<p><strong>ಬೀದರ್:</strong> ಒಂದು ಮರದ ಉಪಯೋಗ, ಅದು ಕೊಡುವ ಆಮ್ಲಜನಕ ಲೆಕ್ಕ ಹಾಕಿದರೆ ಅದರ ಮೌಲ್ಯ 50 ಲಕ್ಷಕ್ಕೂ ಅಧಿಕವಾಗಿದೆ ಎಂದು ಬಿ.ವಿ. ಭೂಮರೆಡ್ಡಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್ ಅಭಿಪ್ರಾಯಪಟ್ಟರು.</p>.<p>ಶರಣ ಉದ್ಯಾನದಲ್ಲಿ ಭಾನುವಾರ `ವಿಶ್ವ ಪರಿಸರ ದಿನ~ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪರಿಸರ ಬಹುಪಯೋಗಿ. ಪರಿಸರದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ಸಂರಕ್ಷಿಸಲು ಮರಗಳನ್ನು ಬೆಳೆಸುವಂತೆ ಸಲಹೆ ಮಾಡಿದರು.</p>.<p>ಪರಿಸರ ಮಾಲಿನ್ಯದಿಂದಾಗಿ ಪ್ರಕೃತಿ ಸಮತೋಲನ ತಪ್ಪುತ್ತಿದೆ. ಎಲ್ಲರೂ ಜಾಗೃತರಾಗಿ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸಬೇಕು. ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ಉದ್ಯಮಿ ಬಸವರಾಜ ಧನ್ನೂರು ಕಿವಿಮಾತು ಹೇಳಿದರು.</p>.<p>ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಉಸಿರಾಟಲು ಆಮ್ಲಜನಕ ಪೆಟ್ಟಿಗೆ ಬೆನ್ನಿಗೆ ಕಟ್ಟಿಕೊಂಡು ಓಡಾಡಬೇಕಾದೀತು ಎಂದು ಸಾನ್ನಿಧ್ಯ ವಹಿಸಿದ್ದ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಅಕ್ಕ ಅನ್ನಪೂರ್ಣ ಆತಂಕಿಸಿದರು. ಡಾ. ಗಂಗಾಂಬಿಕೆ ಅಕ್ಕ ನೇತೃತ್ವ ವಹಿಸಿದ್ದರು. ರಮೇಶ ಮಠಪತಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಒಂದು ಮರದ ಉಪಯೋಗ, ಅದು ಕೊಡುವ ಆಮ್ಲಜನಕ ಲೆಕ್ಕ ಹಾಕಿದರೆ ಅದರ ಮೌಲ್ಯ 50 ಲಕ್ಷಕ್ಕೂ ಅಧಿಕವಾಗಿದೆ ಎಂದು ಬಿ.ವಿ. ಭೂಮರೆಡ್ಡಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್ ಅಭಿಪ್ರಾಯಪಟ್ಟರು.</p>.<p>ಶರಣ ಉದ್ಯಾನದಲ್ಲಿ ಭಾನುವಾರ `ವಿಶ್ವ ಪರಿಸರ ದಿನ~ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪರಿಸರ ಬಹುಪಯೋಗಿ. ಪರಿಸರದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ಸಂರಕ್ಷಿಸಲು ಮರಗಳನ್ನು ಬೆಳೆಸುವಂತೆ ಸಲಹೆ ಮಾಡಿದರು.</p>.<p>ಪರಿಸರ ಮಾಲಿನ್ಯದಿಂದಾಗಿ ಪ್ರಕೃತಿ ಸಮತೋಲನ ತಪ್ಪುತ್ತಿದೆ. ಎಲ್ಲರೂ ಜಾಗೃತರಾಗಿ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸಬೇಕು. ಪ್ಲಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ಉದ್ಯಮಿ ಬಸವರಾಜ ಧನ್ನೂರು ಕಿವಿಮಾತು ಹೇಳಿದರು.</p>.<p>ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಉಸಿರಾಟಲು ಆಮ್ಲಜನಕ ಪೆಟ್ಟಿಗೆ ಬೆನ್ನಿಗೆ ಕಟ್ಟಿಕೊಂಡು ಓಡಾಡಬೇಕಾದೀತು ಎಂದು ಸಾನ್ನಿಧ್ಯ ವಹಿಸಿದ್ದ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಅಕ್ಕ ಅನ್ನಪೂರ್ಣ ಆತಂಕಿಸಿದರು. ಡಾ. ಗಂಗಾಂಬಿಕೆ ಅಕ್ಕ ನೇತೃತ್ವ ವಹಿಸಿದ್ದರು. ರಮೇಶ ಮಠಪತಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>