<p><strong>ಡೆಹ್ರಾಡೂನ್(ಪಿಟಿಐ):</strong> `ಹಿಮಾಲಯದ ಸುನಾಮಿ' ಎಂದೇ ಬಣ್ಣಿಸಲಾದ ಉತ್ತರಾಖಂಡದ ಮಹಾಮಳೆಗೆ ಸಾವಿರಕ್ಕೂ ಹೆಚ್ಚು ಜನ ಕೊಚ್ಚಿಹೋಗಿದ್ದು, ರಕ್ಷಣಾ ಕಾರ್ಯಚರಣೆ ಚುರುಕಿನಿಂದ ನಡೆದಿದೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಹರಿದ್ವಾರದಲ್ಲಿ 40 ಜನರ ಶವ ಪತ್ತೆಯಾಗಿವೆ.<br /> <br /> 40 ಜನರ ಶವ ಪತ್ತೆಯಾದ ಹಾಗೂ ಇತರ ಕಡೆ ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸತ್ತವರ ಸಂಖ್ಯೆ 207ಕ್ಕೆ ಏರಿದೆ ಎಂದು ಗೃಹ ಸಚಿವ ಸುಶಿಲ್ ಕುಮಾರ್ ಸಿಂಧೆ ಹೇಳಿದ್ದಾರೆ.<br /> <br /> ಕೇದಾರನಾಥ, ಬದರಿನಾಥ ಪ್ರದೇಶದಲ್ಲಿ ಪ್ರವಾಹ ಸಂಕಷ್ಟದಲ್ಲಿ ಸಿಲುಕಿರುವ 250 ಜನರ ಸಂರಕ್ಷಣೆ ಮಾಡಿದ ಹೊರತಾಗಿಯೂ, ಇನ್ನೂ ಅಲ್ಲಲ್ಲಿ ಉಳಿದಿರುವ 9 ಸಾವಿರ ಜನರ ಸಂರಕ್ಷಣೆಗೆ 40 ಹೆಲಿಕಾಪ್ಟರ್ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಮಹಾಮಳೆಯ `ದುರ್ಘಟನೆ ಅಸಹನೀಯ'ವಾಗಿದೆ ಎಂದು ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ರಾಕೇಶ್ ಶರ್ಮ ಹೇಳಿದ್ದಾರೆ. <br /> <br /> <strong>ಮುಖ್ಯಮಂತ್ರಿ ಭೇಟಿ</strong><br /> <strong>ಶಿಮ್ಲಾ(ಪಿಟಿಐ): </strong>ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮಳೆಯಿಂದ ಭೂ ಕುಸಿತ ಉಂಟಾದ ಪ್ರದೇಶಗಳಿಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ.<br /> <br /> ಈ ವೇಳೆ ಪುನರ್ವಸತಿ ಕಲ್ಪಿಸುವ ಕುರಿತು ಚರ್ಚೆ ನಡೆಸಿದ್ದಾರೆ.<br /> <br /> <strong>ಸಂಪರ್ಕ ಕಡಿತ: ವಿದ್ಯುತ್, ಕುಡಿಯುವ ನೀರೂ ಇಲ್ಲ<br /> ಶಿಮ್ಲಾ(ಐಎಎನ್ಎಸ್):</strong><br /> ಹಿಮಾಚಲ ಪ್ರದೇಶದ ಕಿನ್ನೂರು ಜಿಲ್ಲೆ ಮಳೆಯಿಂದ ಉಂಟಾದ ಹಾನಿಗೆ ಎಲ್ಲ ಬಗೆಯ ಸಂಪರ್ಕ ಕಡಿದುಕೊಂಡಿದೆ. ಹೀಗಾಗಿ, ಇಲ್ಲಿನ ಜನ ಜೀವನ ಅಯೋಮಯವಾಗಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ. <br /> <br /> ಇಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ಮೊಬೈಲ್ಗಳಿಗೆ ರೀಚಾರ್ಜ್ ಮಾಡಲು ಜನರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಜನರನ್ನು ಸಂಪರ್ಕಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರೂ ಸಹ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.