<p>ನವದೆಹಲಿ (ಐಎಎನ್ಎಸ್): ತಮ್ಮ ಒಂದು ತಿಂಗಳ ವೇತನ 1.5 ಲಕ್ಷ ರೂಪಾಯಿಗಳನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಉತ್ತರಾಖಂಡದ ಪ್ರವಾಹ ಸಂತ್ರಸ್ಥರಿಗೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಭಾನುವಾರ ತಿಳಿಸಿದೆ.<br /> <br /> 'ಅವರು ತಮ್ಮ ಒಂದು ತಿಂಗಳ ವೇತನ 1.5 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುತ್ತಿದ್ದಾರೆ' ಎಂದು ರಾಷ್ಟ್ರಪತಿಯವರ ಪತ್ರಿಕಾ ಕಾರ್ಯದರ್ಶಿ ವೇಣು ರಾಜಮೊನಿ ಹೇಳಿದರು.<br /> <br /> ಚರಧಾಮ ಯಾತ್ರೆಯ ಸಂದರ್ಭದಲ್ಲಿ ಜೂನ್ 15ರ ವಾರಾಂತ್ಯದಲ್ಲಿ ಸಂಭವಿಸಿದ ಮೇಘಸ್ಫೋಟ - ಭಾರಿ ಮಳೆ ಹಾಗೂ ಭೂಕುಸಿತಗಳಿಂದ ಉತ್ತರಾಖಂಡದಲ್ಲಿ ತೀವ್ರ ಹಾನಿ ಸಂಭವಿಸಿದೆ.<br /> <br /> ಸರ್ಕಾರದ ಪ್ರಕಾರ 557 ಶವಗಳು ಪತ್ತೆಯಾಗಿದ್ದು, ಸುಮಾರು 20,000 ಮಂದಿಯನ್ನು ಇನ್ನೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಸಹಸ್ರ ಸಂಖ್ಯೆಯಲ್ಲಿ ಅಲ್ಲದಿದ್ದರೂ ನೂರರ ಸಂಖ್ಯೆಯಲ್ಲಿ ಹೆಚ್ಚುವ ಸಂಭವ ಇದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ತಮ್ಮ ಒಂದು ತಿಂಗಳ ವೇತನ 1.5 ಲಕ್ಷ ರೂಪಾಯಿಗಳನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಉತ್ತರಾಖಂಡದ ಪ್ರವಾಹ ಸಂತ್ರಸ್ಥರಿಗೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಭಾನುವಾರ ತಿಳಿಸಿದೆ.<br /> <br /> 'ಅವರು ತಮ್ಮ ಒಂದು ತಿಂಗಳ ವೇತನ 1.5 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುತ್ತಿದ್ದಾರೆ' ಎಂದು ರಾಷ್ಟ್ರಪತಿಯವರ ಪತ್ರಿಕಾ ಕಾರ್ಯದರ್ಶಿ ವೇಣು ರಾಜಮೊನಿ ಹೇಳಿದರು.<br /> <br /> ಚರಧಾಮ ಯಾತ್ರೆಯ ಸಂದರ್ಭದಲ್ಲಿ ಜೂನ್ 15ರ ವಾರಾಂತ್ಯದಲ್ಲಿ ಸಂಭವಿಸಿದ ಮೇಘಸ್ಫೋಟ - ಭಾರಿ ಮಳೆ ಹಾಗೂ ಭೂಕುಸಿತಗಳಿಂದ ಉತ್ತರಾಖಂಡದಲ್ಲಿ ತೀವ್ರ ಹಾನಿ ಸಂಭವಿಸಿದೆ.<br /> <br /> ಸರ್ಕಾರದ ಪ್ರಕಾರ 557 ಶವಗಳು ಪತ್ತೆಯಾಗಿದ್ದು, ಸುಮಾರು 20,000 ಮಂದಿಯನ್ನು ಇನ್ನೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಸಹಸ್ರ ಸಂಖ್ಯೆಯಲ್ಲಿ ಅಲ್ಲದಿದ್ದರೂ ನೂರರ ಸಂಖ್ಯೆಯಲ್ಲಿ ಹೆಚ್ಚುವ ಸಂಭವ ಇದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>