<p><strong>ಬೆಂಗಳೂರು</strong>: ‘ಪ್ರಾಚೀನ ಹಾಗೂ ಸಮೃದ್ಧವಾದ ಪ್ರಾಕೃತ ಭಾಷೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಬೇಕು’ ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಒತ್ತಾಯಿಸಿದರು.<br /> <br /> ಸಕಲ ಜೈನ ಸಮಾಜವು ಕರ್ನಾಟಕ ಜೈನ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ದೇಶದಲ್ಲಿ 14 ಸಂಸ್ಕೃತ ವಿಶ್ವವಿದ್ಯಾ-ಲಯಗಳಿವೆ. ಶ್ರೀಸಾಮಾನ್ಯರಲ್ಲಿ ಬಳಕೆಯಲ್ಲಿದ್ದ ಪ್ರಾಕೃತ ಭಾಷೆಯ ವಿಶ್ವವಿದ್ಯಾಲಯವೂ ರಾಜ್ಯದಲ್ಲಿ ಸ್ಥಾಪನೆಯಾಗಬೇಕು. ಈ ದಿಸೆಯಲ್ಲಿ ಸರ್ಕಾರ ಚಿಂತನೆ ನಡೆಸಬೇಕು’ ಎಂದರು.<br /> ‘ಬುದ್ಧ ಹಾಗೂ ಮಹಾವೀರರ ಬೋಧನೆಗಳು ಪ್ರಾಕೃತ ಭಾಷೆಯಲ್ಲಿದೆ. ಭಾರತೀಯ ಸಂಸ್ಕೃತಿಯ ಸಾರ ಅಡಗಿರುವ ಪ್ರಾಕೃತ ಭಾಷೆಯ ಅಧ್ಯಯನಕ್ಕೂ ವಿಶ್ವವಿದ್ಯಾಲಯದ ಅಗತ್ಯ ಎದ್ದುಕಾಣುತ್ತಿದೆ’ ಎಂದರು.<br /> <br /> ‘ಲ್ಯಾಟಿನ್, ಗ್ರೀಕ್, ಹೀಬ್ರೂ ಭಾಷೆಗಳು ಪ್ರಸ್ತುತ ವ್ಯವಹಾರಿಕ ವಲಯದಲ್ಲಿ ಅಸ್ತಿತ್ವದಲ್ಲಿ ಇಲ್ಲದೇ ಇದ್ದರೂ, ಆಸಕ್ತರು ಕಲಿಯಲು ಅವಕಾಶ ಮಾಡಿಕೊಡಲಾಗಿದೆ. ಪ್ರಾಚೀನ ಉತ್ಕೃಷ್ಟ ಗ್ರಂಥಗಳು ಪ್ರಾಕೃತ ಭಾಷೆಯಲ್ಲಿದ್ದೂ ಅವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಪ್ರಾಕೃತ ಭಾಷೆಯ ಅರಿವಿನ ಅಗತ್ಯವಿದೆ’ ಎಂದರು.<br /> <br /> ‘ಜೈನ ಸಮುದಾಯದವರೆಲ್ಲರೂ ಶ್ರೀಮಂತರು ಎಂಬ ತಪ್ಪು ಕಲ್ಪನೆಯಿದೆ. ವಿಜಾಪುರ, ಬಾಗಲಕೋಟೆ, ಚಿಕ್ಕೋಡಿ, ಕೋಲಾರ ಸೇರಿದಂತೆ ಗ್ರಾಮೀಣ ಪ್ರದೇಶಗಳ ಜೈನ ಸಮುದಾಯದಲ್ಲಿರುವ ಬಡವರ ಸಮಗ್ರ ಅಭಿವೃದ್ಧಿಯಾಗಬೇಕು’ ಎಂದರು.<br /> <br /> ‘ಸುಶಿಕ್ಷಿತ ಸಮುದಾಯಗಳಲ್ಲಿ ಜೈನ ಸಮುದಾಯಕ್ಕೆ ಮೊದಲ ಸ್ಥಾನ ದೊರೆಯುತ್ತದೆ. ಸಚಿವ ಕೆ.ರೆಹಮಾನ್ ಖಾನ್ ಅವರ ಪ್ರಯತ್ನದಿಂದಾಗಿ ಅಲ್ಪಸಂಖ್ಯಾತ ವರ್ಗಕ್ಕೆ ಜೈನರು ಸೇರ್ಪಡೆಗೊಂಡಿರುವುದು ಸಂತಸದ ವಿಚಾರ’ ಎಂದು ಶ್ಲಾಘಿಸಿದರು.<br /> <br /> ಸನ್ಮಾನ ಸ್ವೀಕರಿಸಿ ಮಾತನಾಡಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಖಾತೆ ಸಚಿವ ಕೆ.ರೆಹಮಾನ್ಖಾನ್, ‘ಹಲವು ವರ್ಷಗಳ ಹೋರಾಟದ ಫಲವಾಗಿ ಜೈನರು ಕೊನೆಗೂ ಅಲ್ಪಸಂಖ್ಯಾತ ಸಮುದಾಯಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ’ ಎಂದರು.