<br /> <br /> <strong>ದೆಹಲಿ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ<br /> ನವದೆಹಲಿ(ಐಎಎನ್ಎಸ್):</strong> ನವದೆಹಲಿ ನಗರ ವ್ಯಾಪ್ತಿಯಲ್ಲಿ ಹರಿಯುವ ಯಮುನಾ ನದಿ ಅಪಾಯ ಮಟ್ಟ(204.83 ಮೀ)ಕ್ಕಿಂತ ಕಡಿಮೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸರ್ಕಾರ ಸೂಚನೆ ನೀಡಿದೆ.<br /> <br /> ಅಪಾಯ ಮಟ್ಟ 204.83 ಮೀ. ಇದ್ದು, ಪ್ರಸ್ತುತ ನದಿಯಲ್ಲಿ 204.63 ಮೀ. ನೀರಿನ ಹರಿವು ಇದೆ. ಬುಧವಾರ 207.25 ಮೀ. ಹರಿವು ಇದ್ದ ನದಿಯ ಹರಿವು ತಗ್ಗಿದೆ. 1978ರಲ್ಲಿ ನದಿಯ ನೀರಿನ ಮಟ್ಟ 207.49 ಮೀ. ಅಪಾಯಮಟ್ಟ ತಲುಪಿತ್ತು. <br /> <br /> <strong>ಬಿಜೆಪಿ ಮುಖಂಡರ ಸಾವು<br /> ಇಂದೋರ್(ಪಿಟಿಐ):</strong><br /> ಉತ್ತರಾಖಂಡದಲ್ಲಿ ಉಂಟಾದ ಪ್ರವಾದಲ್ಲಿ ಇಂದೋರ್ನ ಮೂವರು ಬಿಜೆಪಿ ಮುಖಂಡರು ಸಾವಿಗೀಡಾಗಿದ್ದಾರೆ.</p>.<p><strong>ಪರಿಹಾರಕ್ಕೆ ಸಂಸದರ ವೇತನ, ಅನುದಾನ ಕೊಡುಗೆ: ಸೋನಿಯಾ<br /> ನವದೆಹಲಿ(ಪಿಟಿಐ):</strong> ಪ್ರವಾಹದಿಂದ ಸಂತ್ರಸ್ತರಾದವರಿಗೆ ಕಾಂಗ್ರೆಸ್ನ ರಾಜ್ಯಸಭಾ ಮತ್ತು ಸಂಸತ್ನ ಸದಸ್ಯರ ಒಂದು ತಿಂಗಳ ವೇತನ ಮತ್ತು ಅವರ ಅನುದಾನದಲ್ಲಿ ರೂ 10 ಲಕ್ಷವನ್ನು ನೀಡಲಾಗುವುದು ಎಂದು ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂದಿ ಹೇಳಿದ್ದಾರೆ.<br /> <br /> ರಾಷ್ಟ್ರದಲ್ಲಿ ಕಾಂಗ್ರೆಸ್ನ 203 ಸಂಸತ್ ಸದಸ್ಯರು, 72 ರಾಜ್ಯಸಭಾ ಸದಸ್ಯರು ಇದ್ದಾರೆ.<br /> <br /> <strong>ವಿಎಚ್ ಪಿ ನೆರವು<br /> ಡೆಹ್ರಾಡೂನ್(ಪಿಟಿಐ):</strong> ಮಹಾಮಳೆಯಿಂದ ಹಾನಿಗೊಳಗಾದ ಪ್ರದೇಶದ ಜನರ ಬದುಕನ್ನು ಪುನರ್ ನಿರ್ಮಿಸಲು ನಿಧಿ ಸಂಗ್ರಹಿಸುವ ಮೂಲಕ ನೆರವು ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ನ ಅಂತರ ರಾಷ್ಟ್ರೀಯ ಕಾರ್ಯಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್(ಪಿಟಿಐ):</strong> `ಹಿಮಾಲಯದ ಸುನಾಮಿ' ಎಂದೇ ಬಣ್ಣಿಸಲಾದ ಉತ್ತರಾಖಂಡದ ಮಹಾಮಳೆಗೆ ಸಾವಿರಕ್ಕೂ ಹೆಚ್ಚು ಜನ ಕೊಚ್ಚಿಹೋಗಿದ್ದು, ರಕ್ಷಣಾ ಕಾರ್ಯಚರಣೆ ಚುರುಕಿನಿಂದ ನಡೆದಿದೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಹರಿದ್ವಾರದಲ್ಲಿ 40 ಜನರ ಶವ ಪತ್ತೆಯಾಗಿವೆ.<br /> <br /> 40 ಜನರ ಶವ ಪತ್ತೆಯಾದ ಹಾಗೂ ಇತರ ಕಡೆ ಶವಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸತ್ತವರ ಸಂಖ್ಯೆ 207ಕ್ಕೆ ಏರಿದೆ ಎಂದು ಗೃಹ ಸಚಿವ ಸುಶಿಲ್ ಕುಮಾರ್ ಸಿಂಧೆ ಹೇಳಿದ್ದಾರೆ.<br /> <br /> ಕೇದಾರನಾಥ, ಬದರಿನಾಥ ಪ್ರದೇಶದಲ್ಲಿ ಪ್ರವಾಹ ಸಂಕಷ್ಟದಲ್ಲಿ ಸಿಲುಕಿರುವ 250 ಜನರ ಸಂರಕ್ಷಣೆ ಮಾಡಿದ ಹೊರತಾಗಿಯೂ, ಇನ್ನೂ ಅಲ್ಲಲ್ಲಿ ಉಳಿದಿರುವ 9 ಸಾವಿರ ಜನರ ಸಂರಕ್ಷಣೆಗೆ 40 ಹೆಲಿಕಾಪ್ಟರ್ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಮಹಾಮಳೆಯ `ದುರ್ಘಟನೆ ಅಸಹನೀಯ'ವಾಗಿದೆ ಎಂದು ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ರಾಕೇಶ್ ಶರ್ಮ ಹೇಳಿದ್ದಾರೆ. <br /> <br /> <strong>ಮುಖ್ಯಮಂತ್ರಿ ಭೇಟಿ</strong><br /> <strong>ಶಿಮ್ಲಾ(ಪಿಟಿಐ): </strong>ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮಳೆಯಿಂದ ಭೂ ಕುಸಿತ ಉಂಟಾದ ಪ್ರದೇಶಗಳಿಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ.<br /> <br /> ಈ ವೇಳೆ ಪುನರ್ವಸತಿ ಕಲ್ಪಿಸುವ ಕುರಿತು ಚರ್ಚೆ ನಡೆಸಿದ್ದಾರೆ.<br /> <br /> <strong>ಸಂಪರ್ಕ ಕಡಿತ: ವಿದ್ಯುತ್, ಕುಡಿಯುವ ನೀರೂ ಇಲ್ಲ<br /> ಶಿಮ್ಲಾ(ಐಎಎನ್ಎಸ್):</strong><br /> ಹಿಮಾಚಲ ಪ್ರದೇಶದ ಕಿನ್ನೂರು ಜಿಲ್ಲೆ ಮಳೆಯಿಂದ ಉಂಟಾದ ಹಾನಿಗೆ ಎಲ್ಲ ಬಗೆಯ ಸಂಪರ್ಕ ಕಡಿದುಕೊಂಡಿದೆ. ಹೀಗಾಗಿ, ಇಲ್ಲಿನ ಜನ ಜೀವನ ಅಯೋಮಯವಾಗಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ. <br /> <br /> ಇಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ಮೊಬೈಲ್ಗಳಿಗೆ ರೀಚಾರ್ಜ್ ಮಾಡಲು ಜನರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಜನರನ್ನು ಸಂಪರ್ಕಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರೂ ಸಹ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.