<p>ಬೆಂಗಳೂರು: ಬಸ್ ಪ್ರಯಾಣದರ ಏರಿಸಿರುವುದು ಜನವಿರೋಧಿ ನೀತಿಯಾಗಿದ್ದು, ಕೂಡಲೇ ದರ ಇಳಿಸಬೇಕು. ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.<br /> <br /> ಬಿಪಿಎಲ್ ಕುಟುಂಬಗಳಿಗೆ 1 ರೂಪಾಯಿಗೆ ಕೆ.ಜಿ. ಅಕ್ಕಿ ನೀಡುವುದಾಗಿ ಪ್ರಕಟಿಸಿರುವ ಸರ್ಕಾರ, ಬಸ್ ಪ್ರಯಾಣ ದರ ಏರಿಸುವ ಮೂಲಕ ಬಡವರಿಗೆ ದೊಡ್ಡ ಪೆಟ್ಟು ನೀಡಿದೆ. ಬಿಪಿಎಲ್ ಕುಟುಂಬದವರು ಬಸ್ನಲ್ಲಿ ಓಡಾಡುವುದೇ ಕಷ್ಟವಾಗಲಿದೆ. ವಾಸ್ತವ ಸ್ಥಿತಿ ಅರ್ಥ ಮಾಡಿಕೊಂಡು ಪ್ರಯಾಣದರ ಇಳಿಸಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.<br /> <br /> ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಡೀಸೆಲ್, ಪೆಟ್ರೋಲ್ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಬಜೆಟ್ನಲ್ಲಿ ತೆರಿಗೆ ಕಡಿತ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.<br /> ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮತ್ತಷ್ಟು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸೂಕ್ತವಲ್ಲ. ಮದ್ಯದ ಅಂಗಡಿ ನಡೆಸಲು ಪದವಿ ಬೇಕಾಗಿಲ್ಲ. ಪದವೀಧರರನ್ನು ಆ ಹಂತಕ್ಕೆ ತೆಗೆದುಕೊಂಡು ಹೋಗುವುದು ಸರಿಯಲ್ಲ. ಮುಖ್ಯಮಂತ್ರಿ ಆದ ಕೂಡಲೇ ಸಿದ್ದರಾಮಯ್ಯ ಅವರ ಕಣ್ಣು ಅಗ್ಗದ ಮದ್ಯ, ಸಾರಾಯಿ ಕಡೆಯತ್ತ ಹೋಗುತ್ತಿದೆ ಎಂದು ವ್ಯಂಗ್ಯವಾಡಿದರು.<br /> <br /> ಮರಳು ಸಾಗಿಸುವ ಲಾರಿಗಳನ್ನು ತಡೆದು ಕಿರುಕುಳ ನೀಡುವ ಬದಲು, ಮರಳು ನೀತಿ ಜಾರಿಗೆ ತರುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು. ಜನಪ್ರತಿನಿಧಿಗಳ ಸ್ನೇಹಿತರು, ಕುಟುಂಬ ವರ್ಗದವರು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ಅಕ್ರಮಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.<br /> <br /> <strong>ಕಠಿಣ ಕ್ರಮಕೈಗೊಳ್ಳಿ:</strong> ಮಣಿಪಾಲ್ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿದ ಅವರು, ದೆಹಲಿಯಲ್ಲಿ ನಡೆದಂತಹ ದುಷ್ಕೃತ್ಯಗಳು ರಾಜ್ಯಕ್ಕೆ ಕಾಲಿಡುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡುವ ಉನ್ನತಾಧಿಕಾರ ಸಮಿತಿ ಸಭೆಯನ್ನು ಕೊನೆಗಳಿಗೆಯಲ್ಲಿ ರದ್ದುಪಡಿಸಿ ಉದ್ಯಮಿಗಳಿಗೆ ಅಗೌರವ ತೋರಿಸಿರುವುದು ಸರಿಯಲ್ಲ. ಇದರಿಂದಾಗಿ ಅವರಲ್ಲಿ ರಾಜ್ಯದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಅನುಮತಿ ನೀಡುವುದು, ಬಿಡುವುದು ಬೇರೆ ಪ್ರಶ್ನೆ. ಸೌಜನ್ಯಕ್ಕಾದರೂ ಅವರೊಂದಿಗೆ ಮಾತನಾಡಬೇಕಾಗಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಸ್ ಪ್ರಯಾಣದರ ಏರಿಸಿರುವುದು ಜನವಿರೋಧಿ ನೀತಿಯಾಗಿದ್ದು, ಕೂಡಲೇ ದರ ಇಳಿಸಬೇಕು. ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.<br /> <br /> ಬಿಪಿಎಲ್ ಕುಟುಂಬಗಳಿಗೆ 1 ರೂಪಾಯಿಗೆ ಕೆ.ಜಿ. ಅಕ್ಕಿ ನೀಡುವುದಾಗಿ ಪ್ರಕಟಿಸಿರುವ ಸರ್ಕಾರ, ಬಸ್ ಪ್ರಯಾಣ ದರ ಏರಿಸುವ ಮೂಲಕ ಬಡವರಿಗೆ ದೊಡ್ಡ ಪೆಟ್ಟು ನೀಡಿದೆ. ಬಿಪಿಎಲ್ ಕುಟುಂಬದವರು ಬಸ್ನಲ್ಲಿ ಓಡಾಡುವುದೇ ಕಷ್ಟವಾಗಲಿದೆ. ವಾಸ್ತವ ಸ್ಥಿತಿ ಅರ್ಥ ಮಾಡಿಕೊಂಡು ಪ್ರಯಾಣದರ ಇಳಿಸಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.<br /> <br /> ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಡೀಸೆಲ್, ಪೆಟ್ರೋಲ್ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಬಜೆಟ್ನಲ್ಲಿ ತೆರಿಗೆ ಕಡಿತ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.<br /> ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮತ್ತಷ್ಟು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸೂಕ್ತವಲ್ಲ. ಮದ್ಯದ ಅಂಗಡಿ ನಡೆಸಲು ಪದವಿ ಬೇಕಾಗಿಲ್ಲ. ಪದವೀಧರರನ್ನು ಆ ಹಂತಕ್ಕೆ ತೆಗೆದುಕೊಂಡು ಹೋಗುವುದು ಸರಿಯಲ್ಲ. ಮುಖ್ಯಮಂತ್ರಿ ಆದ ಕೂಡಲೇ ಸಿದ್ದರಾಮಯ್ಯ ಅವರ ಕಣ್ಣು ಅಗ್ಗದ ಮದ್ಯ, ಸಾರಾಯಿ ಕಡೆಯತ್ತ ಹೋಗುತ್ತಿದೆ ಎಂದು ವ್ಯಂಗ್ಯವಾಡಿದರು.<br /> <br /> ಮರಳು ಸಾಗಿಸುವ ಲಾರಿಗಳನ್ನು ತಡೆದು ಕಿರುಕುಳ ನೀಡುವ ಬದಲು, ಮರಳು ನೀತಿ ಜಾರಿಗೆ ತರುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು. ಜನಪ್ರತಿನಿಧಿಗಳ ಸ್ನೇಹಿತರು, ಕುಟುಂಬ ವರ್ಗದವರು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ಅಕ್ರಮಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.<br /> <br /> <strong>ಕಠಿಣ ಕ್ರಮಕೈಗೊಳ್ಳಿ:</strong> ಮಣಿಪಾಲ್ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿದ ಅವರು, ದೆಹಲಿಯಲ್ಲಿ ನಡೆದಂತಹ ದುಷ್ಕೃತ್ಯಗಳು ರಾಜ್ಯಕ್ಕೆ ಕಾಲಿಡುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.<br /> <br /> ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡುವ ಉನ್ನತಾಧಿಕಾರ ಸಮಿತಿ ಸಭೆಯನ್ನು ಕೊನೆಗಳಿಗೆಯಲ್ಲಿ ರದ್ದುಪಡಿಸಿ ಉದ್ಯಮಿಗಳಿಗೆ ಅಗೌರವ ತೋರಿಸಿರುವುದು ಸರಿಯಲ್ಲ. ಇದರಿಂದಾಗಿ ಅವರಲ್ಲಿ ರಾಜ್ಯದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಅನುಮತಿ ನೀಡುವುದು, ಬಿಡುವುದು ಬೇರೆ ಪ್ರಶ್ನೆ. ಸೌಜನ್ಯಕ್ಕಾದರೂ ಅವರೊಂದಿಗೆ ಮಾತನಾಡಬೇಕಾಗಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>