<p><span style="font-size: 26px;"><strong>ಕೊಪ್ಪಳ: </strong>ಬಿಎ 6ನೇ ಸೆಮಿಸ್ಟರ್ನ ಐಚ್ಛಿಕ ಶಿಕ್ಷಣ ಶಾಸ್ತ್ರದ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಗೊಳ್ಳುವ ಎರಡು ಗಂಟೆ ಮುಂಚೆ ಬಹಿರಂಗಗೊಂಡಿರುವ ಘಟನೆ ಭಾನುವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.</span><br /> <br /> `ಭಾರತದಲ್ಲಿ ಶಿಕ್ಷಣದ ಐತಿಹಾಸಿಕ ಅಭಿವೃದ್ಧಿ' ಎಂಬ ವಿಷಯದ 8ನೇ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದ್ದು, ಸದರಿ ವಿಷಯದ ಮರು ಪರೀಕ್ಷೆಯನ್ನು ಜೂ. 11ರಂದು ನಿಗದಿಗೊಳಿಸಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.<br /> <br /> ಘಟನೆ ವಿವರ: ಇಂದು ಬಿಎ 6ನೇ ಸೆಮಿಸ್ಟರ್ನ ಕೊನೆಯ ಪರೀಕ್ಷೆ ಇತ್ತು. ಆದರೆ, ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದರಿಂದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊಂದಲ ಸೃಷ್ಟಿಯಾಯಿತು.<br /> <br /> ಕೈ ಬರಹದಲ್ಲಿದ್ದ ಪ್ರಶ್ನೆಪತ್ರಿಕೆ ಮಾಧ್ಯಮ ಪ್ರತಿನಿಧಿಗಳಿಗೆ ಲಭ್ಯವಾಗಿತ್ತಲ್ಲದೇ, ಬಹಿರಂಗಗೊಂಡಿದ್ದ ಪ್ರಶ್ನೆಪತ್ರಿಕೆಯನ್ನು ಕಾಲೇಜಿನ ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ ಅವರಿಗೂ ಪ್ರದರ್ಶಿಸಲಾಯಿತು.<br /> <br /> ನಂತರ, ವಿಶ್ವವಿದ್ಯಾಲಯದಿಂದ ರವಾನೆಯಾಗಿದ್ದ ಪ್ರಶ್ನೆ ಪತ್ರಿಕೆ ಲಕೋಟೆಯನ್ನು ಪ್ರಾಚಾರ್ಯ ತಿಮ್ಮಾರೆಡ್ಡಿ ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿಯೇ ತೆರೆದರಲ್ಲದೇ, ಕೈ ಬರಹದಲ್ಲಿದ್ದ ಪ್ರಶ್ನೆ ಪತ್ರಿಕೆಯೊಂದಿಗೆ ತುಲನೆ ಸಹ ಮಾಡಿದರು.<br /> <br /> ವಿಶ್ವವಿದ್ಯಾಲಯದಿಂದ ಬಂದಿದ್ದ ಪ್ರಶ್ನೆ ಪತ್ರಿಕೆಯಲ್ಲಿದ್ದ ಶೇ 80ರಷ್ಟು ಪ್ರಶ್ನೆಗಳು ಕೈ ಬರಹದಲ್ಲಿದ್ದ ಬಹಿರಂಗಗೊಂಡಿದ್ದ ಪ್ರಶ್ನೆ ಪತ್ರಿಕೆಯಲ್ಲಿ ಇರುವುದು ಸಹ ಪ್ರಾಚಾರ್ಯರಿಗೆ ಮನದಟ್ಟಾಯಿತು.<br /> <br /> ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಿಮ್ಮಾರೆಡ್ಡಿ, ಸದರಿ ಪ್ರಶ್ನೆ ಪತ್ರಿಕೆ ನಮ್ಮ ಕಾಲೇಜಿನಲ್ಲಿ ಬಹಿರಂಗಗೊಂಡಿಲ್ಲ ಎಂದು ಹೇಳಿದರು.<br /> `ಜಿಲ್ಲಾ ಸಶಸ್ತ್ರ ಪಡೆ ಪೊಲೀಸರ ಕಾವಲು ಇರುವ ಕೊಠಡಿಯಲ್ಲಿ ಸದರಿ ಪ್ರಶ್ನೆ ಪತ್ರಿಕೆಗಳನ್ನು ಇರಿಸಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಕಾಲೇಜಿನಲ್ಲಿ ಬಹಿರಂಗಗೊಂಡಿಲ್ಲ' ಎಂದೂ ಹೇಳಿದರು.<br /> <br /> ಈ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತರಲಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗೊಂಡಿರುವ ಹಿನ್ನೆಲೆಯಲ್ಲಿ ಸದರಿ ವಿಷಯದ ಮರು ಪರೀಕ್ಷೆಯನ್ನು ಜೂ. 