<p><strong>ಕೋಲಾರ:</strong> ಪದವಿ ಪರೀಕ್ಷೆಗೆ ವಿತರಿಸುತ್ತಿರುವ ಪ್ರವೇಶ ಪತ್ರದಲ್ಲಿ ಸಾಕಷ್ಟು ತಪ್ಪುಗಳು ಬಂದಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು.<br /> <br /> ಅ.12 ರಿಂದ ಆರಂಭವಾಗುವ 1,3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗೆ ಸೋಮವಾರ ಪ್ರವೇಶ ಪತ್ರ ವಿತರಿಸಲಾಗಿದೆ. ಕೆಲವರ ಹೆಸರು ಅದಲು ಬದಲಾಗಿದೆ. ಭಾವಚಿತ್ರಗಳು ಸಹ ಬೇರೆಯಾಗಿವೆ. ಇನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆ ದಿನಾಂಕ ನಮೂದಿಸಿಲ್ಲವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇದೇ ವೇಳೆ ಪ್ರತಿಭಟನೆ ನಡೆಸಿದ ಯುವ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು, ನೂರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ವಿ.ವಿ. ಸಿಬ್ಬಂದಿ ಚೆಲ್ಲಾಟ ಆಡುತ್ತಿದ್ದಾರೆ ಎಂದು ದೂರಿದರು.</p>.<p>ಆನ್ಲೈನ್ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರ ನೋಂದಣಿಯಾಗುತ್ತಿದೆ. ಇಂತಹ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಬದ್ಧತೆ ತಿಳಿಯದೆ ಗುತ್ತಿಗೆ ನೀಡಿದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ ಎಂದು ದೂರಿದರು.<br /> <br /> ಇದೇ ವೇಳೆ ಮಾತನಾಡಿದ ಪ್ರಾಂಶುಪಾಲ ವೆಂಕಟರಾಮರೆಡ್ಡಿ, ಸಮಸ್ಯೆ ಕುರಿತು ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದಾಗ ಪ್ರತಿಭಟನೆ ಹಿಂಪಡೆ ಯಲಾಯಿತು. ಹೂವಳ್ಳಿ ನಾಗರಾಜ್, ಅಂಬರೀಷ್, ಪ್ರಜ್ವಲ್, ಬಸವ, ಪ್ರದೀಪ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಪದವಿ ಪರೀಕ್ಷೆಗೆ ವಿತರಿಸುತ್ತಿರುವ ಪ್ರವೇಶ ಪತ್ರದಲ್ಲಿ ಸಾಕಷ್ಟು ತಪ್ಪುಗಳು ಬಂದಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು.<br /> <br /> ಅ.12 ರಿಂದ ಆರಂಭವಾಗುವ 1,3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗೆ ಸೋಮವಾರ ಪ್ರವೇಶ ಪತ್ರ ವಿತರಿಸಲಾಗಿದೆ. ಕೆಲವರ ಹೆಸರು ಅದಲು ಬದಲಾಗಿದೆ. ಭಾವಚಿತ್ರಗಳು ಸಹ ಬೇರೆಯಾಗಿವೆ. ಇನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆ ದಿನಾಂಕ ನಮೂದಿಸಿಲ್ಲವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇದೇ ವೇಳೆ ಪ್ರತಿಭಟನೆ ನಡೆಸಿದ ಯುವ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು, ನೂರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ವಿ.ವಿ. ಸಿಬ್ಬಂದಿ ಚೆಲ್ಲಾಟ ಆಡುತ್ತಿದ್ದಾರೆ ಎಂದು ದೂರಿದರು.</p>.<p>ಆನ್ಲೈನ್ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರ ನೋಂದಣಿಯಾಗುತ್ತಿದೆ. ಇಂತಹ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಬದ್ಧತೆ ತಿಳಿಯದೆ ಗುತ್ತಿಗೆ ನೀಡಿದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ ಎಂದು ದೂರಿದರು.<br /> <br /> ಇದೇ ವೇಳೆ ಮಾತನಾಡಿದ ಪ್ರಾಂಶುಪಾಲ ವೆಂಕಟರಾಮರೆಡ್ಡಿ, ಸಮಸ್ಯೆ ಕುರಿತು ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದಾಗ ಪ್ರತಿಭಟನೆ ಹಿಂಪಡೆ ಯಲಾಯಿತು. ಹೂವಳ್ಳಿ ನಾಗರಾಜ್, ಅಂಬರೀಷ್, ಪ್ರಜ್ವಲ್, ಬಸವ, ಪ್ರದೀಪ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>