<br /> <br /> ‘ಅಲ್ಪಸಂಖ್ಯಾತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಬೇಕು. ಆಗ ಮಾತ್ರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಾಚೀನ ಹಾಗೂ ಸಮೃದ್ಧವಾದ ಪ್ರಾಕೃತ ಭಾಷೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಬೇಕು’ ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಒತ್ತಾಯಿಸಿದರು.<br /> <br /> ಸಕಲ ಜೈನ ಸಮಾಜವು ಕರ್ನಾಟಕ ಜೈನ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ‘ದೇಶದಲ್ಲಿ 14 ಸಂಸ್ಕೃತ ವಿಶ್ವವಿದ್ಯಾ-ಲಯಗಳಿವೆ. ಶ್ರೀಸಾಮಾನ್ಯರಲ್ಲಿ ಬಳಕೆಯಲ್ಲಿದ್ದ ಪ್ರಾಕೃತ ಭಾಷೆಯ ವಿಶ್ವವಿದ್ಯಾಲಯವೂ ರಾಜ್ಯದಲ್ಲಿ ಸ್ಥಾಪನೆಯಾಗಬೇಕು. ಈ ದಿಸೆಯಲ್ಲಿ ಸರ್ಕಾರ ಚಿಂತನೆ ನಡೆಸಬೇಕು’ ಎಂದರು.<br /> ‘ಬುದ್ಧ ಹಾಗೂ ಮಹಾವೀರರ ಬೋಧನೆಗಳು ಪ್ರಾಕೃತ ಭಾಷೆಯಲ್ಲಿದೆ. ಭಾರತೀಯ ಸಂಸ್ಕೃತಿಯ ಸಾರ ಅಡಗಿರುವ ಪ್ರಾಕೃತ ಭಾಷೆಯ ಅಧ್ಯಯನಕ್ಕೂ ವಿಶ್ವವಿದ್ಯಾಲಯದ ಅಗತ್ಯ ಎದ್ದುಕಾಣುತ್ತಿದೆ’ ಎಂದರು.<br /> <br /> ‘ಲ್ಯಾಟಿನ್, ಗ್ರೀಕ್, ಹೀಬ್ರೂ ಭಾಷೆಗಳು ಪ್ರಸ್ತುತ ವ್ಯವಹಾರಿಕ ವಲಯದಲ್ಲಿ ಅಸ್ತಿತ್ವದಲ್ಲಿ ಇಲ್ಲದೇ ಇದ್ದರೂ, ಆಸಕ್ತರು ಕಲಿಯಲು ಅವಕಾಶ ಮಾಡಿಕೊಡಲಾಗಿದೆ. ಪ್ರಾಚೀನ ಉತ್ಕೃಷ್ಟ ಗ್ರಂಥಗಳು ಪ್ರಾಕೃತ ಭಾಷೆಯಲ್ಲಿದ್ದೂ ಅವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಪ್ರಾಕೃತ ಭಾಷೆಯ ಅರಿವಿನ ಅಗತ್ಯವಿದೆ’ ಎಂದರು.<br /> <br /> ‘ಜೈನ ಸಮುದಾಯದವರೆಲ್ಲರೂ ಶ್ರೀಮಂತರು ಎಂಬ ತಪ್ಪು ಕಲ್ಪನೆಯಿದೆ. ವಿಜಾಪುರ, ಬಾಗಲಕೋಟೆ, ಚಿಕ್ಕೋಡಿ, ಕೋಲಾರ ಸೇರಿದಂತೆ ಗ್ರಾಮೀಣ ಪ್ರದೇಶಗಳ ಜೈನ ಸಮುದಾಯದಲ್ಲಿರುವ ಬಡವರ ಸಮಗ್ರ ಅಭಿವೃದ್ಧಿಯಾಗಬೇಕು’ ಎಂದರು.<br /> <br /> ‘ಸುಶಿಕ್ಷಿತ ಸಮುದಾಯಗಳಲ್ಲಿ ಜೈನ ಸಮುದಾಯಕ್ಕೆ ಮೊದಲ ಸ್ಥಾನ ದೊರೆಯುತ್ತದೆ. ಸಚಿವ ಕೆ.ರೆಹಮಾನ್ ಖಾನ್ ಅವರ ಪ್ರಯತ್ನದಿಂದಾಗಿ ಅಲ್ಪಸಂಖ್ಯಾತ ವರ್ಗಕ್ಕೆ ಜೈನರು ಸೇರ್ಪಡೆಗೊಂಡಿರುವುದು ಸಂತಸದ ವಿಚಾರ’ ಎಂದು ಶ್ಲಾಘಿಸಿದರು.<br /> <br /> ಸನ್ಮಾನ ಸ್ವೀಕರಿಸಿ ಮಾತನಾಡಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಖಾತೆ ಸಚಿವ ಕೆ.ರೆಹಮಾನ್ಖಾನ್, ‘ಹಲವು ವರ್ಷಗಳ ಹೋರಾಟದ ಫಲವಾಗಿ ಜೈನರು ಕೊನೆಗೂ ಅಲ್ಪಸಂಖ್ಯಾತ ಸಮುದಾಯಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ’ ಎಂದರು.<br /> <br /> ‘ಅಲ್ಪಸಂಖ್ಯಾತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಬೇಕು. ಆಗ ಮಾತ್ರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>