11ರಂದು ಬೆಳಿಗ್ಗೆ 9 ಗಂಟೆಗೆ ನಡೆಸುವಂತೆ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ರಂಗರಾಜ ವನದುರ್ಗ ಸೂಚನೆ ನೀಡಿದ್ದಾರೆ. ಈ ವಿಷಯವನ್ನು ಬಿಎ 6ನೇ ಸೆಮಿಸ್ಟರ್ನ 15 ಜನ ವಿದ್ಯಾರ್ಥಿಗಳ ಗಮನಕ್ಕೂ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಕೊಪ್ಪಳ: </strong>ಬಿಎ 6ನೇ ಸೆಮಿಸ್ಟರ್ನ ಐಚ್ಛಿಕ ಶಿಕ್ಷಣ ಶಾಸ್ತ್ರದ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಗೊಳ್ಳುವ ಎರಡು ಗಂಟೆ ಮುಂಚೆ ಬಹಿರಂಗಗೊಂಡಿರುವ ಘಟನೆ ಭಾನುವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.</span><br /> <br /> `ಭಾರತದಲ್ಲಿ ಶಿಕ್ಷಣದ ಐತಿಹಾಸಿಕ ಅಭಿವೃದ್ಧಿ' ಎಂಬ ವಿಷಯದ 8ನೇ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದ್ದು, ಸದರಿ ವಿಷಯದ ಮರು ಪರೀಕ್ಷೆಯನ್ನು ಜೂ. 11ರಂದು ನಿಗದಿಗೊಳಿಸಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.<br /> <br /> ಘಟನೆ ವಿವರ: ಇಂದು ಬಿಎ 6ನೇ ಸೆಮಿಸ್ಟರ್ನ ಕೊನೆಯ ಪರೀಕ್ಷೆ ಇತ್ತು. ಆದರೆ, ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದರಿಂದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊಂದಲ ಸೃಷ್ಟಿಯಾಯಿತು.<br /> <br /> ಕೈ ಬರಹದಲ್ಲಿದ್ದ ಪ್ರಶ್ನೆಪತ್ರಿಕೆ ಮಾಧ್ಯಮ ಪ್ರತಿನಿಧಿಗಳಿಗೆ ಲಭ್ಯವಾಗಿತ್ತಲ್ಲದೇ, ಬಹಿರಂಗಗೊಂಡಿದ್ದ ಪ್ರಶ್ನೆಪತ್ರಿಕೆಯನ್ನು ಕಾಲೇಜಿನ ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ ಅವರಿಗೂ ಪ್ರದರ್ಶಿಸಲಾಯಿತು.<br /> <br /> ನಂತರ, ವಿಶ್ವವಿದ್ಯಾಲಯದಿಂದ ರವಾನೆಯಾಗಿದ್ದ ಪ್ರಶ್ನೆ ಪತ್ರಿಕೆ ಲಕೋಟೆಯನ್ನು ಪ್ರಾಚಾರ್ಯ ತಿಮ್ಮಾರೆಡ್ಡಿ ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿಯೇ ತೆರೆದರಲ್ಲದೇ, ಕೈ ಬರಹದಲ್ಲಿದ್ದ ಪ್ರಶ್ನೆ ಪತ್ರಿಕೆಯೊಂದಿಗೆ ತುಲನೆ ಸಹ ಮಾಡಿದರು.<br /> <br /> ವಿಶ್ವವಿದ್ಯಾಲಯದಿಂದ ಬಂದಿದ್ದ ಪ್ರಶ್ನೆ ಪತ್ರಿಕೆಯಲ್ಲಿದ್ದ ಶೇ 80ರಷ್ಟು ಪ್ರಶ್ನೆಗಳು ಕೈ ಬರಹದಲ್ಲಿದ್ದ ಬಹಿರಂಗಗೊಂಡಿದ್ದ ಪ್ರಶ್ನೆ ಪತ್ರಿಕೆಯಲ್ಲಿ ಇರುವುದು ಸಹ ಪ್ರಾಚಾರ್ಯರಿಗೆ ಮನದಟ್ಟಾಯಿತು.<br /> <br /> ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಿಮ್ಮಾರೆಡ್ಡಿ, ಸದರಿ ಪ್ರಶ್ನೆ ಪತ್ರಿಕೆ ನಮ್ಮ ಕಾಲೇಜಿನಲ್ಲಿ ಬಹಿರಂಗಗೊಂಡಿಲ್ಲ ಎಂದು ಹೇಳಿದರು.<br /> `ಜಿಲ್ಲಾ ಸಶಸ್ತ್ರ ಪಡೆ ಪೊಲೀಸರ ಕಾವಲು ಇರುವ ಕೊಠಡಿಯಲ್ಲಿ ಸದರಿ ಪ್ರಶ್ನೆ ಪತ್ರಿಕೆಗಳನ್ನು ಇರಿಸಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಕಾಲೇಜಿನಲ್ಲಿ ಬಹಿರಂಗಗೊಂಡಿಲ್ಲ' ಎಂದೂ ಹೇಳಿದರು.<br /> <br /> ಈ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತರಲಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗೊಂಡಿರುವ ಹಿನ್ನೆಲೆಯಲ್ಲಿ ಸದರಿ ವಿಷಯದ ಮರು ಪರೀಕ್ಷೆಯನ್ನು ಜೂ. 11ರಂದು ಬೆಳಿಗ್ಗೆ 9 ಗಂಟೆಗೆ ನಡೆಸುವಂತೆ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ರಂಗರಾಜ ವನದುರ್ಗ ಸೂಚನೆ ನೀಡಿದ್ದಾರೆ. ಈ ವಿಷಯವನ್ನು ಬಿಎ 6ನೇ ಸೆಮಿಸ್ಟರ್ನ 15 ಜನ ವಿದ್ಯಾರ್ಥಿಗಳ ಗಮನಕ್ಕೂ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>