<p><strong>ಪಟ್ನಾ (ಪಿಟಿಐ):</strong> ಸರನ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 23 ಮಕ್ಕಳು ಸಾವನ್ನಪ್ಪಿದ ದುರಂತಕ್ಕೆ ಶಾಲೆಯ ಪ್ರಾಂಶುಪಾಲರಾದ ಮೀನಾ ದೇವಿ ಅವರ ಕರ್ತವ್ಯಲೋಪವೇ ಕಾರಣ ಉನ್ನತ ಮಟ್ಟದ ತನಿಖಾ ತಂಡವು ಆರೋಪಿಸಿದೆ.<br /> <br /> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದರು.<br /> `ಪ್ರಾಂಶುಪಾಲರು ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲವೆಂದು ವರದಿಯಲ್ಲಿ ತಿಳಿಸಲಾಗಿದೆ' ಎಂದು ತನಿಖಾ ತಂಡದ ಮೂಲಗಳು ಹೇಳಿವೆ.<br /> <br /> <strong>ಗೋವಾ: ವಿದ್ಯಾರ್ಥಿಗಳು ಅಸ್ವಸ್ಥ<br /> ಪಣಜಿ (ಪಿಟಿಐ):</strong> ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಗೋವಾದ ಉಸ್ಗಾಂವ್ ಎಂಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.<br /> <br /> ಇಲ್ಲಿನ ಸೇಂಟ್ ಜೋಸೆಫ್ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಸಮೀಪದ ಪಾಂಡಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> `ಕಲಬೆರಕೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದು ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪರಿಸ್ಥಿತಿಯನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದ್ದು, ವರದಿ ಬಂದ ನಂತರ ಹೆಚ್ಚಿನ ವಿವರ ಗೊತ್ತಾ ಞಗಲಿದೆ' ಎಂದು ಶಿಕ್ಷಣ ಇಲಾಖೆಯ ನಿರ್ದೇಶಕ ಅನಿಲ್ ಪವಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> <strong>ಸಚಿವೆ ತಪಾಸಣೆ<br /> ಚೆನ್ನೈ (ಪಿಟಿಐ):</strong> ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಯ ಬಳಿಕ, ಚೆನ್ನೈ ಹಾಗೂ ತಿರುವಳ್ಳೂರು ಪಟ್ಟಣದ ಬಿಸಿಯೂಟ ಕೇಂದ್ರಗಳಿಗೆ ಸಮಾಜ ಕಲ್ಯಾಣ ಸಚಿವೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಸಚಿವೆ ಅಂಗನವಾಡಿಯ ಬಿಸಿಯೂಟ ಕೇಂದ್ರವೊಂದಕ್ಕೆ ಭೇಟಿ ನೀಡಿದಾಗ ಅದು ಇನ್ನೂ ಆರಂಭವಾಗಿರಲಿಲ್ಲ. ಈ ಸಂಬಂಧ ಮೂವರನ್ನು ಅಮಾನತು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಪಿಟಿಐ):</strong> ಸರನ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 23 ಮಕ್ಕಳು ಸಾವನ್ನಪ್ಪಿದ ದುರಂತಕ್ಕೆ ಶಾಲೆಯ ಪ್ರಾಂಶುಪಾಲರಾದ ಮೀನಾ ದೇವಿ ಅವರ ಕರ್ತವ್ಯಲೋಪವೇ ಕಾರಣ ಉನ್ನತ ಮಟ್ಟದ ತನಿಖಾ ತಂಡವು ಆರೋಪಿಸಿದೆ.<br /> <br /> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಪ್ರಕರಣದ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದರು.<br /> `ಪ್ರಾಂಶುಪಾಲರು ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲವೆಂದು ವರದಿಯಲ್ಲಿ ತಿಳಿಸಲಾಗಿದೆ' ಎಂದು ತನಿಖಾ ತಂಡದ ಮೂಲಗಳು ಹೇಳಿವೆ.<br /> <br /> <strong>ಗೋವಾ: ವಿದ್ಯಾರ್ಥಿಗಳು ಅಸ್ವಸ್ಥ<br /> ಪಣಜಿ (ಪಿಟಿಐ):</strong> ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಗೋವಾದ ಉಸ್ಗಾಂವ್ ಎಂಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.<br /> <br /> ಇಲ್ಲಿನ ಸೇಂಟ್ ಜೋಸೆಫ್ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಸಮೀಪದ ಪಾಂಡಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> `ಕಲಬೆರಕೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದು ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪರಿಸ್ಥಿತಿಯನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದ್ದು, ವರದಿ ಬಂದ ನಂತರ ಹೆಚ್ಚಿನ ವಿವರ ಗೊತ್ತಾ ಞಗಲಿದೆ' ಎಂದು ಶಿಕ್ಷಣ ಇಲಾಖೆಯ ನಿರ್ದೇಶಕ ಅನಿಲ್ ಪವಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> <strong>ಸಚಿವೆ ತಪಾಸಣೆ<br /> ಚೆನ್ನೈ (ಪಿಟಿಐ):</strong> ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಯ ಬಳಿಕ, ಚೆನ್ನೈ ಹಾಗೂ ತಿರುವಳ್ಳೂರು ಪಟ್ಟಣದ ಬಿಸಿಯೂಟ ಕೇಂದ್ರಗಳಿಗೆ ಸಮಾಜ ಕಲ್ಯಾಣ ಸಚಿವೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಸಚಿವೆ ಅಂಗನವಾಡಿಯ ಬಿಸಿಯೂಟ ಕೇಂದ್ರವೊಂದಕ್ಕೆ ಭೇಟಿ ನೀಡಿದಾಗ ಅದು ಇನ್ನೂ ಆರಂಭವಾಗಿರಲಿಲ್ಲ. ಈ ಸಂಬಂಧ ಮೂವರನ್ನು ಅಮಾನತು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>