಮ ಅಂಗಡಿ-ಮುಂಗಟ್ಟುಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಶಾಲಾಕಾಲೇಜುಗಳು ಬಾಗಿಲು ಮುಚ್ಚಿದ್ದವು. ಪ್ರಧಾನಿ ಅವರ ಭೇಟಿಯ ಹಿನ್ನೆಲೆಯಲ್ಲಿ ಕಲ್ಪಿಸಲಾಗಿದ್ದ ಭಾರಿ ಭದ್ರತೆಯಿಂದಾಗಿ ರಸ್ತೆಯೆಲ್ಲೆಲ್ಲಾ ಬರೇ ಭದ್ರತಾ ಸಿಬ್ಬಂದಿ ಕಾಣ ಬರುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಸ್ತ್ವಾರ್ (ಪಿಟಿಐ/ಐಎಎನ್ಎಸ್</strong>): ಪ್ರಧಾನಿ ಮನಮೋಹನಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಮಂಗಳವಾರ ಪೂರ್ವ ನಿಗದಿಯಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಭಯೋತ್ಪಾದನೆ ವಿರುದ್ಧ ಇಡೀ ದೇಶ ಒಗ್ಗಟ್ಟಿನಿಂದ ಇದೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಅವರು ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.<br /> <br /> ಉಭಯ ನಾಯಕರು ಸೋಮವಾರ ಉಗ್ರರ ದಾಳಿಯಿಂದಾಗಿ ಗಾಯಗೊಂಡ ಸೈನಿಕರನ್ನು ಇಲ್ಲಿನ ಬಾದಾಮಿ ಭಾಗ್ ಸೇನಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.<br /> <br /> 850 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಶಂಕುಸ್ಥಾಪನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪ್ರಧಾನಿ ಅವರು ಭಯೋತ್ಪಾದನೆ ವಿರುದ್ಧ ಇಡೀ ದೇಶ ಒಗ್ಗಟ್ಟಿನಿಂದಿದೆ. ಉಗ್ರರು ಏನೇ ಮಾಡಿದರೂ ತಮ್ಮ ಉದ್ದೇಶದಲ್ಲಿ ಸಫಲರಾಗಲು ತಾವು ಬಿಡುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಉಗ್ರರಿಗೆ ನೀಡಿದರು.<br /> <br /> ಇದೇ ವೇಳೆ ಅವರು ಉಗ್ರರೊಂದಿಗೆ ಕಾದಾಡಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸಿದರು.<br /> <br /> ಇದೇ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಭೂಕಂಪದಿಂದ ಸಂತ್ರಸ್ತರಾದವರ ಪುನರ್ವಸತಿಗಾಗಿ 600 ಕೋಟಿ ರೂಗಳ ವಿಶೇಷ ಪ್ಯಾಕೇಜ್ನ್ನು ನೀಡಬೇಕೆಂದು ಪ್ರಧಾನಿ ಅವರಲ್ಲಿ ಮನವಿ ಮಾಡಿದರು.<br /> <br /> ಇದೇ ಸಮಯದಲ್ಲಿ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನವು ಭಾರತದ ಗಡಿಯತ್ತ ಗುಂಡಿನ ದಾಳಿ ನಡೆಸಿದೆ. ಜೂನ್ ತಿಂಗಳಲ್ಲಿ ಪಾಕಿಸ್ತಾನ ಶಾಂತಿಯನ್ನು ಉಲ್ಲಂಘಿಸಿದ ನಾಲ್ಕನೆ ಪ್ರಕರಣ ಇದು.<br /> <br /> 1991ರಲ್ಲಿ ಕಣಿವೆ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಕುನಾನ್-ಫೋಸ್ಪೋರಾ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಸಂಘಟನೆಯೊಂದು ಪ್ರಧಾನಿ ಅವರಲ್ಲಿ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಿಬೇಕೆಂದು ಮನವಿ ಮಾಡಿದೆ.<br /> <br /> ಈ ಮಧ್ಯೆ ಪ್ರತ್ಯೇಕತಾವಾದಿಗಳು ಪ್ರಧಾನಿ ಅವರ ಭೇಟಿಯನ್ನು ವಿರೋಧಿಸಿ ಕರೆ ನೀಡಿದ್ದ ಪ್ರತಿಭಟನೆಯಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಮಂಗಳವಾರ ಅಸ್ತವ್ಯಸ್ತಗೊಂಡಿತು.<br /> <br /> ಹುರಿಯತ್ ಕಾನ್ಫರೇನ್ಸ್ ಹಾಗೂ ಜೆಕೆಎಲ್ಎಫ್ ಸಂಘಟನೆಗಳು ನೀಡಿದ್ದ ಸಾರ್ವತ್ರಿಕ ಮುಷ್ಕರದ ಪರಿಣಾಮ ಅಂಗಡಿ-ಮುಂಗಟ್ಟುಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಶಾಲಾಕಾಲೇಜುಗಳು ಬಾಗಿಲು ಮುಚ್ಚಿದ್ದವು. ಪ್ರಧಾನಿ ಅವರ ಭೇಟಿಯ ಹಿನ್ನೆಲೆಯಲ್ಲಿ ಕಲ್ಪಿಸಲಾಗಿದ್ದ ಭಾರಿ ಭದ್ರತೆಯಿಂದಾಗಿ ರಸ್ತೆಯೆಲ್ಲೆಲ್ಲಾ ಬರೇ ಭದ್ರತಾ ಸಿಬ್ಬಂದಿ ಕಾಣ ಬರುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>