<p><strong>ಬೆಂಗಳೂರು:</strong> ‘ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಖಾಸಗಿ ಸಂಸ್ಥೆಗಳು ಈ ಕ್ಷೇತ್ರದಲ್ಲಿ ಹೂಡಿಕೆಗೆ ಮುಂದಾದರೆ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ. ವಿಶ್ವನಾಥ ರೆಡ್ಡಿ ತಿಳಿಸಿದರು. <br /> <br /> ಅಗ್ರಿಗೋಲ್ಡ್ ಇನ್ಫ್ರಾ ಡೆವಲಪರ್ಸ್ ಸಂಸ್ಥೆ ವತಿಯಿಂದ ನಗರದಲ್ಲಿ ಏರ್ಪಡಿಸಲಾಗಿದ್ದ ಸಂಸ್ಥೆಯ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಮಧ್ಯಮ ವರ್ಗದ ಜನರ ಕನಸನ್ನು ಸಾಕಾರಗೊಳಿಸುವಂತಹ ಯೋಜನೆಗಳನ್ನು ಹಾಕಿಕೊಂಡಿರುವ ಖಾಸಗಿ ಸಂಸ್ಥೆಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದಾಗಬೇಕು. ಇದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ’ ಎಂದು ಅವರು ಹೇಳಿದರು. <br /> <br /> ಅಗ್ರಿ ಗೋಲ್ಡ್ ಗ್ರೂಪ್ನ ಅಧ್ಯಕ್ಷ ವಿ.ಆರ್.ರಾವ್ ಅವ್ವಾಸ್ ಮಾತನಾಡಿ, ‘ಈಗಾಗಲೇ ಪಾವಗಡ, ಕೋಲಾರ, ಮಾಲೂರು, ವಿಜಾಪುರ, ಬಾಗಲೂರು, ಹೊಸೂರುಗಳಲ್ಲಿ ಟೌನ್ಶಿಪ್ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಖಾಸಗಿ ಸಂಸ್ಥೆಗಳು ಈ ಕ್ಷೇತ್ರದಲ್ಲಿ ಹೂಡಿಕೆಗೆ ಮುಂದಾದರೆ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ. ವಿಶ್ವನಾಥ ರೆಡ್ಡಿ ತಿಳಿಸಿದರು. <br /> <br /> ಅಗ್ರಿಗೋಲ್ಡ್ ಇನ್ಫ್ರಾ ಡೆವಲಪರ್ಸ್ ಸಂಸ್ಥೆ ವತಿಯಿಂದ ನಗರದಲ್ಲಿ ಏರ್ಪಡಿಸಲಾಗಿದ್ದ ಸಂಸ್ಥೆಯ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಮಧ್ಯಮ ವರ್ಗದ ಜನರ ಕನಸನ್ನು ಸಾಕಾರಗೊಳಿಸುವಂತಹ ಯೋಜನೆಗಳನ್ನು ಹಾಕಿಕೊಂಡಿರುವ ಖಾಸಗಿ ಸಂಸ್ಥೆಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದಾಗಬೇಕು. ಇದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ’ ಎಂದು ಅವರು ಹೇಳಿದರು. <br /> <br /> ಅಗ್ರಿ ಗೋಲ್ಡ್ ಗ್ರೂಪ್ನ ಅಧ್ಯಕ್ಷ ವಿ.ಆರ್.ರಾವ್ ಅವ್ವಾಸ್ ಮಾತನಾಡಿ, ‘ಈಗಾಗಲೇ ಪಾವಗಡ, ಕೋಲಾರ, ಮಾಲೂರು, ವಿಜಾಪುರ, ಬಾಗಲೂರು, ಹೊಸೂರುಗಳಲ್ಲಿ ಟೌನ್ಶಿಪ್ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>