<p>ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನವನ್ನು ವಶಕ್ಕೆ ತೆಗೆದುಕೊಂಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ ಸಂರಕ್ಷಣಾ ಸಮಿತಿ ಸದಸ್ಯರು ನಡೆಸುತ್ತಿರುವ ಧರಣಿಯನ್ನು ಭಾನುವಾರವೂ ಮುಂದುವರಿಸಿದರು.<br /> <br /> ಇತಿಹಾಸ ಪ್ರಸಿದ್ಧ ಈ ದೇವಾಲಯಕ್ಕೆ ವಾರ್ಷಿಕ ಎರಡು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಬಡಮಕ್ಕಳ ಶಿಕ್ಷಣ ಸೇರಿದಂತೆ ಉಪಯುಕ್ತ ಕೆಲಸಗಳಿಗೆ ಆ ಹಣವನ್ನು ಬಳಸಿಕೊಳ್ಳಲಾಗುತ್ತಿದೆ. <br /> <br /> ಆದ್ದರಿಂದ ಸರ್ಕಾರ ಕೂಡಲೇ ಈ ಕ್ರಮವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ದೇವಾಲಯದ ಆಡಳಿತಕ್ಕೆ ನೋಟಿಸ್ ಕೂಡ ನೀಡದೇ ಸರ್ಕಾರ ಏಕಾಏಕಿ ಈ ರೀತಿ ಮಾಡಿರುವುದು ಸರಿಯಲ್ಲ. ಇದು ಧಾರ್ಮಿಕ ಭಾವನೆಗಳಿಗೆ ವಿರುದ್ಧವಾದ ಕೃತ್ಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಸರ್ಕಾರದ ಈ ನಿರ್ಣಯದ ಹಿಂದೆ ಖಾಸಗಿಯವರ ಕೈವಾಡ ಇರುವಂತೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನವನ್ನು ವಶಕ್ಕೆ ತೆಗೆದುಕೊಂಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ ಸಂರಕ್ಷಣಾ ಸಮಿತಿ ಸದಸ್ಯರು ನಡೆಸುತ್ತಿರುವ ಧರಣಿಯನ್ನು ಭಾನುವಾರವೂ ಮುಂದುವರಿಸಿದರು.<br /> <br /> ಇತಿಹಾಸ ಪ್ರಸಿದ್ಧ ಈ ದೇವಾಲಯಕ್ಕೆ ವಾರ್ಷಿಕ ಎರಡು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಬಡಮಕ್ಕಳ ಶಿಕ್ಷಣ ಸೇರಿದಂತೆ ಉಪಯುಕ್ತ ಕೆಲಸಗಳಿಗೆ ಆ ಹಣವನ್ನು ಬಳಸಿಕೊಳ್ಳಲಾಗುತ್ತಿದೆ. <br /> <br /> ಆದ್ದರಿಂದ ಸರ್ಕಾರ ಕೂಡಲೇ ಈ ಕ್ರಮವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ದೇವಾಲಯದ ಆಡಳಿತಕ್ಕೆ ನೋಟಿಸ್ ಕೂಡ ನೀಡದೇ ಸರ್ಕಾರ ಏಕಾಏಕಿ ಈ ರೀತಿ ಮಾಡಿರುವುದು ಸರಿಯಲ್ಲ. ಇದು ಧಾರ್ಮಿಕ ಭಾವನೆಗಳಿಗೆ ವಿರುದ್ಧವಾದ ಕೃತ್ಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಸರ್ಕಾರದ ಈ ನಿರ್ಣಯದ ಹಿಂದೆ ಖಾಸಗಿಯವರ ಕೈವಾಡ ಇರುವಂತೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>