<p><strong>ಯಲಹಂಕ:</strong> ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಅಗಾಧವಾದ ಶಕ್ತಿಯನ್ನು ಬಳಸಿಕೊಂಡು ಶೈಕ್ಷಣಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಪ್ರಭುತ್ವವನ್ನು ಸಾಧಿಸಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಅನಂತಪುರದ ನಾಗಾರ್ಜುನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ `ಅನಾವರಣ~ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಠದ ಜೊತೆಗೆ ಸಾಂಸ್ಕೃತಿಕ ಕೌಶಲ್ಯ ವೃದ್ಧಿಯನ್ನು ಬೆಳೆಸಿಕೊಳ್ಳಬೇಕು ಎಂದರು.<br /> <br /> `ಕಲಾವಿದರು ಮತ್ತು ಸಂಗೀತಗಾರರು ಈ ಸಮಾಜಕ್ಕೆ ಅತ್ಯವಶ್ಯಕವಾಗಿ ಬೇಕೇ ಬೇಕು~ ಎಂದು ಪ್ರತಿಪಾದಿಸಿದ ಅವರು, `ಸಂಗೀತ, ನೃತ್ಯ, ನಾಟಕ ಹಾಗೂ ತಂತ್ರಜ್ಞಾನದಲ್ಲಿ ಪರಿಣತಿ ಪಡೆದವರಿಗೆ ಅನೇಕ ಅವಕಾಶಗಳಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ತಿಳಿಸಿದರು.<br /> <br /> ಬೆಂಗಳೂರು ಉತ್ತರ ವಲಯ ಉಪ ಪೊಲೀಸ್ ಆಯುಕ್ತ ಎಚ್.ಎಸ್. ರೇವಣ್ಣ, ಪೋಷಕರು ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ ಅವರಿಗೆ ಆಸಕ್ತಿಯಿರುವ ವಿಷಯಗಳ ಅಯ್ಕೆ ಮತ್ತು ಅಧ್ಯಯನಕ್ಕೆ ಸಹಕಾರ ನೀಡಬೇಕು ಎಂದರು.<br /> <br /> ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಾಗಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಿ. ಶೇಖರರಾಜು ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಅಗಾಧವಾದ ಶಕ್ತಿಯನ್ನು ಬಳಸಿಕೊಂಡು ಶೈಕ್ಷಣಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಪ್ರಭುತ್ವವನ್ನು ಸಾಧಿಸಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಅನಂತಪುರದ ನಾಗಾರ್ಜುನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ `ಅನಾವರಣ~ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಠದ ಜೊತೆಗೆ ಸಾಂಸ್ಕೃತಿಕ ಕೌಶಲ್ಯ ವೃದ್ಧಿಯನ್ನು ಬೆಳೆಸಿಕೊಳ್ಳಬೇಕು ಎಂದರು.<br /> <br /> `ಕಲಾವಿದರು ಮತ್ತು ಸಂಗೀತಗಾರರು ಈ ಸಮಾಜಕ್ಕೆ ಅತ್ಯವಶ್ಯಕವಾಗಿ ಬೇಕೇ ಬೇಕು~ ಎಂದು ಪ್ರತಿಪಾದಿಸಿದ ಅವರು, `ಸಂಗೀತ, ನೃತ್ಯ, ನಾಟಕ ಹಾಗೂ ತಂತ್ರಜ್ಞಾನದಲ್ಲಿ ಪರಿಣತಿ ಪಡೆದವರಿಗೆ ಅನೇಕ ಅವಕಾಶಗಳಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ತಿಳಿಸಿದರು.<br /> <br /> ಬೆಂಗಳೂರು ಉತ್ತರ ವಲಯ ಉಪ ಪೊಲೀಸ್ ಆಯುಕ್ತ ಎಚ್.ಎಸ್. ರೇವಣ್ಣ, ಪೋಷಕರು ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ ಅವರಿಗೆ ಆಸಕ್ತಿಯಿರುವ ವಿಷಯಗಳ ಅಯ್ಕೆ ಮತ್ತು ಅಧ್ಯಯನಕ್ಕೆ ಸಹಕಾರ ನೀಡಬೇಕು ಎಂದರು.<br /> <br /> ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಾಗಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಿ. ಶೇಖರರಾಜು ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>