<br /> <br /> <strong>ದೆಹಲಿ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ<br /> ನವದೆಹಲಿ(ಐಎಎನ್ಎಸ್):</strong> ನವದೆಹಲಿ ನಗರ ವ್ಯಾಪ್ತಿಯಲ್ಲಿ ಹರಿಯುವ ಯಮುನಾ ನದಿ ಅಪಾಯ ಮಟ್ಟ(204.83 ಮೀ)ಕ್ಕಿಂತ ಕಡಿಮೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸರ್ಕಾರ ಸೂಚನೆ ನೀಡಿದೆ.<br /> <br /> ಅಪಾಯ ಮಟ್ಟ 204.83 ಮೀ. ಇದ್ದು, ಪ್ರಸ್ತುತ ನದಿಯಲ್ಲಿ 204.63 ಮೀ. ನೀರಿನ ಹರಿವು ಇದೆ. ಬುಧವಾರ 207.25 ಮೀ. ಹರಿವು ಇದ್ದ ನದಿಯ ಹರಿವು ತಗ್ಗಿದೆ. 1978ರಲ್ಲಿ ನದಿಯ ನೀರಿನ ಮಟ್ಟ 207.49 ಮೀ. ಅಪಾಯಮಟ್ಟ ತಲುಪಿತ್ತು. <br /> <br /> <strong>ಬಿಜೆಪಿ ಮುಖಂಡರ ಸಾವು<br /> ಇಂದೋರ್(ಪಿಟಿಐ):</strong><br /> ಉತ್ತರಾಖಂಡದಲ್ಲಿ ಉಂಟಾದ ಪ್ರವಾದಲ್ಲಿ ಇಂದೋರ್ನ ಮೂವರು ಬಿಜೆಪಿ ಮುಖಂಡರು ಸಾವಿಗೀಡಾಗಿದ್ದಾರೆ.</p>.<p><strong>ಪರಿಹಾರಕ್ಕೆ ಸಂಸದರ ವೇತನ, ಅನುದಾನ ಕೊಡುಗೆ: ಸೋನಿಯಾ<br /> ನವದೆಹಲಿ(ಪಿಟಿಐ):</strong> ಪ್ರವಾಹದಿಂದ ಸಂತ್ರಸ್ತರಾದವರಿಗೆ ಕಾಂಗ್ರೆಸ್ನ ರಾಜ್ಯಸಭಾ ಮತ್ತು ಸಂಸತ್ನ ಸದಸ್ಯರ ಒಂದು ತಿಂಗಳ ವೇತನ ಮತ್ತು ಅವರ ಅನುದಾನದಲ್ಲಿ ರೂ 10 ಲಕ್ಷವನ್ನು ನೀಡಲಾಗುವುದು ಎಂದು ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂದಿ ಹೇಳಿದ್ದಾರೆ.<br /> <br /> ರಾಷ್ಟ್ರದಲ್ಲಿ ಕಾಂಗ್ರೆಸ್ನ 203 ಸಂಸತ್ ಸದಸ್ಯರು, 72 ರಾಜ್ಯಸಭಾ ಸದಸ್ಯರು ಇದ್ದಾರೆ.<br /> <br /> <strong>ವಿಎಚ್ ಪಿ ನೆರವು<br /> ಡೆಹ್ರಾಡೂನ್(ಪಿಟಿಐ):</strong> ಮಹಾಮಳೆಯಿಂದ ಹಾನಿಗೊಳಗಾದ ಪ್ರದೇಶದ ಜನರ ಬದುಕನ್ನು ಪುನರ್ ನಿರ್ಮಿಸಲು ನಿಧಿ ಸಂಗ್ರಹಿಸುವ ಮೂಲಕ ನೆರವು ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ನ ಅಂತರ ರಾಷ್ಟ್ರೀಯ ಕಾರ್ಯಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>